2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.
ಈ ಕುರಿತು ಹಾವೇರಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ನಮ್ಮ ಮಾದಿಗ ಸಮುದಾಯ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ವರದಿ ತಿರಸ್ಕರಿಸಿ ಸಂವಿಧಾನ ಬಾಹಿರವಾಗಿ ಮೀಸಲಾತಿಯನ್ನು ಜಾರಿ ಮಾಡಿದ್ದೇವೆಂದು ನಂಬಿಸಿದ ಬಿಜೆಪಿಯನ್ನು ತಿರಸ್ಕರಿಸಿ ಇಡೀ ಮಾದಿಗ ಜನಾಂಗ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ 136 ಸ್ಥಾನಗಳಲ್ಲಿ ಕಾಂಗ್ರೆಸ್ ಬಂದಿರುವುದು ತಮ್ಮ ಗಮನಕ್ಕಿದೆ” ಎಂದು ಹೇಳಿದರು.
“ಪ್ರಸ್ತುತ 2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಈಗಾಗಲೇ 03 ಸ್ಥಾನಗಳನ್ನು ಹೊಲೆಯ ಸಮುದಾಯಕ್ಕೆ ಘೋಷಣೆ ಮಾಡಿ 01 ಸ್ಥಾನ ಮಾದಿಗ ಸಮುದಾಯಕ್ಕೆ ಘೋಷಣೆ ಮಾಡಿರುತ್ತಾರೆ. ಕೋಲಾರದಲ್ಲಿ ಎರಡು ಅಸ್ಪೃಶ್ಯ ಜಾತಿಗಳ ಸಹೋದರರ ಮಧ್ಯೆ ತಿಕ್ಕಾಟ ನಡೆಯುವಂತೆ ಮಾಡಲು ಷಡ್ಯಂತರ ಮಾಡುತ್ತಾ ಮಾದಿಗ ಸಮುದಾಯಕ್ಕೆ ಟಿಕೆಟ್ ತಪ್ಪಿಸಿ ಮಾದಿಗರನ್ನು ಕಾಂಗ್ರೆಸ್ ಪಕ್ಷದಿಂದ ದೂರ ಮಾಡಲು ಹುನ್ನಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಇದು ಸಂಸದ ಭಗವಂತ ಖೂಬಾಗೆ ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ
“ನಾವು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮುಖಂಡೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿನಂತಿಸಿಕೊಳ್ಳುವುದೇನೆಂದರೆ ಮಾದಿಗ ಸಮುದಾಯದ ಅಭ್ಯರ್ಥಿಗೆ ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಬೇಕು. ಒಂದು ವೇಳೆ ಮಾದಿಗರಿಗೆ ಟಿಕೆಟ್ ನೀಡದಿದ್ದರೆ ಇದರ ಪರಿಣಾಮವನ್ನು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಮಾದಿಗ ಜನಾಂಗದ ಮತದಾರರ ಆಕ್ರೋಶ ಎದುರಿಸಬೇಕಾಗುತ್ತದೆ” ಎಂದು ಉಡಚಪ್ಪ ಮಾಳಗಿ ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದ್ದಾರೆ.