ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

Date:

Advertisements
  • ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
  • ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ

ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಸಿಂಧನೂರು ಪ್ರಗತಿಪರ ಒಕ್ಕೂಟ ಒತ್ತಾಯಿಸಿದೆ.

ನಗರದ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆ ಕೂಗಿ ಸಿಂಧನೂರು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿ.ಎಚ್. ಕಾಂಬ್ಳಿ, “ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ನಾಪತ್ತೆಯಾಗಿ ಮರುದಿನ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದ ಸಿಬಿಐ, ಆರೋಪಿ ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿ 11 ವರ್ಷಗಳ ನಂತರ ಆತನನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿದೆ. ಆದರೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ನಿಜವಾದ ಆರೋಪಿಗಳು ಯಾರು ಎನ್ನುವುದು ಇಲ್ಲಿಯವರೆಗೂ ಪತ್ತೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಸೌಜನ್ಯ ಪೋಷಕರು, ಮಾವ ಸೇರಿದಂತೆ ಸಂಬಂಧಿಕರೆಲ್ಲರೂ ಪೊಲೀಸರು, ಸಿಐಡಿ ಹಾಗೂ ಸಿಬಿಐ ತನಿಖಾಧಿಕಾರಿಗಳ ಮುಂದೆ ತಮಗೆ ಸಂಶಯವಿರುವ ಆರೋಪಿಗಳನ್ನು ಹೆಸರಿಸಿದ್ದು, ಆದರೆ ಸಿಬಿಐ ಅವರ ಹೆಸರುಗಳನ್ನು ಪ್ರಸ್ತಾಪಿಸದೇ ನೆಪಮಾತ್ರಕ್ಕೆ ನಿರಪರಾಧಿ ವ್ಯಕ್ತಿಯೊಬ್ಬರನ್ನು ಪ್ರಕರಣದಲ್ಲಿ ಸಿಲುಕಿಸಿ, ಪ್ರಭಾವಿಗಳಾದ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ” ಎಂದು ಅವರು ಕಾಂಬ್ಳಿ ಆರೋಪಿಸಿದರು ..

“ಸಿಬಿಐನ ಈ ಲೋಪವನ್ನು ರಾಜ್ಯ ಹೈಕೋರ್ಟ್ ಬಲವಾಗಿ ಟೀಕಿಸಿದ್ದು, ಛೀಮಾರಿ ಹಾಕಿದೆ. ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ 40ಕ್ಕೂ ಅಧಿಕ ಅತ್ಯಾಚಾರ, ಕೊಲೆ, ಅಪಹರಣ, ಅಸಹಜ ಸಾವು ಮುಂತಾದ ಹಲವಾರ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಅಲ್ಲಿ ನಡೆದಿರುವ ಯಾವ ಪ್ರಕರಣದಲ್ಲೂ ಅಪರಾಧಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಿದ ಉದಾಹರಣೆಗಳಿಲ್ಲ. ಬದಲಿಗೆ ಆರೋಪಿಗಳಿಗೆ ಪೊಲೀಸರೇ ರಕ್ಷಣೆ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಈ ಎಲ್ಲದರ ಸುತ್ತ ಅಲ್ಲಿನ ಬಲಿಷ್ಠ ಪಟ್ಟಭದ್ರ ಶಕ್ತಿಗಳು ಇರುವ ಅನುಮಾನವನ್ನು ಬಾಧಿತರ ಕುಟುಂಬಗಳು ವ್ಯಕ್ತಪಡಿಸಿವೆ. ಈ ಹಿಂದೆ ಅಲ್ಲಿ ನಡೆದ ವೇದವಲ್ಲಿ ಟೀಚರ್ ಅತ್ಯಾಚಾರ ಕೊಲೆ ಪ್ರಕರಣ, ಪದ್ಮಲತಾಳ ಅಪಹರಣ ಮತ್ತು ಕೊಲೆಗಳಲ್ಲೂ ನಿಜವಾದ ಅಪರಾಧಿಗಳನ್ನು ಬಂಧಿಸಲಾಗಿಲ್ಲ” ಎಂದು ಅವರು ಕಾಂಬ್ಳಿ ಕಿಡಿಕಾರಿದರು.

ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರುತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಸೌಜನ್ಯಳ ಕೊಲೆಗೆ ಸಂಬಂಧಿಸಿ ಅಲ್ಲಿಯ ಪ್ರಭಾವಿ ಧಾರ್ಮಿಕ ಕುಟುಂಬದ ಮುಖಂಡರೇ ಭಾಗಿಯಾಗಿದ್ದಾರೆ ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡಾ. ಜಯಪ್ರಕಾಶ ಬೆಟ್ಟದೂರು ಮೇಲೆ ಹಾಡಹಗಲೆ ಗುಂಡಿನ ದಾಳಿ

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ್ ಬಾದರ್ಲಿ, ಸಮದ ಚೌದ್ರಿ, ಜಮಾತ್ ಮುಖಂಡ ಹುಸೇನ್ ಸಾಬ್, ಮರಿಯಮ್ಮ ಪರಶುರಾಮ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X