ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿರುವ ಬೆನ್ನಲ್ಲೆ ದಲಿತ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ತೀವ್ರವಾಗುತ್ತಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಆಜಾದ್ ಪಾರ್ಕ್ನಲ್ಲಿ ಪ್ರತಿಭಟನೆ ನಡೆದರು ದಲಿತ ಮುಖಂಡರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೊರಟಗೆರೆ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ ಅವರ ಪರವಾಗಿ ಘೋಷಣೆ ಕೂಗಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ರಾಜ್ಯದಲ್ಲಿ ಈವರೆಗೂ ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಈ ಬಾರಿಯಾದರೂ ದಲಿತರಿಗೆ ಆ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನ ದಲಿರಿಗೆ ಕೊಡಿ, ಇಲ್ಲವಾದರೆ ಗೃಹ ಇಲಾಖೆಯನ್ನು ದಲಿತರಿಗೆ ಕೊಡಿ ಎನ್ನುವ ಕೂಗು ಕೇಳಿ ಬಂದಿದೆ.
ಈ ಸುದ್ದಿ ಓದಿದ್ದೀರಾ? ಕಷ್ಟ ಪಟ್ಟಿದ್ದೀವಿ, ಕೂಲಿ ಕೊಡಿ ಎಂದು ನಮ್ಮ ನಾಯಕರನ್ನು ಕೇಳುತ್ತೇವೆ: ಡಿ ಕೆ ಸುರೇಶ್