ಹುಣಸೂರು | ಟಾಟಾ ಪವರ್ ವಿದ್ಯುತ್ ವಿತರಣಾ ಪರವಾನಿಗೆ ಅರ್ಜಿ ತಿರಸ್ಕರಿಸಲು ಆಗ್ರಹ

Date:

ಕರ್ನಾಟಕದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿಂದು ಹುಣಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಸಂವಿಧಾನ ವೃತ್ತದಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆ ಜೆಎಲ್‌ಬಿ ರಸ್ತೆ ಹಾಗೂ ಕಲ್ಪತರು ಮಾರ್ಗವಾಗಿ ತಾಲೂಕು ಕಚೇರಿವರೆಗೆ ಸಾಗಿತು. ನಂತರ ಪ್ರತಿಭಟನಾಕಾರರು ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ, ಉಪತಹಸೀಲ್ದಾರ್ ಶ್ರೀಪಾದ್ ಅವರ ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು, ವಿದ್ಯುತ್ ಕಾಯ್ದೆ–2003ರ ಕಲಂ 14(6)ರ ಅಡಿಯಲ್ಲಿ ಟಾಟಾ ಪವರ್ ಸಲ್ಲಿಸಿರುವ ಅರ್ಜಿಯು ಅಪೂರ್ಣವಾಗಿದ್ದು, ಸಮಾನಾಂತರ ವಿದ್ಯುತ್ ವಿತರಣೆಗೆ ಅಗತ್ಯವಿರುವ ವಿದ್ಯುತ್ ಮೂಲ, ಖರೀದಿ ಮತ್ತು ಉತ್ಪಾದನಾ ವೆಚ್ಚ, ಮೂಲಸೌಕರ್ಯ ನಿರ್ಮಾಣ, ಬಂಡವಾಳ ಹೂಡಿಕೆ, ತಾಂತ್ರಿಕ ಯೋಜನೆ ಹಾಗೂ ಸಿಬ್ಬಂದಿ ನೇಮಕಾತಿ ಕುರಿತ ಸಮಗ್ರ ಮಾಹಿತಿಯನ್ನು ಒದಗಿಸಿಲ್ಲ ಎಂದು ಆರೋಪಿಸಿದರು.

ರಾಜ್ಯದ ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಜೆಸ್ಕಾಂ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಹಾಸನ, ಚಾಮರಾಜನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಯಾದಗಿರಿ ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಿರುವ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳಿಗೆ ಸಮಾನಾಂತರವಾಗಿ ಖಾಸಗಿ ಕಂಪನಿಗೆ ಪರವಾನಿಗೆ ನೀಡುವುದು ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ದಾರಿ ಮಾಡಿಕೊಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ 600ಕ್ಕೂ ಹೆಚ್ಚು ಸಾರ್ವಜನಿಕರ ಸಹಿಗಳನ್ನು ಸಂಗ್ರಹಿಸಿ ಮನವಿಯೊಂದಿಗೆ ಸಲ್ಲಿಸಲಾಯಿತು. ಅಲ್ಲದೆ, ವಿದ್ಯುತ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಅವರಿಗೆ ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಅಗ್ರಹಾರ ರಾಮೇಗೌಡ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ದಸಂಸ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ಚಿಕ್ಕಹುಣಸೂರು ರಾಜು, ಉಂಡವಾಡಿ ಚಂದ್ರೇಗೌಡ, ನಿಲುವಾಗಿಲು ಪ್ರಭಾಕರ್, ತಮಡಹಳ್ಳಿ ಶ್ರೀನಿವಾಸ್, ಈಶ್ವರ್, ಕಿರಿಜಾಜಿ ಧನಂಜಯ, ಕಲ್ಲಹಳ್ಳಿ ವಿಷಕಂಠಪ್ಪ, ಜಯಣ್ಣ, ಶಿವಮೂರ್ತಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...