ವಿಜಯನಗರ | ಕೂಲಿ ಹಣ ಬಿಡುಗಡೆ ಆಗ್ರಹ; ಪ್ರಧಾನಿಗೆ ಅಂಚೆ ಪತ್ರ ಬರೆದ ಮನೆರೇಗಾ ಕಾರ್ಮಿಕರು

Date:

Advertisements

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಬರಗಾಲ ಕಾರಣಕ್ಕೆ ಹೆಚ್ಚುವರಿ 50 ಮಾನವ ದಿನಗಳನ್ನು ಘೋಷಣೆ ಮಾಡುವುದು ಹಾಗೂ ಮನರೇಗಾ ಅಡಿಯಲ್ಲಿ 3 ತಿಂಗಳಿನಿಂದ ನಿಲ್ಲಿಸಿದ ಕೂಲಿ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಬಳ್ಳಾರಿ, ಕಂಪ್ಲಿ, ಹೊಸಪೇಟೆ ತಾಲೂಕಿನ ಮನರೇಗಾ ಕಾರ್ಮಿಕರು ಅಂಚೆ ಪತ್ರ ಚಳುವಳಿ ನಡೆಸಿದ್ದಾರೆ.

ಗ್ರಾಮೀಣ ಕೂಲಿಕಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾರ್ಮಿಕರು ಪ್ರಧಾನಿ ಮೋದಿ ಅವರಿಗೆ ಬರೆದ ಅಂಚೆ ಪತ್ರಗಳನ್ನು ಅಂಚೆ ಡಬ್ಬಿಗೆ ಹಾಕಿದ್ದಾರೆ. ವಿಜಯನಗರ ಜಿಲ್ಲೆಯ ಬಿಜಿಹಳ್ಳಿ, ಕಡ್ಡಿರಾಂಪುರ, ಬೈಲುವದ್ದಿಗೆರಿ, ಒಳ ಬಾಪೂರ, ಕಲ್ಲಳ್ಳಿ, ನಿಡಗೂರ್ತಿ, ಪಿಲೋಮನ ಹಳ್ಳಿ, ಚಿಲುಗೊಡು, ಹಂಪಾ ಪಟ್ಟಣ ಹಾಗೂ ಇನ್ನಿತರ ಗ್ರಾಮಗಳ ಕಾರ್ಮಿಕರು ಪ್ರಧಾನಿಗೆ ಅಂಚೆ ಪತ್ರ ಕಳಿಸಿದ್ದಾರೆ.

“ಮನರೇಗಾ ಯೋಜನೆಯ ಕಾನೂನಿನಂತೆ ದುಡಿದ ಕಾರ್ಮಿಕರಿಗೆ ಶೀಘ್ರವೇ ಕೂಲಿ ಹಣ ನೀಡಬೇಕು. ಆದರೆ, ಕೆಲಸ ಮಾಡಿ ಮೂರು ತಿಂಗಳಾದರೂ ಕೂಲಿ ಹಣ ನೀಡಿಲ್ಲ. ತಕ್ಷಣವೇ ಹಣ ಬಿಡುಗಡೆ ಮಾಡಬೇಕು. ಜೊತೆಗೆ, ಮೂರು ತಿಂಗಳಿನ ಬಡ್ಡಿ ಹಣವನ್ನೂ ಸೇರಿಸಿ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ಕರ್ನಾಟಕದಲ್ಲಿ ಈ ವರ್ಷ ಬರಗಾಲ ಎದುರಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಬರಗಾಲ ಘೋಷಣೆ ಮಾಡಿದೆ. ಕೇಂದ್ರ ಸರಕಾರವೂ ಬರಗಾಲ ಘೋಷಿಸಿ, ಕೂಲಿ ಕಾರ್ಮಿಕರಿಗೆ ಮನರೇಗಾದಲ್ಲಿ ಹೆಚ್ಚುವರಿ 50 ಮಾನವ ದಿನಗಳ ಕೂಲಿ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಕೂಸ ಕಾರ್ಯಕರ್ತೆ ಅಕ್ಕಮ್ಮ ಮರಬ್ಬಿಹಾಳು , ಹೊಸಪೇಟೆ ತಾಲ್ಲೂಕು ಸಂಚಾಲಕಿ ಶೈನಜಾ , ವಾಣಿ , ಸುಧಾ , ಸೇರಿದಂತೆ ನೂರಾರು ಕೂಲಿ ಕಾರ್ಮಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X