ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ಸಿಂಧನೂರು ಬಂದ್‌

Date:

ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ರೈತಪರ, ಪ್ರಗತಿಪರ ಸಂಘಟನೆಗಳಿಂದ ಕರೆ ನೀಡಿದ ಸಿಂಧನೂರು ಬಂದ್‌ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.

ಸಿಂಧನೂರು ಬಂದ್ ಅಂಗವಾಗಿ ವಿವಿಧ ರಸ್ತೆಗಳಲ್ಲಿ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ನೀಡಿದರು. ರಸ್ತೆಗಿಳಿದ ಹೋರಾಟಗಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಂಧನೂರು ತಾಲೂಕು ಬಂದ್ ಹೋರಾಟಕ್ಕೆ ಸಿಪಿಐಎಂ ಲಿಬರೇಷನ್ ಸೇರಿ ವಿವಿಧ ಪಕ್ಷಗಳು, ಜಮಾತೆ ಇಸ್ಲಾಂ, ರೈತಪರ, ಕನ್ನಡಪರ, ವರ್ತಕರ, ಗುತ್ತಿಗೆದಾರರ ಸಂಘ, ತಾಲೂಕು ವಕೀಲರ ಸಂಘ, ಗಂಜ್ ವರ್ತಕರು, ಗೊಬ್ಬರ ಅಂಗಡಿಗಳ ಮಾಲಿಕರು, ಗುತ್ತೆದಾರರ ಸಂಘ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿದವು.‌

ಸಿಂಧನೂರು ಬಂದ್‌ 1

ಪ್ರತಿಭಟನಾ ನಿರತ ಹೋರಾಟಗಾರರು ಮಾತನಾಡಿ, “ರೈತರು ಅನೇಕ ದಿನಗಳಿಂದ ಜೋಳ ಖರೀದಿ ಆರಂಭಿಸಲು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ನಮ್ಮ ಹೋರಾಟ ತೀವ್ರವಾಗುತ್ತಿದ್ದಂತೆ ಸ್ಥಳೀಯ, ಜನಪ್ರತಿನಿಧಿಗಳು ಬೆಂಕಿ ಹತ್ತಿದಾಗ ಬಾವಿ ತೋಡಲು ಹೊರಟಿದ್ದಾರೆ. ಇದು ಅನುಪಯುಕ್ತ ಈ ಮುಂಚೆಯೇ ನಿರ್ಧಾರ ಮಾಡಬೇಕಾಗಿತ್ತು. ಇದು ರೈತರ ಬಗ್ಗೆ ಕಾಳಜಿ ಇಲ್ಲ ಎನ್ನುವುದನ್ನು ಎತ್ತಿ ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ನಿನ್ನೆ ರೈತರ ಅರೆಬೆತ್ತಲೆ ರಸ್ತೆತಡೆ ರಸ್ತೆಯಲ್ಲಿ ಕುಳಿತ ಊಟ ಮಾಡಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಸಿಂಧನೂರು ಬಂದ್‌ 2

ಕಳೆದ ವಾರ ಇದೇ ರೀತಿ ತಹಶೀಲ್ದಾರ್ ಕಚೇರಿ ಮುಖ್ಯದ್ವಾರದಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸಿದ ಸಮಯದಲ್ಲಿ ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಹಾಗೂ ಪ್ರಭಾರ ತಹಶೀಲ್ದಾರ್ ಶೃತಿ ಅವರು ಬೇಡಿಕೆ ಈಡೇರಿಕೆಗೆ ನಾಲ್ಕು ದಿನ ಸಮಯ ಕೇಳಿದ್ದರು. ರೈತರು ಪ್ರತಿಭಟನೆ ವಾಪಸ್ ಪಡೆದಿದ್ದರು. ಸರ್ಕಾರ ಈವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಕಾರಣ ರೈತರು ಆಕ್ರೋಶಗೊಂಡು ರಸ್ತೆಗೆ ಇಳಿದು ಪ್ರತಿಭಟನೆ ತೀವ್ರಗೊಳಿಸಿದರು.

“ಕಳೆದ ಡಿಸೆಂಬರ್ ನಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಗೆ ಬೆಂಬಲ ಬೆಲೆಯ ಹಣ ಬಿಡುಗಡೆ ಮಾಡಿಲ್ಲ ಹೊಸದಾಗಿ ಜನವರಿಯಲ್ಲಿ ಜೋಳ ಖರೀದಿ ಮಾಡಬೇಕಾಗಿತ್ತು. ಆದರೆ ಸರ್ಕಾರ ಫೆಬ್ರವರಿಯಲ್ಲಿ ನೋಂದಣಿ ಮೇನಲ್ಲಿ ಖರೀದಿ ಆರಂಭಿಸಿದೆ. ಇದು ಅಧಿಕಾರಿಗಳ ಲೋಪವೇ ಹೊರತು ರೈತರ ತಪ್ಪಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಸೇರಿ ಇತರ ವಿರುದ್ಧ ಕ್ರಮಕ್ಕೆ ನೈಜ ಹೋರಾಟ ವೇದಿಕೆ ಆಗ್ರಹ

“45 ದಿನಗಳಾದರೆ ನುಸಿ, 60 ದಿನಗಳಾದರೆ ಹುಳ ಬರುತ್ತದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಇದರ ಬಗ್ಗೆ ಅಧಿಕಾರಿಗಳಿಗೆ ಇಂತಹ ಸಾಮಾನ್ಯ ಜ್ಞಾನ ಇಲ್ಲವೇ ಎಂದು ಪ್ರಶಿಸಿದರು. ತಡವಾಗಿ ಆರಂಭಿಸಿ ತಾವೇ ತಪ್ಪು ಮಾಡಿ ರೈತರಿಗೆ ಶಿಕ್ಷೆ ಕೊಡುತ್ತಿರುವುದು ರೈತ ದ್ರೋಹಿ ಧೋರಣೆಯಾಗಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411...

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ...

ವಿಜಯಪುರ | ತಂಬಾಕು ಸೇವನೆಯತ್ತ ಯುವಕರ ಸೆಳೆತ; ಶ್ರೀಕಾಂತ ಪೂಜಾರ ಕಳವಳ

ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ...

ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ...

Download Eedina App Android / iOS

X