ದಾವಣಗೆರೆ | ಭತ್ತ ಬೆಂಬಲ ಬೆಲೆಗೆ ಖರೀದಿಸುವಂತೆ ಆಗ್ರಹಿಸಿ ರೈತ ಸಂಘ ರಸ್ತೆ ತಡೆದು ಪ್ರತಿಭಟನೆ.

Date:

Advertisements

ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರಸ್ತೆ ತಡೆ ನಡೆಸಿ ಒತ್ತಾಯಿಸಿತು.

1002006848
ಜಿಲ್ಲೆಯ ಹಲವೆಡೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಭತ್ತಕ್ಕೆ ಕನಿಷ್ಠ 3500 ರೂಪಾಯಿಗಳ ಬೆಂಬಲ ಬೆಲೆ ನೀಡಬೇಕು ಮತ್ತು ಹೆಚ್ಚುವರಿ 1000 ರೂ. ಬೋನಸ್ ನೀಡಬೇಕು. ಈ ಕೂಡಲೇ ಖರೀದಿದಾರರಿಗೆ 3500 ಕ್ಕಿಂತ ಹೆಚ್ಚಿನ ಬೆಲೆಗೆ ಖರೀದಿಗೆ ಆದೇಶ ನೀಡಲು ಈ ಕೂಡಲೇ ಕೃಷಿ ಸಚಿವರು ಅಥವಾ ಮುಖ್ಯಮಂತ್ರಿಗಳು ಸಭೆ ನಡೆಸಿ ಆದೇಶಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಚಿಕ್ಕತೊಗಲೇರಿ, ಜಗಳೂರು ತಾಲೂಕು ಸೇರಿದಂತೆ ಹಲವೆಡೆ ಮುಖಂಡ ಹುಚ್ಚವನಹಳ್ಳಿ ಮಂಜುನಾಥ್ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ರಸ್ತೆ ತಡೆ ನಡೆಸಿತು.

1002006849 1

ಈ ವೇಳೆ ಮಾತನಾಡಿದ ಮುಖಂಡ ಹುಚ್ಚವನಹಳ್ಳಿ ಮಂಜುನಾಥ್, “ಭತ್ತದ ಬೆಲೆ ಕುಸಿತದಿಂದ ರೈತರು ಆತಂಕಗೊಂಡಿದ್ದಾರೆ.‌ ಈಗ ಸಿಗುತ್ತಿರುವ ಬೆಲೆಯಿಂದಾಗಿ ಭತ್ತದ ಖರ್ಚು ವೆಚ್ಚಗಳಿಗೆ ಅದು ಸಾಕಾಗುತ್ತಿಲ್ಲ. ರೈತರು ನಷ್ಟದ ಬೆಲೆಗೆ ಭತ್ತ ಮಾರಾಟ ಮಾಡುವಂತಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳಿಗೆ 3500 ಗಳಿಗೆ ಭತ್ತ ಖರೀದಿ ಮಾಡಲು ಆದೇಶ ನೀಡಲು ಕೃಷಿ ಸಚಿವರ ಅಥವಾ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಮನವಿ ನೀಡಿದ್ದು ಅದಕ್ಕೆ ಸ್ಪಂದಿಸಿಲ್ಲ. ಸರ್ಕಾರಕ್ಕೆ ರೈತರ ಹಿತಾಸಕ್ತಿ ಬಗ್ಗೆ ಕಾಳಜಿಯೇ ಇಲ್ಲ. ಕಾರಣ ರೈತರು ರಸ್ತೆ ತಡೆ ನಡೆಸುತ್ತಿದ್ದು ಈ ಕೂಡಲೇ ಭತ್ತದ ಖರೀದಿಗೆ 3500 ಬೆಂಬಲ ಬೆಲೆಗೆ ತೆಗೆದುಕೊಳ್ಳಲು ಆದೇಶಿಸಬೇಕು ಮತ್ತು ಹೆಚ್ಚುವರಿ ಬೋನಸ್ ನೀಡಬೇಕು” ಎಂದು ಒತ್ತಾಯಿಸಿದರು.‌

Advertisements
1002006852

“ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜಿಲ್ಲಾದ್ಯಂತ ಎಲ್ಲ ರೈತರು ತಮ್ಮ ಗ್ರಾಮಗಳಲ್ಲಿಯೇ ರಸ್ತೆತಡೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಕರೆ ನೀಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಲಬಾಧೆ, ಬೆಳೆ ಕೈಕೊಟ್ಟದ್ದರಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ.‌

ಈ ವೇಳೆ ರೈತಸಂಘದ ಮುಖಂಡರಾದ ಎಲೋದಹಳ್ಳಿ ರವಿಕುಮಾರ್, ಆನಗೋಡು ಭೀಮಣ್ಣ, ಗಂಡುಗಲಿ, ಹರಿಹರದ ಗರಡಿ ಮನೆ ಬಸವರಾಜ್, ಯರವನಾಗತಿಹಳ್ಳಿ ರುದ್ರಪ್ಪ, ಹೂವಿನ ಮಡು ನಾಗರಾಜ್, ಚನ್ನಸಮುದ್ರ ಭೀಮಣ್ಣ, ಮರಡಿ ಸತೀಶ್ ಹಾಗೂ ಇತರ ಮುಖಂಡರು, ರೈತರು ಭಾಗವಹಿಸಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X