ಬೀದರ್‌ | ಹುಮನಾಬಾದ್‌ ಪಟ್ಟಣದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

Date:

Advertisements

ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ ಪ್ಯಾಂಥರ್‌ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಪುರಸಭೆ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ  ಸಲ್ಲಿಸಿದರು.

“ಸುಮಾರು 15-20 ದಿವಸಗಳಿಂದ ಪಟ್ಟಣ ವಿವಿಧ ಬಡಾವಣೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಪಟ್ಟಣದ ಉಪಾರ ಗಲ್ಲಿಯಲ್ಲಿರುವ ಕೊಳವೆ ಬಾಔಇಯಿದ್ದರೂ ನೀರಿನ ಟ್ಯಾಂಕ್‌ ಇಲ್ಲದ ಕಾರಣ ನೀರು ಪೋಲಾಗುತ್ತಿದ್ದು, ಹೊಸ ನೀರಿನ ಟ್ಯಾಂಕ್ ಅಳವಡಿಸಬೇಕು” ಎಂದು ಒತ್ತಾಯಿಸಿದರು.

Advertisements

ಮರಿಗೆಮ್ಮಾ ದೇವಸ್ಥಾನದ ಹತ್ತಿರ ಒಂದು ಹೊಸ ಬೋರವೆಲ್‌ ಹಾಗೂ ನೀರಿನ ಟ್ಯಾಂಕ್ ಅಳವಡಿಸಬೇಕು. ಉಪಾರ ಗಲ್ಲಿಯಲ್ಲಿ ಅಲ್ಲಲ್ಲಿ ನೀರಿನ ಪೈಪ್‌ ಒಡೆದು ಹಾಳಾಗಿದ್ದು ದುರಸ್ತಿ ಮಾಡಿಸಬೇಕು. ಒಂದು ವೇಳೆ ಬಡವಣೆಗಳಲ್ಲಿನ ನೀರಿನ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆ ಮೂಲಕ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್‌ ತಾಲೂಕಾ ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಪೀರಪ್ಪ ಪಡತಲ್‌ ಸೇರಿದಂತೆ ಧನರಾಜ ಬರ್ಲಾ, ಶ್ರೀಕಾಂತ್‌ ಜಂಬಗಿ, ಕಿಶೋರ್‌ ಸೂರ್ಯವಂಶಿ, ಅಮೀನಾ ಬೇಗಂ, ಭೀಮಾಬಾಯಿ, ಸುಶಿಲಮ್ಮ, ಶಿಲ್ಪಾ, ಪೆಂಟಮ್ಮ ಹಾಗೂ ಇತರರಿದ್ದರು.

ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X