ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

Date:

Advertisements

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿಯ ಸರ್ಕಾರಿ ಉನ್ನತಿಕರಿಸಿದ ಶಾಲೆಯ ಇಂದಿನ ದುಸ್ಥಿತಿ ಬೇಸರ ತರಿಸುವಂತಿದೆ.‌ ಮಳೆ ಬಂದರೆ ಸೋರುವ ಕೊಠಡಿಯ ಚಾವಣಿಗಳು, ಮಳೆಗೆ ಬೀಳುವಂತಿರುವ ಹಂಚಿನ ಚಾವಣಿ ಇರುವ ಕೊಠಡಿ, ಇನ್ನೊಂದು ಕೊಠಡಿ ಪಾಳುಬಿದ್ದು ಪ್ರಾಣಿಗಳ ವಾಸಸ್ಥಾನವಾಗಿದೆ ಎಂದು ಶಿಕ್ಷಣಾಸಕ್ತರು ಆಕ್ರೋಶ ವ್ಯಕ್ತಪಡಿಸಿದರು.

1002196067

ಈ ಶಾಲೆ 1951ರಲ್ಲಿ ನಿರ್ಮಾಣಗೊಂಡಿದ್ದು, ಬಡವರ್ಗದ, ದಲಿತ, ಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿದ್ದಾರೆ. ಸುಮಾರು 60 ಮಕ್ಕಳು ವಿದ್ಯೆ ಕಲಿಯುತ್ತಿದ್ದು, ಶಾಲೆಯ ದುರವಸ್ಥೆ ಪೋಷಕರಲ್ಲಿ ಆತಂಕ ತರಿಸಿದೆ.

1002196059

“ಕೊಠಡಿಗಳು ಮಳೆ ಬಂದರೆ ಸೋರುತ್ತಿದ್ದು, ಹಂಚು ಬೀಳುವ ಸ್ಥಿತಿಯಲ್ಲಿರುವ ಇದ್ದರೆ, ಇನ್ನೊಂದು ಕೊಠಡಿ ಸಂಪೂರ್ಣ ಹಾಳಾಗಿ ಹಂದಿ, ನಾಯಿಗಳ, ವಿಷಜಂತುಗಳ ವಾಸಸ್ಥಾನವಾಗಿದೆ. ಶಾಲೆಗೆ ಕಾರ್ಯಕ್ರಮ ನಡೆಸಿಕೊಡಲುರಂಗಮಂದಿರವಿದ್ದು, ಈ ಸಭಾಂಗಣ ಕೂಡ ಯೋಗ್ಯವಲ್ಲದ ಮುರಿದು ಹೋಗಿರುವ ಸಿಮೆಂಟ್ ಚಾವಣಿಗಳಿಂದ ಪಾಳು ಬಿದ್ದು ನಿರುಪಯುಕ್ತವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
1002196070

ಶಾಲೆಯಲ್ಲಿ ಹೆಚ್ಚಾಗಿ ದಲಿತರ ಕೂಲಿ ಕಾರ್ಮಿಕರ ಅಲ್ಪಸಂಖ್ಯಾತರ ಮಕ್ಕಳೇ ವಿದ್ಯಾಭ್ಯಾಸ ಕಲಿಯುತ್ತಿದ್ದಾರೆ. ಈ ಶಾಲೆಯ ದುಸ್ಥಿತಿಯನ್ನು ಕಂಡು ಶಿಕ್ಷಣ ವ್ಯವಸ್ಥೆ ಬಗ್ಗೆ ಆತಂಕ ಬರುತ್ತಿದೆ. ಈ ರೀತಿ ಇದ್ದರೆ ಶಾಲೆಗಳಿಗೆ ಬರಲು ಮಕ್ಕಳು ಕೂಡ ಹೆದರಿಕೆಕೊಳ್ಳುತ್ತಾರೆ. ಇದು ಜನಪ್ರತಿನಿಧಿಗಳಿಗೆ, ಅಧಿಕಾರಿಗಳ ಕಣ್ಣಿಗೆ ಬಿದ್ದರೂ ಬೀಳದಂತೆ ಅಸಡ್ಡೆ ವಹಿಸುತ್ತಾರೆ. ಇದು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವಾಗಿದೆ. ಕೂಡಲೇ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಜಿಲ್ಲಾಡಳಿತ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ತುರ್ತಾಗಿ ದುರಸ್ಥಿ ಕಾಮಗಾರಿ ಕೈಗೊಂಡು ಪಠ್ಯ ಚಟುವಟಿಕೆ ಕೈಗೊಳ್ಳಲು ಅನುಕೂಲ ಮಾಡಿ ಕೊಡಬೇಕು” ಎಂದು ಶಿಕ್ಷಣ ಪ್ರೇಮಿ ಲಿಂಗರಾಜ್ ಗಾಂಧಿನಗರ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

Download Eedina App Android / iOS

X