ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ.
ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಶ್ವಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್(ರಿ) ಗೌರವಾಧ್ಯಕ್ಷ ಕೆ.ಟಿ.ಶಿವಕುಮಾರ್, ಪ್ರಗತಿಪರ ಸಂಘಟನೆಗಳ ಸಂಚಾಲಕ ಶ್ರೀಕ ಶ್ರೀನಿವಾಸ್ ಮತ್ತು ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್.ಪಿ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದರು.
ವಿಶ್ವಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್( ರಿ) ಗೌರವಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವ ಬದಲು ದೇವರು ದೇವರು ದೇವರು ಎಂದು ಸ್ಮರಿಸಿದರೆ ಸ್ವರ್ಗಕ್ಕೆ ಹೋಗಬಹುದು ಎಂದು ಸಂಸತ್ ಅಧಿವೇಶನದಲ್ಲಿ ಹೇಳಿರುವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿಸುತ್ತೇವೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ
ಅಂಬೇಡ್ಕರ್ ರವರು ಈ ದೇಶದ ಎಲ್ಲಾ ಶೋಷಿತ ವರ್ಗಗಳ, ಮಹಿಳೆಯರು, ಎಲ್ಲಾ ವರ್ಗದ ಜನರಿಗೆ ಸಂವಿಧಾನದ ಮೂಲಕ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಅಂತಹ ಮಹಾನ್ ಚೇತನಕ್ಕೆ ಅಪಮಾನ ಮಾಡಿರುವ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಈ ಕೂಡಲೇ ರಾಜೀನಾಮೆ ನೀಡುವುದರ ಮೂಲಕ ಈ ದೇಶದ ಜನರಲ್ಲಿ ಕ್ಷೇಮೆ ಯಾಚಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದರು.