ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

Date:

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಂಬಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಮೂರು ಮತ್ತು ನಾಲ್ಕು ಚಕ್ರದ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘವನ್ನು ಉದ್ಘಾಟಿಸಲಾಯಿತು.

- Advertisement -
1004930331

ಸಂಘದ ನಾಮಫಲಕ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ “ಸರ್ಕಾರ ಅಭಿವೃದ್ಧಿಯ ಹೆಸರಲ್ಲಿ ನಗರಗಳನ್ನು ಸ್ವಚ್ಛ, ಸ್ಮಾರ್ಟ್ ಮಾಡುತ್ತೇವೆ ಎನ್ನುವ ಮೂಲಕ ದುಡಿಯುವ ಕೈಗಳನ್ನು ಒಕ್ಕಲೆಬ್ಬಿಸಿ ಅನ್ಯಾಯ ಮಾಡುತ್ತಿದ್ದಾರೆ. ನಿಮ್ಮ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಆದರೆ ದುಡಿಯುವ ವರ್ಗಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ. ಅವರು
ಐಶಾರಾಮಿ ಕಾರು, ಬಂಗಲೆ ಕೇಳುವುದಿಲ್ಲ, ದುಡಿಯುವ ವರ್ಗಕ್ಕೆ, ಚಾಲಕರಿಗೆ ಅಗತ್ಯ ವಸತಿ, ನಿಲ್ದಾಣ, ಮೂಲಸೌಕರ್ಯ ನೀಡಲಿ. ವಾಹನ ಚಾಲಕರು, ಮಾಲೀಕರಿಗೆ ಪೊಲೀಸ್ ಅಧಿಕಾರಿಗಳು ಅನಗತ್ಯ ಕಿರುಕುಳ ನೀಡಬಾರದು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ದಲಿತ ಸಂಘರ್ಷ ಸಮಿತಿಯು ಜಾತಿ ಧರ್ಮದ ಅಡಿಯಲ್ಲಿ ಕೆಲಸ‌ಮಾಡುವುದಿಲ್ಲ, ಎಲ್ಲಾ ವರ್ಗದ ಶೋಷಿತರ ಪರ, ಮೇಲ್ವರ್ಗದ ಬಡವರ ಪರ ಹೋರಾಟ ಮಾಡಿದೆ. ಯಾವುದೇ ವರ್ಗದ ಬಡವರಿಗೆ, ಶೋಷಿತರಿಗೆ, ದುಡಿಯುವ ವರ್ಗಕ್ಕೆ ವಿನಾಕಾರಣ ತೊಂದರೆ ನೀಡಿದರೆ ದಲಿತ ಸಂಘರ್ಷ ಸಮಿತಿ ಸಹಿಸುವುದಿಲ್ಲ. ಸರ್ಕಾರವನ್ನೇ ನಡುಗಿಸುವ ಹೋರಾಟಗಳನ್ನು ದಸಂಸ ನಡೆಸಲಿದೆ” ಎಂದು ತಿಳಿಸಿದರು.

1004930333

ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ವಿಜಯಲಕ್ಷ್ಮಿ ಮಾತನಾಡಿ “ವಾಹನ ಚಾಲಕರು, ಮಾಲೀಕರಿಗೆ ದಸಂಸ ಬೆನ್ನಿಗಿದೆ. ಉತ್ತಮ ದುಡಿಮೆಯ ಜೊತೆಗೆ ದುಶ್ಚಟಗಳಿಗೆ ಬಲಿಯಾಗದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ” ಎಂದು ಹಾರೈಸಿದರು.

ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಬೇತೂರು ಹನುಮಂತಪ್ಪ ಮಾತನಾಡಿ “ಕೆಲವು ಅಧಿಕಾರಿಗಳು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ.‌1998 ರಿಂದಲೂ ಇಲ್ಲಿ ವಾಹನ ನಿಲುಗಡೆ ಮಾಡಿ ಜೀವನ ಸಾಗಿಸುತ್ತಿದ್ದೇವೆ.‌ ಆದರೆ ಇತ್ತೀಚೆಗೆ ಏಳೆಂಟು ವರ್ಷಗಳಿಂದ ಕಿರುಕುಳ ಪ್ರಾರಂಭವಾಗಿದೆ. ಹೀಗಾಗಿ ಕಿರುಕುಳ ತಪ್ಪಿಸಲು, ಚಾಲಕರ ಒಗ್ಗಟ್ಟಿಗಾಗಿ ದಸಂಸ ನೇತೃತ್ವದಲ್ಲಿ ಗೂಡ್ಸ್ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಚಾಲನೆ ನೀಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಾದ
ಮಹಾಂತೇಶ, ಶಾಂತಿನಗರ ಮಂಜುನಾಥ್, ಖಾಲಿದ್, ಎಲೆಕ್ಟ್ರಿಕ್ ಮಂಜುನಾಥ್, ಮಂಜುನಾಥ್ ಗಾಂಧಿನಗರ ,
ಶಿವಶಂಕರ್ ಎಸ್ ಎಂ ಗಾಂಧಿನಗರ, ದೊಡ್ಡಪ್ಪ ಆವರಗೊಳ್ಳ, ,  ಎಸ್, ರಾಜಪ್ಪ, ತಾ.ಸಂ ಚಿತ್ತಾನಹಳ್ಳಿ ನಾಗರಾಜ್, ಸತೀಶ್ ನೇರ್ಲಿಗಿ, ಚಾಮರಾಜಪೇಟೆ
ಗೂಡ್ಸ್ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಬೇತೂರು ಹನುಮಂತಪ್ಪ , ಉಪಾಧ್ಯಕ್ಷ ಬಾಪುಗೌಡ, ಬೂದಾಳ್ ರವಿಕುಮಾರ್, ವಾಹೀದ್, ಹಾಲೇಶ್, ಅಂಜಿನಪ್ಪ, ಮಹಾಲಿಂಗಪ್ಪ, ಚಂದ್ರಪ್ಪ, ಅಜೀತ್, ಚನ್ನಪ್ಪ, ಶಾಂತಪ್ಪ, ಬಿಸ್ಮಿಲ್ಲಾ, ತಿಮ್ಮೇಶ, ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...