ಬೀದರ | ಭ್ರಷ್ಟಾಚಾರ ಆರೋಪ; ಬಿಸಿಎಂ ಜಿಲ್ಲಾ ಕಲ್ಯಾಣಾಧಿಕಾರಿ ಅಮಾನತಿಗೆ ಆಗ್ರಹ

Date:

  • ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ಒದಗಿಸದೆ ಅಕ್ರಮ ಆರೋಪ
  • ಹಿಂದೆ ಸೇವೆ ಸಲ್ಲಿಸಿದ ಎಲ್ಲ ಕಡೆಯೂ ಅಧಿಕಾರಿ ಮೇಲೆ ಭ್ರಷ್ಟಚಾರದ ಆರೋಪವಿದೆ

ಬೀದರ್ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಸದಾಶಿವ ಎಸ್ ಬಡಗೇರ್ ಅವರು ಇಲಾಖೆಯ ಆದೇಶಗಳನ್ನು ಗಾಳಿಗೆ ತೂರಿ ಅಕ್ರಮ ವ್ಯವಹಾರ ಎಸಗಿ ಸರ್ಕಾರದ ಹಣ ಲಪಟಾಯಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರಜಾಪ್ರಭುತ್ವ ಸಮಿತಿ ಆಗ್ರಹಿಸಿದೆ.

ಪ್ರಜಾಪ್ರಭುತ್ವ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ ನೇತೃತ್ವದಲ್ಲಿ ಬೀದರ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಶಿಲ್ಪಾ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರ ಬಾಲಕರ ವಸತಿ ನಿಲಯದ ಎಲ್ಲ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ಒದಗಿಸುವಂತೆ ಇಲಾಖೆ ಆಯುಕ್ತರ ಆದೇಶವಿದೆ. ಆದರೆ, ಬೀದರ್‌ ಜಿಲ್ಲೆಯ ಬಿಸಿಎಂ ಜಿಲ್ಲಾ ಕಲ್ಯಾಣಾಧಿಕಾರಿ ಸದಾಶಿವ ಬಡಗೇರ್ ಅವರು ಸರ್ಕಾರದ ಆದೇಶ ಪಾಲಿಸದೆ ಹಿಂದಿನಂತೆ ಮ್ಯಾನ್ಯುವಲ್ ಹಾಜರಾತಿ ಮೂಲಕ ವಿದ್ಯಾರ್ಥಿಗಳಿಗೆ ಆಹಾರ ಸಾಮಾಗ್ರಿ ವಿತರಿಸಿ ಸುಳ್ಳು ಬಿಲ್ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಡಿ ಜಿಲ್ಲೆ ಬೀದರ್‌ ಮೊದಲೇ ಶೈಕ್ಷಣಿಕವಾಗಿ ಹಿಂದುಳಿದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬಡ ವಿದ್ಯಾರ್ಥಿಗಳಿಗೆ ಸೌಕರ್ಯದಿಂದ ವಂಚಿಸಿ ಹಣ ಲೂಟಿ ಹೊಡೆಯುತ್ತಿರುವ ಕಾರಣ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣದಿಂದ ವಂಚಿತರಾಗಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಜಿಲ್ಲಾ ಬಿಸಿಎಂ ಕಲ್ಯಾಣಧಿಕಾರಿ ಸದಾಶಿವ ಬಡಗೇರ್ ಅವರು ಈ ಹಿಂದೆ ಸೇವೆ ಸಲ್ಲಿಸಿದ ಎಲ್ಲ ಕಡೆಯೂ ಭ್ರಷ್ಟಚಾರ ನಡೆಸಿದ ಆರೋಪವಿದೆ. ಮಕ್ಕಳ ಕಲಿಕೆಗೆ ಸೇರಬೇಕಾದ ಸರ್ಕಾರದ ಹಣ ಇಲಾಖೆ ಅಧಿಕಾರಿಗಳ ಮನೆ ಸೇರಿದರೆ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಾಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇಂಥ ಭ್ರಷ್ಟ ಅಧಿಕಾರಿಗಳಿಂದ ಜಿಲ್ಲೆಯ ಶಿಕ್ಷಣ ಕುಂಠಿತವಾಗುತ್ತಿದ್ದು ಅಲ್ಲದೆ ಜಿಲ್ಲೆಗೆ ಕಪ್ಪು ಚುಕ್ಕೆ ಬರುತ್ತಿದೆ. ಕೂಡಲೇ ಬಿಸಿಎಂ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ನಡೆಸಿದ ಅಕ್ರಮ ಅವ್ಯವಹಾರದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅಮಾನತುಗೊಳಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಸಮಿತಿಯ ಪದಾಧಿಕಾರಿಗಳಾದ ಶಿವಕುಮಾರ್, ಜೈಪ್ರಕಾಶ, ಅನ್ವರ್ ಹಾಗೂ ನಾಗಾರ್ಜುನ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...