ಮತದಾರರ ಹಕ್ಕುಗಳ ರಕ್ಷಣೆಗೆ ಒತ್ತಾಯ: ಹೆಗ್ಗಡದೇವನಕೋಟೆಯಲ್ಲಿ ಎಸ್‌ಐಆರ್ ವಿರೋಧಿ ಸಾರ್ವಜನಿಕ ಸಭೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ಅಂಬೇಡ್ಕರ್ ಭವನದಲ್ಲಿ ಎಸ್‌ಐಆರ್ ವಿರೋಧಿ ಕರ್ನಾಟಕ ಸಂಘಟನೆಯ ವತಿಯಿಂದ ಸಾರ್ವಜನಿಕ ಸಭೆ ನಡೆಯಿತು. ಸಭೆಯಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಉಂಟಾಗುತ್ತಿರುವ ಸಮಸ್ಯೆಗಳು, ಮತದಾರರ ಹಕ್ಕುಗಳ ಮೇಲೆ ಅದರ ಪರಿಣಾಮಗಳು ಹಾಗೂ ಸಂಘಟನೆಯ ಪ್ರಮುಖ ಆಗ್ರಹಗಳ ಕುರಿತು ಸಾರ್ವಜನಿಕರೊಂದಿಗೆ ಸಂವಾದ ನಡೆಸಲಾಯಿತು.

- Advertisement -

ಸಭೆಯಲ್ಲಿ ಮಾತನಾಡಿದ ಮುಖಂಡರು, ಭಾರತದ ಸಂವಿಧಾನದ 324ನೇ ವಿಧಿಯನ್ವಯ ತನ್ನ ಕರ್ತವ್ಯಗಳನ್ನು ನಿರ್ವಹಿಸಬೇಕಾದ ಭಾರತೀಯ ಚುನಾವಣಾ ಆಯೋಗ (ECI) ಮತದಾರರ ಪಟ್ಟಿಯ ನಿರ್ವಹಣೆಯಲ್ಲಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದರು. ಎಲ್ಲ ಅರ್ಹ ನಾಗರಿಕರನ್ನು ಒಳಗೊಂಡ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಎಸ್‌ಐಆರ್ ಪ್ರಕ್ರಿಯೆ ವಿಫಲವಾಗಿದ್ದು, ಕಳೆದ ಒಂದು ವರ್ಷದ ಅನುಭವ ಅದರ ಅಸಮರ್ಥತೆಯನ್ನು ಬಯಲಿಗೆಳೆದಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳು ಕೈಬಿಡುವ ಸಾಧ್ಯತೆ, ದಾಖಲೆಗಳ ಪರಿಶೀಲನೆಯಲ್ಲಿ ಉಂಟಾಗುತ್ತಿರುವ ಗೊಂದಲ ಹಾಗೂ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಪ್ರಜಾಪ್ರಭುತ್ವದ ಮೂಲಾಧಾರವಾದ ಮತದಾನದ ಹಕ್ಕು ಯಾವುದೇ ಕಾರಣಕ್ಕೂ ಕಸಿಯಲ್ಪಡಬಾರದು ಎಂದು ಒತ್ತಾಯಿಸಲಾಯಿತು.

ಇದೇ ವೇಳೆ, ಮತದಾರರ ಮತ್ತು ನಾಗರಿಕರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ದೇಶದ ಸುಪ್ರೀಂ ಕೋರ್ಟ್ ಬಗ್ಗೆ ಜನರಲ್ಲಿ ನಿರಾಶೆ ಮೂಡಿರುವುದಾಗಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಎಸ್‌ಐಆರ್ ಸಂಬಂಧ ಬಾಕಿ ಇರುವ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸಿ, ಮತದಾರರ ಹಕ್ಕುಗಳನ್ನು ರಕ್ಷಿಸುವಂತಹ ಸ್ಪಷ್ಟ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಬೇಕು ಎಂದು ಆಗ್ರಹಿಸಲಾಯಿತು.

ಮತದಾರರ ಪಟ್ಟಿಗಳ ನವೀಕರಣ ಪ್ರಕ್ರಿಯೆಯನ್ನು ಮುಂದುವರಿಸುವ ಮೊದಲು ಸಮಗ್ರ ಮರುಪರಿಶೀಲನೆ ನಡೆಸಿ, ಕಂಡುಬಂದಿರುವ ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು. ಈಗಾಗಲೇ ಆಗಿರುವ ತಪ್ಪುಗಳಿಂದ ತೊಂದರೆಗೊಳಗಾದ ಮತದಾರರಿಗೆ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಹುಣಸೂರು | ಕೊಟ್ಟಿಗೆ ಕಾವಲು ಹಾಡಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

ಸಭೆಯಲ್ಲಿ ಜೀವಿಕ ಸಂಘಟನೆ ಸೇರಿದಂತೆ, ವಿವಿಧ ಜನಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...