ದಾವಣಗೆರೆ | ಸೆ.13ರಂದು ರೈತ ಹುತಾತ್ಮ ದಿನಾಚರಣೆ

Date:

ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ದಾವಣಗೆರೆ ಹಾಗೂ ಜಿಲ್ಲೆಯ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಸೆ.13 ಬೆಳಿಗ್ಗೆ 12 ಗಂಟೆಗೆ ಉಳಪನಕಟ್ಟೆ ಕ್ರಾಸ್ ರೈತ ಹುತಾತ್ಮರ ಸಮಾಧಿ ಬಳಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು ನಾಗರಾಜಚಾರ್ ಅವರ 31ನೇ ಹುತಾತ್ಮರ ದಿನಾಚರಣೆ ಹಾಗೂ ಸ್ಮಾರಕ ಭವನ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್‌ ಜಿ ಪುಟ್ಟಸ್ವಾಮಿ ತಿಳಿಸಿದರು.

- Advertisement -

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “1992 ರ ಸೆ.13ರಂದು ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ನಡೆಸಿದ್ದ ರೈತರ ಹೋರಾಟದ ವೇಳೆ ನಡೆದ ಗೋಲಿಬಾರ್ ಗುಂಡೇಟಿಗೆ ಬಲಿಯಾಗಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ನಾಗರಾಜ್ ಹುತಾತ್ಮರಾದರು. ಅವರ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಹಿಂದಿನ ಸರ್ಕಾರ ಒಂದು ಎಕರೆ ಜಾಗವನ್ನು ಮಂಜೂರು ಮಾಡಿದ್ದು, ಜಾಗದಲ್ಲಿ ಸಮುದಾಯ ಭವನ ಹಾಗೂ ಮಳಿಗೆಗಳನ್ನು ನಿರ್ಮಿಸಲಾಗುವುದು. ಹಾಲಿ ಸರ್ಕಾರ ಈ ನಿಟ್ಟಿನಲ್ಲಿ ಸಹಕಾರ ನೀಡುವ ಭರವಸೆ ಇದೆ. ಹುತಾತ್ಮರ ದಿನಾಚರಣೆ ಮತ್ತು ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್‌ ಮಲ್ಲಿಕಾರ್ಜುನ್ ಚಾಲನೆ ಸಮಿತಿ ನೀಡಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಗೌರವಾಧ್ಯಕ್ಷ ಎಚ್ ನಂಜುಂಡಪ್ಪ ಉಪಸ್ಥಿತರಿದ್ದು, ಸಮಿತಿ ಅಧ್ಯಕ್ಷ ಎನ್ ಜಿ. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ ಎಸ್‌ ಬಸವಂತಪ್ಪ, ಜಿಲ್ಲಾಧಿಕಾರಿ ಡಾ. ವೆಂಕಟೇಶ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ ಪಂ ಸಿಇಒ ಸುರೇಶ್ ಹಿಟ್ನಾಳ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ, ಹುಲ್ಲೂರು ಮುನಿಯಪ್ಪ, ಶಾಮನೂರು ಎಚ್‌ ಆರ್ ಲಿಂಗರಾಜ್‌, ಆರ್ ಜಿ ಹಳ್ಳಿ ರಾಜಶೇಖರ್, ಹಳ್ಳಿ ಕಕ್ಕರಗೊಳ್ಳ ಕೆ ಪಿ ಕಲ್ಲಿಂಗಪ್ಪ, ಜಿ ಹಳ್ಳಿ ರಮೇಶ್, ಆರ್ ಜಿ ಹಳ್ಳಿ ಪ್ರವೀಣ್, ಆರ್ ರುದ್ರಮುನಿ, ಕೆ ಎಸ್ ಮೋಹನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...