ದಾವಣಗೆರೆ : ಕೌಶಲ್ಯದ ನವೋದ್ಯಮ ಸ್ಥಾಪನೆ ಭವಿಷ್ಯ ನಿರ್ಮಾಣದ ಹೊಣೆ ಪದವೀಧರರದ್ದು: ರಾಜ್ಯಪಾಲ ಗೆಹ್ಲೋಟ್

Date:

“ಸುಧಾರಿತ ತಂತ್ರಜ್ಞಾನ, ದತ್ತಾಂಶ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಬೆಳೆಸಿಕೊಂಡು ನವೋದ್ಯಮಗಳ ಸ್ಥಾಪನೆಗೆ ಮುಂದಾಗಬೇಕು. ಅಲ್ಲದೆ ಪದವೀಧರರಿಗೆ ಭವಿಷ್ಯ ನಿರ್ಮಾಣದ ಹೊಣೆಯಿದೆ” ಎಂದು ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋತ್ ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಸಲಹೆ ನೀಡಿದರು.

- Advertisement -

ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿ ಆವರಣದಲ್ಲಿ ಶುಕ್ರವಾರ ನಡೆದ ವಿಶ್ವವಿದ್ಯಾನಿಲಯದ ೧೩ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಭಿನಂದನಾರ್ಹರು. ಅವರ ಈ ಸಾಧನೆ ಉನ್ನತ ಭವಿಷ್ಯ ಹಾಗೂ ಉಜ್ವಲ ಜೀವನಕ್ಕೆ ಮೆಟ್ಟಿಲಾಗಲಿ” ಎಂದು ಹಾರೈಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...
1003587870

“2047ರಲ್ಲಿ ಭಾರತ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ದೇಶದ ಭವಿಷ್ಯ ಇಂದಿನ ಪದವೀಧರರ ಕೈಯಲ್ಲಿರುತ್ತದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವನ್ನಾಗಿ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ. ಸ್ಪರ್ಧಾತ್ಮಕ ಯುಗದಲ್ಲಿ ಸೋಲಿಗೆ ಭಯಪಡಬೇಕಿಲ್ಲ. ಸ್ಟಾರ್ಟ್‌ಅಪ್ ಲೋಕದಲ್ಲಿ ಸೋಲು ಅಮೂಲ್ಯ ಪಾಠವಾಗಿದ್ದು, ಅದರ ಅನುಭವದ ಮೇಲೆ ಭವಿಷ್ಯ ರೂಪಿಸಿಕೊಳ್ಳಬೇಕು. ಕ್ಯಾಂಪಸ್ ಉದ್ಯೋಗಕ್ಕಾಗಿ ಕಾಯದೆ, ಹೊಸತನ ಹಾಗೂ ವಿಶಿಷ್ಟ ಆಲೋಚನೆಗಳೊಂದಿಗೆ ನವೋದ್ಯಮಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

“ರ‍್ಯಾಂಕ್ ಮತ್ತು ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಸಾಧನೆಯ ಹಿಂದೆ ತಂದೆ-ತಾಯಿಗಳ ತ್ಯಾಗ ಹಾಗೂ ಗುರುಗಳ ವಿಶ್ವಾಸ ಅಡಗಿದೆ. ಯಶಸ್ಸಿನ ಮೆಟ್ಟಿಲೇರಿದಾಗ ಕೃತಜ್ಞತೆಯಿಂದ ಹಾಗೂ ಸೇವೆಯ ಮೂಲಕ ಎಲ್ಲರ ಋಣ ತೀರಿಸಬೇಕು. ಶಿಕ್ಷಣವು ಕೇವಲ ಉದ್ಯೋಗ ಸಾಧನವಲ್ಲ. ಅದು ಸಹಾನುಭೂತಿ, ಸಾಮಾಜಿಕ ಜವಾಬ್ದಾರಿ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಮಾರ್ಗವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಯುವಶಕ್ತಿಯೇ ವಿಕಸಿತ ಭಾರತದ ಅಡಿಪಾಯವಾಗಿದ್ದು, ಯುವಜನತೆಯ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು. ವಿಶ್ವದಲ್ಲೇ ಅತಿ ಹೆಚ್ಚು ಯುವಕರ ಸಂಖ್ಯೆ ಹೊಂದಿರುವ ಭಾರತದಲ್ಲಿ ಯುವಶಕ್ತಿಯೇ ದೇಶದ ಬೆನ್ನೆಲುಬು” ಎಂದು ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ “ಅತ್ಯಂತ ಕಡಿಮೆ ಅವಧಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಲ್ಲಿಯ ವಿಜ್ಞಾನಿಗಳು ಹೊರ ದೇಶಗಳಲ್ಲಿಯೂ ಸಂಶೋಧನೆ ಕೈಗೊಳ್ಳುತ್ತಿರುವುದು ವಿಶೇಷ. ಅಧ್ಯಾಪಕರ ಜೊತೆಗೆ ವಿದ್ಯಾರ್ಥಿಗಳಿಗೂ ವಿದೇಶಗಳಲ್ಲಿ ಸಂಶೋಧನೆ ನಡೆಸಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದರು.

“ವಿಶ್ವವಿದ್ಯಾನಿಲಯದ ವ್ಯಾಪ್ತಿಯ ೧೦ ಗ್ರಾಮಗಳನ್ನು ದತ್ತು ಪಡೆದು ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಎಂ.ಸಿ.ಎ ವಿಭಾಗಕ್ಕಾಗಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ತರಗತಿಗಳ ಹೊಸ ಕಟ್ಟಡ ಸ್ಥಾಪಿಸಲಾಗಿದೆ” ಎಂದು ವಿವರಿಸಿದರು.  

1003587869

“ನಿವೃತ್ತ ಪೊಲೀಸ್ ಅಧಿಕಾರಿ ಎಲ್.ರೇವಣಸಿದ್ಧಯ್ಯ, ಶೈಕ್ಷಣಿಕ ಸಂಘಟಕ, ಹೋರಾಟಗಾರ ಮತ್ತು ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ ಮತ್ತು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಸಮಾಜ ಸೇವಕ ಎಂ.ರಾಮಪ್ಪ ಸೇರಿ ಮೂವರಿಗೆ ಈ ಬಾರಿ ವಿಶ್ವವಿದ್ಯಾನಿಲಯ ವತಿಯಿಂದ ರಾಜ್ಯಪಾಲರು ಡಿ.ಲಿಟ್- ಗೌರವ ಡಾಕ್ಟೊರೇಟ್ ಪ್ರಧಾನ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಈ ಬಾರಿ 45 ವಿದ್ಯಾರ್ಥಿಗಳು 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದಿದ್ದು.‌ ಈ ಬಾರಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಯನ ಎನ್.ಬಿ ಒಟ್ಟು ಏಳು ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾದರು. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಇತರ ಎರಡು ಮತ್ತು ಮೂರನೇ ರ‍್ಯಾಂಕ್ ವಿಜೇತರಿಗೆ ಪದವಿ ಪ್ರಧಾನ ನಡೆಯಲಿದೆ.

ಕುಲಸಚಿವ ಎಸ್.ಬಿ.ಗಂಟಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ವಂದನಾ, ವಿವಿಧ ನಿಕಾಯಗಳ ಡೀನರಾದ ಪ್ರೊ.ಕೆ.ವೆಂಕಟೇಶ, ಪ್ರೊ.ಎಂ.ಯು.ಲೋಕೇಶ, ಪ್ರೊ.ಗೋವಿಂದಪ್ಪ, ಪ್ರೊ.ಶ್ರೀನಿವಾಸ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...