ದಾವಣಗೆರೆ | ಶಾಪಿಂಗ್ ಮಳಿಗೆಯಲ್ಲಿ ಕನ್ನಡ ಕಡೆಗಣನೆ; ಕನ್ನಡಪರ ಸಂಘಟನೆಗಳ ಕಿಡಿ.

Date:

Advertisements

ಸರ್ಕಾರದ ಆದೇಶಕ್ಕೆ ಮನ್ನಣೆ ನೀಡದೆ, ದಾವಣಗೆರೆ ನಗರದ ನೂತನ ‘ಚೆನ್ನೈ ಶಾಂಪಿಂಗ್ ಮಾಲ್’ ನಲ್ಲಿ ಕನ್ನಡದ ಕಡೆಗಣನೆ ಮಾಡಿರುವುದರ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ದಾವಣಗೆರೆ ನಗರದಲ್ಲಿ ಹೊಸದಾಗಿ ಪ್ರಾರಂಭಸಿರುವ ದಿ ಚೆನ್ನೈ ಶಾಪಿಂಗ್ ಮಾಲ್ ನಲ್ಲಿ ಕನ್ನಡ ನಾಮಫಲಕ ಬಳಸದಿರುವುದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

‘ದಾವಣಗೆರೆಯಲ್ಲಿ ಚೆನೈ ಶಾಪಿಂಗ್ ಮಾಲ್ ಉದ್ಘಾಟನೆಯಾಗಿದ್ದು, ಆದರೆ ಶಾಪಿಂಗ್ ಮಾಲ್ ಮೇಲಿನ ಫಲಕದಲ್ಲಿ ಒಂದೂ ಕನ್ನಡ ಅಕ್ಷರವಿಲ್ಲ ಹಾಗೂ ಶಾಪಿಂಗ್ ಮಾಲ್ ನ ಮೆಟ್ಟಲುಗಳನ್ನು ಪಾಲಿಕೆ ಜಾಗವನ್ನು ಒತ್ತುವರಿ ಮಾಡಿ ಕಟ್ಟಲಾಗಿದೆ’ ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಕರ್ನಾಟಕ ಸರ್ಕಾರದ ಆದೇಶದಂತೆ ಯಾವುದೇ ಅಂಗಡಿ ಮಳಿಗೆಗಳ ಮೇಲೆ ಅಗ್ರಸ್ಥಾನವನ್ನು ಕನ್ನಡ ನಾಮಫಲಕಕ್ಕೆ ಕೊಡಬೇಕು. ದಾವಣಗೆರೆಯಂತಹ ಮಧ್ಯ ಭಾಗದಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯವನ್ನು ಕೊಟ್ಟಿಲ್ಲ ಎಂದು ಆರೋಪಿಸಿ ಮಾಲೀಕರಿಗೆ ಆಂಗ್ಲ ನಾಮಫಲಕ ಬದಲಾಯಿಸಲು ಹಾಗೂ ನಗರಪಾಲಿಕೆಯ ಜಾಗದಲ್ಲಿರುವ ಮೆಟ್ಟಿಲುಗಳನ್ನು ತೆರವುಗೊಳಿಸಲು ಒತ್ತಾಯಿಸಿತು.

1001634983
ನಾಮಫಲಕದಲ್ಲಿ ಕನ್ನಡ ಇಲ್ಲದ್ದಕ್ಕೆ ಸಂಘಟನೆಗಳ ಆಕ್ರೋಶ

ಈ ವೇಳೆ ವಿಕರವೇ ರಾಜ್ಯಾಧ್ಯಕ್ಷ ಕೆ ಜಿ ಯಲ್ಲಪ್ಪ ಮಾತನಾಡಿ, “ಶೇಕಡಾ 60ರಷ್ಟು ಕನ್ನಡ ಭಾಷೆಯ ಪದಗಳು ನಾಮಫಲಕಗಳು ಇರಬೇಕು. ಶಾಪ್ ಮೇಲೆ ಅಳವಡಿಸಲಾಗಿರುವ ಫ್ಲೆಕ್ಸ್ ನಲ್ಲಿ ಕನ್ನಡ ಅಕ್ಷರಗಳೇ ಕಾಣುತ್ತಿಲ್ಲ. ಮುಖ್ಯದ್ವಾರದ ಮೇಲೆ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಇರಬೇಕು. ಮೊದಲು ಅದನ್ನು ತೆಗೆಸಬೇಕು. ಕನ್ನಡ ವಿರೋಧಿ ಧೋರಣೆ ನೀತಿ ಅನುಸರಿಸಿದರೆ ನಾವು ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಎಚ್ಚರಿಕೆ ನೀಡಿದರು.

