ರಾಯಚೂರು | ಬೀಳುವ ಹಂತಕ್ಕೆ ತಲುಪಿದ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ ಕಟ್ಟಡ

Date:

Advertisements

ಆ ಸರ್ಕಾರಿ ಶಾಲೆಗೆ ದಶಮಾನೋತ್ಸವ ಕಳೆದಿದೆ. ಗೋಡೆ ಬಿರುಕು ಬಿಟ್ಟಿದೆ, ಬಾಗಿಲು ಶಿಥಿಲವಾಗಿದೆ. ಕಟ್ಟಿರುವ ಶಾಲೆಯ ಕೊಠಡಿಗಳು ಇಂದೋ-ನಾಳೆಯೋ ಬೀಳುವ ಹಂತಕ್ಕೆ ತಲುಪಿದೆ.

ಹೌದು. ಇದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿರುವ ಗಬ್ಬೂರು ಹೋಬಳಿಯ ಸರ್ಕಾರಿ ಪ್ರೌಢಶಾಲೆಯ ದುಸ್ಥಿತಿ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದಶಮಾನೋತ್ಸವ ಕಳೆದ ಶಾಲೆಗೆ ಈ ಪರಿಸ್ಥಿತಿ ಬಂದೊದಗಿದೆ.

1965ರಲ್ಲಿ ಕಟ್ಟಿದ ಈ ಶಾಲೆಯ ಕಟ್ಟಡವು ಶಿಥಿಲಗೊಂಡು ಇಂದೋ-ನಾಳೆಯೋ ಬೀಳುವ ಹಂತಕ್ಕೆ ಬಂದಿದ್ದು ಮಕ್ಕಳು ,ಶಿಕ್ಷಕರು ಭಯದಲ್ಲಿ ಇರುವಂತಾಗಿದೆ. ಶಾಲೆಯಲ್ಲಿ 16 ಕೊಠಡಿಗಳಿದ್ದು, 08 ಕೊಠಡಿಗಳು ಶಿಥಿಲಗೊಂಡು ಕೊಠಡಿಗಳು ಧರೆಗೆ ಉರುಳುವ ಅಪಾಯದಲ್ಲಿವೆ. ಶಾಲೆಯಲ್ಲಿ ಒಟ್ಟು 687 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಕಟ್ಟಡದ ದುಸ್ಥಿತಿ ಕಂಡು ಪಾಲಕರು ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ .

Advertisements

ಮಳೆ ಬಂದರೆ ಗೋಡೆಯಿಂದ ನೀರು ಸೋರಲು ಆರಂಭಿಸುತ್ತದೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಶಾಲೆ ಮಳೆಯಿಂದ ಸೋರುತ್ತಿದ್ದರೂ ಕೂಡ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾಯಕಲ್ಪ ಒದಗಿಸಲು ಮುಂದಾಗಿಲ್ಲ. ದುರಂತ ಎಂದರೆ ಮಳೆ ಬಂದರೆ ತರಗತಿಗಳಲ್ಲಿ ಪಾಠ ನಡೆಯುವುದಿಲ್ಲ. ಕೆಲ ಕೊಠಡಿಗಳಲ್ಲಿ ಮಳೆ ಬಂದು ‌ನೀರು ಸೋರಲು ಆರಂಭವಾದರೆ ಮಕ್ಕಳು ನಿಂತುಕೊಂಡು ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಪೋಷಕರು ತಮ್ಮ ಮಕ್ಕಳ ಕಷ್ಟವನ್ನು ಹೇಳಿಕೊಂಡಿದ್ದಾರೆ.

ಈ ಸಂಬಂಧ ಗ್ರಾಮಸ್ಥ ಶಾಂತಕುಮಾರ ಹೊನ್ನಟಗಿ ಮಾತನಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಕಟ್ಟಡಗಳು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದೆ. ಮಳೆ ಬಂದಾಗ ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಶಾಲೆಯ ಸಮಸ್ಯೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ್ ಅವರನ್ನು ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿಯವರು ತಿಳಿಸಿದ್ದಾರೆ. ಶಾಲೆಯ ಬಗ್ಗೆ ಡಿಡಿಪಿಐ ಅವರನ್ನು ಭೇಟಿಯಾಗಿ ಮನವಿ ಕೂಡ ಸಲ್ಲಿಸಲಾಗಿದೆ. ಶಾಲೆಯ ಸ್ಥಿತಿಗತಿ, ಇಂಗ್ಲಿಷ್ ವಿಷಯಕ್ಕೆ ಶಿಕ್ಷಕರಿಲ್ಲದೆ ಮಕ್ಕಳ ಭವಿಷ್ಯ ಅಂಧಕಾರದಲ್ಲಿ ಮುಳುಗಿದೆ ಎಂದು ಶಾಂತಕುಮಾರ ತಿಳಿಸಿದರು.

WhatsApp Image 2024 09 09 at 00.39.39 edited 1

ಶಾಲೆಯ ಸಂಬಂಧ ಶಾಲಾ ಮುಖ್ಯೋಪಾಧ್ಯಾಯ ವನಕೇರಪ್ಪ ಅವರನ್ನು ಸಂಪರ್ಕಿಸಿದಾಗ, ಶಾಲೆಯಲ್ಲಿ 16 ಕೊಠಡಿಗಳಿದ್ದು, ಅದರಲ್ಲಿ 8 ಹಳೆ ಕೊಠಡಿಗಳು ಪೂರ್ತಿ ಶಿಥಿಲಗೊಂಡಿವೆ. 8 ಮಾತ್ರ ಕೊಠಡಿಗಳು ಸರಿಯಾಗಿವೆ ಎಂದರು.

ಶಾಲೆಯಲ್ಲಿ ಒಟ್ಟು 687 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಹೆಸರಿಗೆ 12 ಶೌಚಾಲಯಗಳಿದ್ದರೂ ಕೂಡ, ಅದರಲ್ಲಿ 4 ಮಾತ್ರ ಸರಿಯಾಗಿವೆ. ಕೆಲವು ಪಾಳು ಬಿದ್ದಿವೆ.

20 ಮಕ್ಕಳಿಗೆ ಒಂದು ಶೌಚಾಲಯ ಇರಬೇಕು ಎಂದು ಸರ್ಕಾರದ ನಿಯಮವಿದೆ. ಕಟ್ಟಡ ಸಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದರು.

WhatsApp Image 2024 09 09 at 00.39.38 edited
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X