ದಾವಣಗೆರೆ | ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ: ಲೇಖಕಿ ರೂಪ ಹಾಸನ

Date:

Advertisements

ಪುರುಷ ನಿರ್ಮಿತ ಜಾತಿಮತಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣಿನ ಶೋಷಣೆ ಮಾಡಲಾಗುತ್ತಿದೆ. ಸನಾತನ ಧರ್ಮದ ಸಂಸ್ಕೃತಿಯ ಕಟ್ಟುಪಾಡಿನಲ್ಲಿ ಹೆಣ್ಣನ್ನು ಬಂಧಿಸಿಡಲಾಗಿದೆ. ಹೆಣ್ಣುಮಕ್ಕಳು ಕೇವಲ ಓಟ್ ಬ್ಯಾಂಕ್ ಅಲ್ಲ. ಆಕೆ ರಾಜಕೀಯ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ರೂಪ ಹಾಸನ ಅಭಿಪ್ರಾಯಪಟ್ಟರು.

ದಾವಣಗೆರೆಯಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಯೋಜಿಸಿದ್ದ 7ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗುವಂತಾಗಬೇಕು. ಮಹಿಳೆಯರ ದುಡಿಮೆಯಿಲ್ಲದೇ ಸಮಾಜದ ಏಳಿಗೆ ಸಾಧ್ಯವಿಲ್ಲ. ಸಮಾಜದ ಏಳಿಗೆಗೆ ಕಾರಣವಾಗಿರುವ ಮಹಿಳೆಗೆ ಕಟ್ಟುಪಾಡುಗಳನ್ನು ವಿಧಿಸಲಾಗುತ್ತಿರುವುದು ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಎಸ್ ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ,ಸ್ವಾಗತ ಸಮಿತಿ ಅಧ್ಯಕ್ಷೆ ಡಾ.ಪಿ.ಎಂ.ಅನುರಾಧ, ಎಐಎಂಎಸ್ ಎಸ್ ನ ಛಬ್ಬಿ ಮೊಹಂತಿ,ಡಾ.ಸುಧಾ ಕಾಮತ್,ಬಿ.ಆರ್ ಶೋಭಾ . ಅಪರ್ಣಾ,ಎಸ್. ಉಪಸ್ಥಿತರಿದ್ದರು. ಜನವರಿ 6 & 7 ರಂದು ಎರಡು ದಿನಗಳ ಕಾಲ ಮಹಿಳಾ ಸಮ್ಮೇಳನ ನಡೆಯಲಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X