Advertisements

“ಪುಟ್ ಪಾತ್ ಮೇಲೆ ಶಾಪಿಂಗ್ ಮಾಲ್ ನವರು ಕಟ್ಟಡ ಕಟ್ಟಿದ್ದಾರೆ. ಒಬ್ಬ ಬಡ ವ್ಯಾಪಾರಿ ಪುಟ್ ಪಾತ್ ಮೇಲೆ ತಿಂಡಿ, ಸಣ್ಣಪುಟ್ಟ ಅಂಗಡಿ ಇಟ್ಟುಕೊಂಡರೆ ಕಾರ್ಪೊರೇಷನ್ ಅಧಿಕಾರಿಗಳು ಬಂದು ತೆರವುಗೊಳಿಸುತ್ತಾರೆ. ಇದು ದೊಡ್ಡ ಮಾಲ್ ಎಂಬ ಕಾರಣಕ್ಕೆ ಸುಮ್ಮನಿದ್ದಾರಾ? ನಗರದ ತುಂಬಾ ಫ್ಲೆಕ್ಸ್ ಹಾಕಲು ಅವಕಾಶ ನೀಡಿರುವುದು ಭ್ರಷ್ಟಾಚಾರದ ಸಂಶಯ ಬರುತ್ತಿದೆ” ಎಂದು ಆರೋಪಿಸಿದರು.

“ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ರಾಜ್ಯ ಸರ್ಕಾರವು ಸಹ ಕನ್ನಡ ಭಾಷೆಯ ನಾಮಫಲಕಗಳು ಕಾಣುವಂತೆ ಹಾಗೂ ದೊಡ್ಡದಾಗಿ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕನ್ನಡ ವಿರೋಧಿ ಧೋರಣೆ ತಾಳಿರುವುದು ನಿಜಕ್ಕೂ ಖಂಡನೀಯ. ಇಂಥ ಕನ್ನಡ ವಿರೋಧಿ ಮನಸ್ಥಿತಿ ಅನುಸರಿಸಿದರೆ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ. ಇನ್ನೆರಡು ದಿನಗಳವರೆಗೆ ಕಾದು ನೋಡುತ್ತೇವೆ. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು” ಎಂದು ಯಲ್ಲಪ್ಪ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಮಶಾನ, ಕೆರೆ, ಗೋಮಾಳದಲ್ಲಿ ಅಕ್ರಮ ಮಣ್ಣು ಸಾಗಾಟ; ಕ್ರಮಕ್ಕೆ ದಸಂಸ ಆಗ್ರಹ.‌

ಈ ವೇಳೆ ಮಾಲ್ ಮಾಲೀಕರಾದ, “ಜನಾರ್ದನ ರೆಡ್ಡಿ ಮಾತನಾಡಿ, ಕನ್ನಡಪರ ಸಂಘಟನೆಗಳು ಹೇಳಿದ್ದನ್ನು ಸರಿಪಡಿಸುತ್ತೇವೆ. ಕನ್ನಡ ಭಾಷೆಯಲ್ಲಿ ನಾಮಫಲಕ ಇಲ್ಲ ಎಂದು ಹೇಳುತ್ತಿದ್ದಾರೆ. ಕೂಡಲೇ ಆಗಿರುವ ಪ್ರಮಾದ ಸರಿಪಡಿಸಿಕೊಂಡು ಕನ್ನಡ ಭಾಷೆಗೆ ಮಾನ್ಯತೆ ನೀಡುತ್ತೇವೆ. ಕನ್ನಡ ಭಾಷೆ ಕಾಣುವಂತೆ ದೊಡ್ಡದಾಗಿ ಅಳವಡಿಸುತ್ತೇವೆ. ನಾವು ಬಾಡಿಗೆ ಕಟ್ಟಡದಲ್ಲಿ ಶಾಪಿಂಗ್. ಮಾಲ್ ಪ್ರಾರಂಭಿಸಿದ್ದೇವೆ. ಇನ್ನೆರಡು ದಿನಗಳ ಕಾಲಾವಕಾಶ ನೀಡಿ” ಎಂದು ಮನವಿ ಮಾಡಿದರು.

ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಾಬುರಾವ್ ಗಿರೀಶ್, ರಮೇಶ್, ರಂಗನಾಥ್ ಹಾಗೂ ಇತರರು ಹಾಜರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X