ದಾವಣಗೆರೆ | ಭದ್ರಾ ಜಲಾಶಯ ಸಮೀಪ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬಂದ್

Date:

Advertisements

ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ.‌ ದಾವಣಗೆರೆ ನಗರದ ಕೇಂದ್ರ ಭಾಗದಲ್ಲಿ ಅಲ್ಲಲ್ಲಿ ಮಾತ್ರ ಬಂದ್ ಆಗಿತ್ತು. ಜನಜೀವನ ಎಂದಿನಂತೆ ಇತ್ತು. ಆಟೋ, ವಾಹನಗಳು, ಬಸ್ ಸಂಚಾರ, ಹೊಟೇಲ್ ಸೇರಿದಂತೆ ಎಲ್ಲವೂ ಎಂದಿನಂತೆ ಸಹಜ ಸ್ಥಿತಿಯಲ್ಲಿ ಮುಂದುವರಿಯಿತು.

1002227694

ಬಿಜೆಪಿ ಮುಖಂಡರು ಬೆಳಿಗ್ಗೆಯಿಂದಲೇ ಬಂದ್ ಗೆ ಸಹಕರಿಸುವಂತೆ ಮನವಿ ಮಾಡಿದರು. ಜನರು, ವರ್ತಕರು ಬೆಳಿಗ್ಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಹನ್ನೆರಡು ಗಂಟೆಯ ನಂತರ ಸಹಜವಾಗಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದರು.

ರೈತರಿಗಾಗಿ ಬಂದ್ ಗೆ ಬೆಂಬಲ ನೀಡುವಂತೆ ವರ್ತಕರು, ಬಸ್, ಲಾರಿ ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಹೋಟೆಲ್ ಮತ್ತು ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್, ಕೊಳೇನಹಳ್ಳಿ ಸತೀಶ್ ಸೇರಿದಂತೆ ಹಲವರು ಮನವಿ ಮಾಡಿದರು.‌

Advertisements
1002227692

ವ್ಯಾಪಾರ ವಹಿವಾಟುಗಳು ನಗರದ ಕೇಂದ್ರ ಭಾಗದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಸ್ಥಗಿತಗೊಂಡಿದ್ದವು. ಆದರೆ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ಮುಂದುವರೆದವು. ಇದರಿಂದಾಗಿ ಜಿಲ್ಲಾ ರೈತ ಒಕ್ಕೂಟ ಕರೆ ನೀಡಿದ ದಾವಣಗೆರೆ ನಗರ ಸಂಪೂರ್ಣ ಯಶಸ್ವಿಯಾಗಲಿಲ್ಲ. ಸ್ವಲ್ಪ ಮಟ್ಟಿಗೆ ಪ್ರತಿಕ್ರಿಯೆ ಮಾತ್ರ ಇತ್ತು. ಲೋಕಿಕೆರೆ ನಾಗರಾಜ್, ಬಿ. ಜಿ. ಅಜಯ್ ಕುಮಾರ್, ರೇಣುಕಾಚಾರ್ಯ ಮತ್ತು ಕಾರ್ಯಕರ್ತರು ಬೆಳ್ಳಂಬೆಳಿಗ್ಗೆಯೇ ಪ್ರಮುಖ ವೃತ್ತಗಳಲ್ಲಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಖಾಸಗಿ ಬಸ್ ಗಳ ಚಾಲಕರು, ಆಟೋಚಾಲಕರಿಗೆ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

1002227687

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಖಾಂತರ ನೀರು ಬಿಡಲು ಭದ್ರಾ ಬಲದಂಡೆ ನಾಲೆಗೆ ಪೈಪ್ ಲೈನ್ ಕಾಮಗಾರಿ ಮಾಡಲಾಗುತ್ತಿದೆ. ಬಿಜೆಪಿ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಯೋಚನೆ ಅವೈಜ್ಞಾನಿಕವಾಗಿದ್ದು ಇದರಿಂದ ದಾವಣಗೆರೆ ಭಾಗದ ರೈತರಿಗೆ ಅನ್ಯಾಯವಾಗಲಿದೆ. ಕೂಡಲೇ ಕಾಮಗಾರಿ ನಿಲ್ಲಿಸಿ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಿದ್ದರಿಂದ ಜಿಲ್ಲಾ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

ಯೋಜನೆ ವಿರೋಧಿಸಿ ದಾವಣಗೆರೆ ನಗರ ಬಂದ್ ಮಾಡಲಾಗಿತ್ತು.‌ ಮುಂಬರುವ ದಿನಗಳಲ್ಲಿ ಭದ್ರಾ ಅಚ್ಚುಕಟ್ಟು ತಾಲೂಕುಗಳಲ್ಲಿ ಬಂದ್ ನಡೆಸುವ ಕುರಿತಂತೆ ಚರ್ಚೆ ನಡೆಸಲಾಗಿದೆ.‌ ಬಂದ್ ವೇಳೆ ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ತೊಂದರೆಯಾಗಲಿಲ್ಲ. ಸಂಪೂರ್ಣವಾಗಿ ಶಾಂತಿಯುತವಾಗಿ ನಡೆದಿದೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X