ದಾವಣಗೆರೆ | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸಾಂಪ್ರದಾಯಿಕ, ಸೌಹಾರ್ಧತೆಯಿಂದ ಆಚರಿಸಿ; ಡಿಸಿ ಜಿ.ಎಂ.ಗಂಗಾಧರಸ್ವಾಮಿ

Date:

Advertisements

“ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಉಳಿವಿಗೆ ಸಹಕರಿಸಬೇಕು.‌ಅಲ್ಲದೇ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸಾಂಪ್ರದಾಯಿಕವಾಗಿ ಸೌಹಾರ್ದತೆಯಿಂದ ಆಚರಿಸಬೇಕು” ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೌಹಾರ್ದತಾ ಸಭೆಯಲ್ಲಿ ತಿಳಿಸಿದರು.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆಯೋಜಿಸಲಾದ ನಾಗರೀಕ ಸೌಹಾರ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಈ ದೇಶದಲ್ಲಿ ಹಬ್ಬಗಳು ಸಂಭ್ರಮ ಸಡಗರದಿಂದ ಆಚರಣೆ ಮಾಡಬೇಕು. ಆದರೆ ಆ ಸಡಗರ ನಮಗೆ ಶೋಕಾಚರಣೆಯಾಗಬಾರದು. ಆದ್ದರಿಂದ ಹಿಂದೂ ಹಾಗೂ ಮುಸ್ಲೀಂ ಸಮುದಾಯದ ಜನತೆ ಯಾವುದೇ ರೀತಿಯ ಕೋಮು ಗಲಭೆ, ಶಾಂತಿ ಕದಡುವ ಕೆಲಸ ಮಾಡದಂತೆ ವ್ಯವಸ್ಥಿತವಾಗಿ ಆಚರಣೆ ಮಾಡಬೇಕು” ಎಂದು ಸೂಚಿಸಿದರು.

1002527916

“ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಯಾರಿಗೆ ಆಗಲೀ ಅಥವಾ ಅನ್ಯ ಜಾತಿ, ಕೋಮುಗಳ ಶಾಂತಿ ಕದಡುವಂಥವರನ್ನು ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತಹ ವೀಡಿಯೋ, ಆಡಿಯೋಗಳನ್ನು ಹಂಚಿಕೊಳ್ಳುವಂತಿಲ್ಲ. ಜಿಲ್ಲೆಯಲ್ಲಿ ಈಗಾಗಲೇ ಅಂತಹವರನ್ನು ಗುರುತಿಸಿ 28 ಗಡೀಪಾರು ಮಾಡಲಾಗಿದೆ. ಇಂತಹವರ ಬಗ್ಗೆ ಮಾಹಿತಿ ಇದ್ದಲ್ಲಿ ಹಾಗೂ ಮಧ್ಯ, ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕುರಿತು ಮಾಹಿತಿ ಇದ್ದಲ್ಲಿ ಮಾಹಿತಿ ನೀಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

Advertisements

ಮೆರವಣಿಗೆಗೆ ಡಿಜೆ ನಿಷೇಧ:
“ಗಣೇಶಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಮತ್ತು ವಿಸರ್ಜನೆ ವೇಳೆ ಪೊಲೀಸ್ ಇಲಾಖೆ ನಮಗೆ ರಕ್ಷಣೆ ನೀಡಲು ಹಗಲಿರಲು ಶ್ರಮಿಸುತ್ತಾರೆ. ಈ ಬಾರಿ ಹಬ್ಬಗಳ ಆಚರಣೆ, ವಿಸರ್ಜನೆಗೆ ಡಿಜೆಗಳಿಗೆ ಅನುಮತಿ ನಿಷೇಧಿಸಲಾಗಿದೆ. ಇದರಿಂದ ಶಬ್ದ ಮಾಲಿನ್ಯ ಉಂಟಾಗುವುದಲ್ಲದೇ ಹಲವು ಘರ್ಷಣೆಗಳಿಗೆ ಎಡೆ ಮಾಡಿಕೊಡುತ್ತದೆ. ಆದ್ದರಿಂದ ಸಾರ್ವಜನಿಕರು ನಮ್ಮ ದೇಶದ ಕಲೆ, ಸಂಸ್ಕೃತಿ, ಸಾಂಸ್ಕೃತಿಕತೆಗೆ ಹೆಸರಾದ ಸ್ಥಳೀಯ ಜಾನಪದ ಪ್ರಕಾರಗಳು, ಡೋಲು, ಮೆರವಣಿಗೆಗೆ ಬಳಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಿದೆ” ಎಂದು ತಿಳಿಹೇಳಿದರು.

