ದಾವಣಗೆರೆ | ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯಿಂದ ಹರಿಹರದಲ್ಲಿ ಮೇ -ಕಾರ್ಮಿಕ ದಿನಾಚರಣೆ

Date:

Advertisements

ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಹರಿಹರದ ಸಿಪಿಐ ಕಚೇರಿಯ ಎಂ ಸಿ ನರಸಿಂಹನ್ ಭವನದಲ್ಲಿ 139 ನೇ ಮೇ ಕಾರ್ಮಿಕ ದಿನಾಚರಣೆಯನ್ನು ‌ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು,”ಸಮಾಜವಾದಿ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರುವುದರಿಂದ ಕಾರ್ಮಿಕರಲ್ಲಿ ವರ್ಗ ಜಾಗೃತಿ ಮೂಡಿಸುವುದರ ಮೂಲಕ ಸಮಾಜವಾದಿ ಸಮಾಜ ನಿರ್ಮಿಸಲು ಮುಂದಾಗಬೇಕು. ಸಮಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ. ಆ ಮೂಲಕ ಎಲ್ಲರಿಗೂ ಸಮಾನತೆ ದೊರಕಿಸಲು ಹೋರಾಡಬೇಕಿದೆ” ಎಂದು ಕಾರ್ಮಿಕರಿಗೆ ಕರೆ ನೀಡಿದರು.

1002088709

“ಬ್ರಿಟಿಷರ ಆಳ್ವಿಕೆಯಲ್ಲಿ ಪಡೆದ ಕಾರ್ಮಿಕರ 44 ಕಾನೂನುಗಳನ್ನು ಬಿಜೆಪಿಯ ಕೇಂದ್ರ ಸರ್ಕಾರ ನಾಲ್ಕು ಕೋಡ್ ಗಳನ್ನಾಗಿ ಬದಲಾಯಿಸಿ ಜಾರಿಗೆ ತರಲು ತುದಿಗಾಲ ಮೇಲೆ ನಿಂತಿದೆ. ಇದನ್ನು ಹಿಮ್ಮೆಟ್ಟಿಸಲು ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಿ ಆಳುವ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಳೆ ಬಂದರೆ ಸೋರುವ, ಕುಸಿಯುವಂತಿರುವ ಶಾಲಾ ಕಟ್ಟಡ, ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ.‌

Advertisements

ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಪರಮೇಶ್ವರಪ್ಪ, ನರೇಗಾ ರಂಗನಾಥ್, ವೀರಣ್ಣ ಅಂಗಡಿ, ಸಿಪಿಐ ತಾಲೂಕು ಕಾರ್ಯದರ್ಶಿ ಟಿ ಹೆಚ್ ನಾಗರಾಜ್, ಮಹಿಳಾ ಸಂಘಟನೆ ಮುಖಂಡರಾದ ಸರೋಜಾ, ಎಐಟಿಯುಸಿ ಮುಖಂಡರಾದ ಚಂದ್ರಪ್ಪ, ಜಾಫರ್ ಸಾಧಿಕ್, ಕೃಷ್ಣಮೂರ್ತಿ ಬಿಲ್ಲವ, ಸುರೇಶ್, ಶೇಖರಪ್ಪ, ಪಂಪಾಪತಿ ಟ್ರಸ್ಟ್ ನ ಖಜಾಂಚಿ ಜಿ ಎಲ್ಲಪ್ಪ, ಎಐಟಿಯುಸಿ ಮುಖಂಡರುಗಳಾದ ಹೆಚ್ ಸಿ ಮೈದೂರು , ಬಸಪ್ಪ ರೆಡ್ಡಿ, ಗಂಗಾಧರ ಕೊಟಗಿ, ಪರಮೇಶ್ವರಪ್ಪ ಎಂಎನ್, ಶಿವರಾಜ್, ನಾರಾಯಣ ಜಾಡರ್, ಪ್ರದೀಪ ನಲವಾಗಲು, ಕುಮಾರ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X