ವಿಜಯನಗರ | ತಿಮ್ಮಾಪೂರ, ಎನ್‌ ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Date:

ಹಲವು ಬಾರಿ ಸಚಿವರಾಗಿ ಉತ್ತಮ ಆಡಳಿತ ನೀಡಿರುವ ಮತ್ತು ಮಾದಿಗ ಸಮುದಾಯದ ಹಿರಿಯ ರಾಜಕಾರಣಿ ಆರ್.ಬಿ ತಿಮ್ಮಾಪೂರ ಮತ್ತು ಕೂಡ್ಲಿಗಿ ಶಾಸಕ ಡಾ. ಎನ್.ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಎಸ್‌ಸಿ ಮಹಿಳಾ ಘಟಕದ ವಿಜಯನಗರ ಜಿಲ್ಲಾಧ್ಯಕ್ಷೆ ವಿಶಾಲಾಕ್ಷಿ ರಾಜಣ್ಣ ಗುಡೆಕೋಟೆ ಒತ್ತಾಯಿಸಿದರು.

ಹೊಸಪೇಟೆಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, “ಆರ್.ಬಿ ತಿಮ್ಮಾಪೂರ ಅವರು ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ನಾನಾ ಖಾತೆಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಎಡಗೈ ಸಮುದಾಯದ ಪ್ರಭಾವಿ ಮುಖಂಡರಾಗಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಮಾದಿಗ ಸಮುದಾಯಕ್ಕೆ ಅವಕಾಶ ಒದಗಿಸಬೇಕು” ಎಂದು ಆಗ್ರಹಿಸಿದರು.

“ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಅಭೂತಪೂರ್ವ ಗೆಲುವಿನೊಂದಿಗೆ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತಂದುಕೊಟ್ಟಿರುವ ಎನ್.ಟಿ ಶ್ರೀನಿವಾಸ್‌ ಅವರಿಗೆ ವಿಜಯನಗರ ಜಿಲ್ಲೆಯ ಪ್ರಾತಿನಿಧ್ಯದಲ್ಲಿ ಸಚಿವಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಬಿರುಗಾಳಿ ಸಹಿತ ಭಾರೀ ಮಳೆ; ಮರ ಬಿದ್ದು ಸ್ಕೂಟಿ ಸವಾರ ಸಾವು

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್‌ಟಿ ಘಟಕದ ವಿಜಯನಗರ ಜಿಲ್ಲಾ ಉಪಾಧ್ಯಕ್ಷ ಹಾಗೂ ವಕೀಲ ಡಿ ಎಚ್ ದುರುಗೇಶ್, ಎನ್ಎಸ್‌ಯುಐ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಕೆ ತಿಪ್ಪೇಸ್ವಾಮಿ, ಕಾಂಗ್ರೆಸ್ ಎಸ್‌ಸಿ ಘಟಕದ ತಾಲೂಕು ಅಧ್ಯಕ್ಷ ಬಿ ನಾಗರಾಜ, ಗ್ರಾಮ ಪಂಚಾಯಿತಿ ಸದಸ್ಯ ಬಿ ಸೋಮಶೇಖರ, ಮುಖಂಡರಾದ ಮನೋಹರ ಹೆಗಡೆ, ಪ್ರಶಾಂತ್ ಜಿಲ್ಲೆಯ ಹೆಗ್ಗಾಳ್, ವೆಂಕಟೇಶ್ ಸೂಲದಹಳ್ಳಿ, ಪ್ರಕಾಶ್ ಹೆಗ್ದಾಳ್, ಜೆ ರವಿಕುಮಾರ್, ಹನುಮಂತ ಗುಡೇಕೋಟೆ, ಓಬಳಶೇಟ್ಟಿಹಳ್ಳಿ ಕೊಟ್ರೇಶ್‌ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...