“ಪರಿಸರ ಮಾಲಿನ್ಯ ತಡೆಗಟ್ಟಲು ಜಿಲ್ಲಾಡಳಿತ ವತಿಯಿಂದ ಹಲವಾರು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ನಮ್ಮ ಜೀವ ಜಲವಾದ ತುಂಗಾಭದ್ರಾ ನದಿ ಮೂಲವನ್ನು ಉಳಿಸಬೇಕು. ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿ ಪರಿಸರ ಉಳಿವಿಗೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು. ಸಾರ್ವಜನಿಕರು ಹಬ್ಬದ ಪ್ರಯುಕ್ತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸಲು ಸಂಬಂಧಪಟ್ಟ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮಾರ್ಗಗಳನ್ನು ಬದಲಾವಣೆ ಮಾಡದೆ ಜಿಲ್ಲಾಡಳಿತ ಸೂಚನೆಯಂತೆ ಪಾಲನೆ ಮಾಡಬೇಕು.

1002527917

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, “ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ, ತಾಲ್ಲೂಕು ಬೀಟ್ ಮತ್ತು ಸರ್ಕಲ್ ಮಟ್ಟದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ 606 ಗಣೇಶ ಮೂರ್ತಿ ಸ್ಥಾಪಿಸಿದ್ದು, ಈ ಬಾರಿ ಅವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಣೇಶ ಪ್ರತಿಷ್ಠಾಪನೆ, ಪೆಂಡಾಲ್ ಹಾಕಲು, ಪ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲು ಅನುಮತಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು” ಎಂದು ಸೂಚಿಸಿದರು.

1002527919

” ವಿಗ್ರಹ ಸ್ಥಾಪನೆ ವೇಳೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪೆಂಡಾಲ್‍ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು, ಪ್ರತಿಷ್ಠಾಪನೆ ಆದಾಗಿನಿಂದ ವಿಸರ್ಜನೆವರೆಗೂ ಏನೇ ಸಮಸ್ಯೆಗಳು ಉಂಟಾದಲ್ಲಿ ಆಯೋಜಕರನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು. ಮೆರವಣಿಗೆ ವೇಳೆ ಸಮಸ್ಯೆಗಳಾದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ 10ಸಾವಿರಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಹಬ್ಬದ ಸಂಭ್ರಮಾಚರಣೆ ವೇಳೆ ಶಾಂತಿ ಕದಡುವ ದೃಶ್ಯಗಳು ಕಂಡು ಬಂದಲ್ಲಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮವಹಿಸಲಾಗುವುದು” ಎಂದು ಸೂಚಿಸಿದರು.

