ಕಲಬುರಗಿ-ಬೆಂಗಳೂರು ನಡುವೆ ಎರಡು ಹೊಸ ರೈಲು ಸಂಚಾರ ಆರಂಭಿಸಲು ಆಗ್ರಹ

Date:

ಕಲಬುರಗಿಯಿಂದ ಪ್ರತಿ ತಿಂಗಳಿಗೆ ಅಂದಾಜು ಎರಡು ಲಕ್ಷ ಮಂದಿ ಬೆಂಗಳೂರಿಗೆ ಪ್ರವಾಸ ಮಾಡುತ್ತಾರೆ. ಆದರೆ, ಮುಂಬೈ ವಲಯ ಕಚೇರಿ ಮತ್ತು ಸೊಲ್ಲಾಪೂರ ವಿಭಾಗೀಯ ಕಚೇರಿಗಳು ಕಲಬುರಗಿಯಿಂದ ಹೊಸದಾಗಿ ರೈಲು ಪ್ರಾರಂಭಿಸುವ ಬಗ್ಗೆ ಕಿಂಚಿತ್ತೂ ಗಮನ ಕೊಡದೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆರೋಪಿಸಿದೆ.

- Advertisement -

ಶೀಘ್ರದಲ್ಲೇ ಕಲಬುರಗಿಯಿಂದ ಬೆಂಗಳೂರಿಗೆ ಮತ್ತು ಬೀದರ ಮಾರ್ಗವಾಗಿ ಕಲಬುರಗಿ ಮೂಲಕ ಯಾದಗಿರಿ, ರಾಯಚೂರು ಮುಖಾಂತರ ಬೆಂಗಳೂರಿಗೆ ಹೊಸ ರೈಲುಗಳು ಕಾಲಮಿತಿಯಲ್ಲಿ ಮಾಡದಿದ್ದರೆ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಕಲಬುರಗಿ ರೈಲ್ವೆ ನಿಲ್ದಾಣದ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಮುಂಬೈ ವಲಯದ ನರಲ್ ಮ್ಯಾನೇಜರ್‌ಗೆ ಕಲಬುರಗಿಯ ಸ್ಟೇಷನ್ ಮಾಸ್ಟರ್ ಮುಖಾಂತರ ಹಕ್ಕೊತ್ತಾಯ ಪತ್ರವನ್ನು ಕ್ಯಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಸಲ್ಲಿಸಲಾಗಿದೆ.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ನೇತೃತ್ವದಲ್ಲಿ ಸಮಿತಿಯ ನಿಯೋಗ, ಕಲಬುರಗಿ ರೈಲ್ವೆ ಸ್ಟೇಷನ್ ಮಾಸ್ಟರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಮುಂಬೈ ಸ್ಟೇಷನ್ ಮಾಸ್ಟರ್ ಜನರಲ್ ಮ್ಯಾನೇಜರ್ ಅವರಿಗೆ ಪತ್ರವನ್ನು ನೀಡಿ ಕಾಲಮಿತಿಯಲ್ಲಿ ಕಲಬುರಗಿ-ಬೆಂಗಳೂರು ಹೊಸ ರೈಲು ಆರಂಭಿಸಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾರ್ವಜನಿಕ ಈಜುಕೊಳದಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ಆಗ್ರಹ

ಸಿಕಿಂದ್ರಾಬಾದ್‌ ವಲಯಕ್ಕೆ ಪತ್ರ ಬರೆದು, ಬೀದರ್‌ ಕಲಬುರಗಿ, ಯಾದಗೀರಿ, ರಾಯಚೂರು ಮಾರ್ಗವಾಗಿ ಹೊಸ ರೈಲು ಆರಂಭಿಸಲು ಒತ್ತಾಯಿಸಿದರು. ಒಟ್ಟಾರೆ, ಬೀದರ್‌ನಿಂದ ಮತ್ತು ಕಲಬುರಗಿಯಿಂದ ಎರಡು ಹೊಸ ರೈಲುಗಳು ಬೆಂಗಳೂರಿಗೆ ತುರ್ತಾಗಿ ಪ್ರಾರಂಭಿಸಿ, ಈ ಭಾಗದ ಜನರ ಬೇಡಿಕೆಗೆ ಗಂಭೀರವಾಗಿ ಸ್ಪಂಧಿಸಿ, ರೈಲ್ವೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಮಿತಿಯ ಮುಖಂಡರಾದ ಮಾಜಿದ್ ದಾಗಿ, ಕಲ್ಯಾಣರಾವ ಪಾಟೀಲ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಸಂಧ್ಯಾರಾಜ ಸ್ಯಾಮ್ಯೂವೆಲ್, ಸಾಜೀದ ಅಲಿ ರಂಜೋಲಿ, ಸಂತೋಷ ಜವಳಿ, ಮಹ್ಮದ ಗೌಸ್, ಶರಣಬಸಪ್ಪ ಕುರಿಕೋಟಾ, ರಾಜು ಜೈನ್, ಶಿವಾನಂದ ಬಿ, ಬಾಬಾ ಫಕ್ರುದ್ದೀನ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...