ದಕ್ಷಿಣ ಕನ್ನಡ | ಪ್ರಭಾಕರ್ ಭಟ್ ವಿರುದ್ಧ ಹೆಚ್ಚಿದ ಆಕ್ರೋಶ; ಬಂಧನಕ್ಕೆ ಸಮಾನ ಮನಸ್ಕರ ಆಗ್ರಹ

Date:

Advertisements

ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ಸಂಘಪರಿವಾರದ ಮುಖಂಡ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳಿರುವ ಯಾವುದೇ ಜಾತಿ ಧರ್ಮದವರು ಇದನ್ನ ಒಪ್ಪಲು ಸಾಧ್ಯವಿಲ್ಲ ಎಂದು ಸಮಾನ ಮನಸ್ಕರ ಸಂಘಟನೆಗಳು ಹೇಳಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್‌, ಸಿಪಿಐಎಂ, ದಸಂಸ, ರೈತ ಸಂಘ ಸೇರಿದಂತೆ ಸಮಾನ ಮನಸ್ಕರ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಪ್ರಭಾಕರ್ ಭಟ್ ಹೇಳಿಕೆ ಸಮಗ್ರ ಮಹಿಳೆಯರಿಗೆ ಮಾಡಿದ ಅವಮಾನ. ಮಹಿಳೆಯರ ಮನಸ್ಸಿಗೆ ನೋವಾಗುವ ಆತನ ಹೇಳಿಕೆಯನ್ನು ನಾವು ಖಂಡಿಸುತ್ತೇವೆ” ಎಂದು ಮಾಜಿ ಶಾಸಕ ರಮಾನಾಥ್ ರೈ ಹೇಳಿದ್ದಾರೆ.

“ಪ್ರಭಾಕರ್ ಭಟ್ ಅನೇಕ ಬಾರಿ ಪ್ರಚೋದನಾಕಾರಿ ಮಾತುಗಳನ್ನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಬಳಿಕ, ಇಂತಹ ಕೋಮುವಾದಿಗಳು ಏನು ಮಾಡಬೇಕೆಂದು ಗೊತ್ತಾಗದಂತಾಗಿದ್ದಾರೆ. ಹಾಗಾಗಿ, ಕೋಮು ಪ್ರಚೋದನೆ ಮಾಡುವ ಭಾಷಣ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಆತನನ್ನು ಬಂಧಿಸಬೇಕೆಂದು ಎಲ್ಲೆಡೆ ಒತ್ತಡಗಳಿವೆ. ತಡಮಾಡದೆ ಆತನನ್ನು ಬಂಧಿಸಬೇಕು. ಆತನ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಹಿಂದುಗಳ ಹೆಣ್ಣು ಮಕ್ಕಳ ಡ್ರೆಸ್ ಕೋಡ್ಅನ್ನ ಅಪಮಾನಿಸುವ ಕೆಲಸವನ್ನೂ ಪ್ರಭಾಕರ್ ಭಟ್ ಮಾಡಿದ್ದಾರೆ. ಎಲ್ಲ ಭಾಷೆ, ಸಮುದಾಯ, ಧರ್ಮದ ಜನರು ಆತನ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X