1002527915

“ಎಲ್ಲೋ ಆಗಿರುವ ಘಟನೆಗಳ ಬಗ್ಗೆ ಪ್ರಚೋದನೆ ನೀಡುವ ಭಾಷಣ ಮಾಡುವಂತಿಲ್ಲ. ಪರಿಸರ ಸ್ನೇಹಿ ಗಣೇಶ ಪ್ರತಿμÁ್ಠಪನೆ ಮಾಡಿ ಪ್ರಕೃತಿಗೆ ಉಳಿವಿಗೆ ಸಹಕರಿಸಬೇಕು. ವಿಸರ್ಜನೆ ವೇಳೆ ಜಿಲ್ಲಾಡಳಿತ ನೀಡಿದ ಮಾರ್ಗಗಳಲ್ಲಿಯೇ ಅನುಸರಿಸಿ ವಿಸರ್ಜನೆಗೆ ಕ್ರಮವಹಿಸಬೇಕು. ವಿಸರ್ಜನೆ ಹಾಗೂ ಆಚರಣೆ ವೇಳೆ ಕೆಲವರು ಕೋಮು ಗಲಭೆ, ಕಲಹ, ಶಾಂತಿ ಕದಡುವಂಥ ಕೆಲಸ ಮಾಡುತ್ತಿದ್ದಾರೆ. ಇಂತಹ ಆಸ್ಪದಗಳಿಗೆ ಅವಕಾಶ ನೀಡದೇ ಸಂತೋಷ ಸಡಗರದಿಂದ ಎಲ್ಲರೂ ಸೌಹಾರ್ಧತೆಯಿಂದ ಆಚರಿಸಬೇಕು. ಹಬ್ಬಗಳು ಸಡಗರ ಸಭ್ರಮದಿಂದ ಆಚರಣೆ ಮಾಡಲು ಇರುವುದು. ಈ ಸಂಭ್ರಮ ಸಡಗರ ಆಚರಣೆ ಶೋಕಾಚರಣೆಗಳಾಗಿ ಬದಲಾಗಬಾರದು. ಆದ್ದರಿಂದ ಆಯೋಜಕರು ಅತ್ಯಂತ ಜಾಗ್ರತೆ ವಹಿಸಬೇಕು” ಎಂದು ತಿಳಿಸಿದರು.

1002527918

ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠ್ಠಲ ರಾವ್ ಮಾತನಾಡಿ, “ಸಾರ್ವಜನಿಕರು ಈ ಎರಡು ಹಬ್ಬಗಳನ್ನು ಶಾಂತಿಯುತವಾಗಿ ಸರಿಯಾದ ರೀತಿಯಲ್ಲಿ ಆಚರಣೆ ಮಾಡಬೇಕು. ಪಂಚಾಯಿತಿ ಮಟ್ಟದಲ್ಲಿ ಆಯೋಜಿಸುವ, ಆಚರಣೆ ಮಾಡುವ ಪ್ರತಿಯೊಬ್ಬರೂ ಕಾಲಾವಧಿಗೂ ಮುಂಚಿತವಾಗಿ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಲು ಸೂಚನೆ ನೀಡಿದರು. ಮುಂಬೈ, ಪುಣೆ ಮಾದರಿಯಲ್ಲಿ ಶಾಂತಿ ಮತ್ತು ಶಿಸ್ತಿನೊಂದಿಗೆ ಆಚರಣೆ ಅಗತ್ಯ. ಕಾನೂನಾತ್ಮಕ ಸೂಚನೆಗಳ ಕಡ್ಡಾಯ ಪಾಲನೆ ಮಾಡಬೇಕು. ಶಾಲೆ, ಅಂಗನವಾಡಿ, ಇನ್ನಿತರೆ ಸೂಕ್ಷ್ಮ ಪ್ರದೇಶಗಳಲ್ಲಿ ಆಚರಣೆ ಮಾಡಬಾರದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಚನ್ನಗಿರಿ ಹೆಚ್ಚುವರಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸ್ಯಾಮ್ ವರ್ಗೀಸ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಪಾಲಿಕೆ ಆಯುಕ್ತೆ ರೇಣುಕಾ, ಗ್ರಾಮೀಣ ವಿಭಾಗದ ಡಿವೈಎಸ್ಪಿ ಶರಣಬಸವೇಶ್ವರ, ನಗರ ವಿಭಾಗದ ಡಿವೈಎಸ್ಪಿ ಬಸವರಾಜ, ಡಿಎಆರ್ ವಿಭಾಗದ ಡಿಎಸ್‍ಪಿ ಪ್ರಕಾಶ್ಸೇ, ರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ...

Download Eedina App Android / iOS

X