ದಾವಣಗೆರೆ | ಭತ್ತದ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ಆಗ್ರಹ, ರೈತಸಂಘ ರಸ್ತೆ ತಡೆದು ಪ್ರತಿಭಟನೆ. 23ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ.

Date:

Advertisements

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ನೂರಾರು ಕಾರ್ಯಕರ್ತರು ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ದಾವಣಗೆರೆ ಹೊರವಲಯದಲ್ಲಿ ಹೆದ್ದಾರಿ ತಡೆ ನಡೆಸಿದ ರೈತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

1002014767

ಹಲವು ಬಾರಿ ವಿವಿಧ ಹಂತದ ಹೋರಾಟಕ್ಕೂ ಸ್ಪಂದಿಸದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆ ನಗರದ ಹೊರವಲಯದಲ್ಲಿರುವ ಆರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಸೋಮವಾರ ಬೆಳಿಗ್ಗೆ ಪ್ರತಿಭಟನೆ ಕುಳಿತ ಪರಿಣಾಮ ಪೂನಾ-ಬೆಂಗಳೂರು ನಡುವೆ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ರಸ್ತೆತಡೆಯಿಂದಾಗಿ ಎರಡೂ ಬದಿಯಲ್ಲಿ ಎರಡು ಮೂರು ಕಿಲೋಮೀಟರ್‌ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಆಗಮಿಸಿದ ಪೊಲೀಸರ ಮನವಿಗೂ ರೈತರು ಜಗ್ಗದ ಹಿನ್ನೆಲೆಯಲ್ಲಿ ಮುಂಜಾಗ್ರತಾಕ್ರಮವಾಗಿ ಎಲ್ಲರನ್ನು ಬಂಧಿಸಿ ಪೊಲೀಸ್‌ ಕವಾಯತು ಮೈದಾನಕ್ಕೆ ಕರೆದೊಯ್ದರು.

ಈ ಮಧ್ಯೆ ಮುಖ್ಯಮಂತ್ರಿಗಳೊಂದಿಗೆ ಇದೇ ಮೇ.23 ರಂದು ಮಾತುಕತೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Advertisements
1002014770

ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, “ರೈತ ಸಂಘದಿಂದ ಭತ್ತದ ಬೆಂಬಲ ಬೆಲೆಗೆ ಸೂಕ್ತ ಕಾನೂನು ಜಾರಿಗೆ ಆಗ್ರಹಿಸಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರ ರೈತರ ಹೋರಾಟಕ್ಕೆ ಸೂಕ್ತವಾಗಿ ಸ್ಪಂದಿಸಿಲ್ಲ. ಇದರ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಇಂದು ಹೆದ್ದಾರಿ ತಡೆ ಮಾಡಿದ ನೂರಾರು ರೈತರನ್ನು ಬಂಧಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1002014766

“ಭತ್ತಕ್ಕೆ ಬೆಂಬಲ ಬೆಲೆ ಕಾನೂನು ಜಾರಿ ಕುರಿತು ಮುಖ್ಯಮಂತ್ರಿ ಅಥವಾ ಕೃಷಿ ಸಚಿವರು ಕಾಲಮಿತಿನಿಗದಿಮಾಡಬೇಕು. ಮತ್ತು ಪ್ರಸ್ತುತ 3500 ರೂ. ದರದಲ್ಲಿ ಪ್ರತಿ ಕ್ವಿಂಟಲ್ ಭತ್ತವನ್ನು ಖರೀದಿಸುವಂತೆ ತುರ್ತು ಆದೇಶ ನೀಡದ ಹೊರತು ಯಾವುದೇ ಕಾರಣಕ್ಕೂ ಬಂಧನದಲ್ಲಿರುವ ಯಾವ ರೈತರು ಕೂಡ ಬಂಧನದಿಂದ ಮುಕ್ತಗೊಳ್ಳದೇ ಇರಲು ನಿರ್ಧರಿಸಿದ್ದೇವೆ. ನಮ್ಮ ಬಂಧನವನ್ನು ದಾಖಲೆಗಳಲ್ಲಿ ನಮೂದಿಸಿ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಪೊಲೀಸರು ವರದಿ ನೀಡಬೇಕು.‌ ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿಯಾಗದೇ ಇದ್ದರೆ ಎಲ್ಲರೂ ಜೈಲಿಗೆ ಹೋಗಲು ಸಿದ್ಧರಿದ್ದೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ಸಂಜೆ 7ಗಂಟೆಯ ವೇಳೆಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಡಿ.ಆರ್. ಪೊಲೀಸ್ ಮೈದಾನದಲ್ಲಿದ್ದ ರೈತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ಮೇ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು. ಮೇ.23 ರಂದು ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಲು ಸಮಯ ನಿಗದಿಮಾಡಿರುವ ಕುರಿತು ಸಿಎಂ ಆಪ್ತ ಕಾರ್ಯದರ್ಶಿ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಮಂಜುನಾಥ್ ತಿಳಿಸಿದರು. ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಮತ್ತು ಸಚಿವರ ಆಪ್ತ ಸಹಾಯಕ ನಾಗರಾಜ್ ಕೂಡ ಮಾತುಕತೆ ನಡೆಸಿ ರೈತರ ಮನವೊಲಿಸಿದರು.

ಪ್ರತಿಭಟನೆಯಲ್ಲಿ ಚಿನ್ನಸಮುದ್ರ ಭೀಮಾನಾಯ್ಕ, ಎಲೋದಹಳ್ಳಿ ರವಿಕುಮಾರ್, ಚಿಕ್ಕಮಲ್ಲನಹೊಳೆ ಚಿರಂಜೀವಿ, ರಾಜನಹಟ್ಟಿರಾಜು, ಹೂವಿನಮಡು ನಾಗರಾಜ್, ಚಿಕ್ಕತೊಗಲೇರಿ ನಟರಾಜ್, ಕೆಂಚಪ್ಪ, ನಿಂಗಪ್ಪ, ಹುಚ್ಚವ್ವನಹಳ್ಳಿ ಪ್ರಕಾಶ್, ಗುಮ್ಮನೂರು ರುದ್ರೇಶ್, ಚಿಕ್ಕಕೋಗಲೂರು ಕುಮಾರ್, ಉಪ್ಪನಾಯಕನಹಳ್ಳಿ ಉಮೇಶ್, ಗಿರಿಯಾಪುರ ಗಂಗಾಧರ ಸ್ವಾಮಿ, ಹೊನ್ನಮರಡಿ ಶಿವಕುಮಾರ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. If you are looking for a reliable [url=https://trafficarbitration.com/]local garage door services inc[/url], contact our company in Englewood, Florida.

    Ultimately, examining the pricing policies and warranty options is crucial. Make sure you are clear on the detailed pricing and whether there are any extra charges. A trustworthy garage door company will provide transparent pricing and offer warranties for their work.

  2. Discover the elegance and reliability of [url=https://best-interwood.com/]deluxe garage doors[/url], which will add a unique style to your home in Englewood, Florida.
    Deluxe garage doors are a luxurious addition to any home. Incorporating stylish garage doors can transform the overall look of your house.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X