ಅಧಿಕಾರಿ ಪ್ರತಿಮಾ ಹತ್ಯೆ | ನ.15 ರವರೆಗೆ ಆರೋಪಿ ಕಿರಣ್ ಪೊಲೀಸ್‌ ಕಸ್ಟಡಿಗೆ

Date:

Advertisements

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಾಜಿ ಕಾರು ಚಾಲಕ ಕಿರಣ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ. ಇದೀಗ, ಆರೋಪಿ ಕಿರಣ್‌ನನ್ನು ನವೆಂಬರ್‌ 15 ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಬೆಂಗಳೂರಿನ 2ನೇ ಎಸಿಎಮ್‌ಎಮ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿ ಕಿರಣ್‌ನನ್ನು 11 ದಿನ ವಶಕ್ಕೆ ನೀಡುವಂತೆ ಬೆಂಗಳೂರಿನ 2ನೇ ಎಸಿಎಮ್‌ಎಮ್‌ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆ, ಆರೋಪಿಯನ್ನು ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

“ಆರೋಪಿ ಕಿರಣ್ ಸ್ವಭಾವ ಮತ್ತು ಕಚೇರಿಯಲ್ಲಿ ನಡೆಯುತ್ತಿದ್ದ ಅಧಿಕೃತ ಮಾಹಿತಿಯನ್ನು ಬೇರೆಯವರಿಗೆ ನೀಡುತ್ತಿ​ದ್ದ ಹಿನ್ನೆಲೆ ಅಧಿಕಾರಿ ಪ್ರತಿಮಾ ಅವರು ಕಿರಣ್‌ನನ್ನು ಎರಡು ತಿಂಗಳ ಹಿಂದೆ ಕೆಲಸದಿಂದ ತೆಗೆದಿದ್ದರು. ಕೆಲಸ ಕಳೆದುಕೊಂಡ ಬಳಿಕ ಊರು ಬಿಟ್ಟಿದ್ದ ಕಿರಣ್​, 1 ತಿಂಗಳ ಬಳಿಕ ಬೆಂಗಳೂರಿಗೆ ಬಂದು ಪ್ರತಿಮಾ ಅವರನ್ನು ಕೊಲೆಗೈದಿದ್ದಾನೆ. ಈ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ” ಎಂದು  ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸದಿಂದ ತೆಗೆದಿದ್ದಕ್ಕೆ ಪ್ರತಿಮಾರನ್ನು ಕೊಲೆಗೈದ ಕಾರು ಚಾಲಕ ಕಿರಣ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರತಿಮಾ ಅವರು ಉಪ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಅಪಾರ್ಟ್​ಮೆಂಟ್​ನಲ್ಲಿ ಹತ್ಯೆಯಾಗಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ್ಲಿ ಪ್ರತಿಮಾ ಅವರ ಅಂತ್ಯಕ್ರಿಯೆ ನೆರವೇರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X