ದಾವಣಗೆರೆ | ಎಸ್ ಪಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಹರೀಶ್ ಅವಹೇಳನಕಾರಿ ಹೇಳಿಕೆ; ಪ್ರಕರಣ ದಾಖಲು

Date:

Advertisements

ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಉಮಾ ಪ್ರಶಾಂತ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ, ವಾಗ್ದಾಳಿ ನಡೆಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಬಿ.ಪಿ.ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಎಸ್ಪಿಯವರನ್ನು ನಾಯಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಶಾಸಕರ ವಿರುದ್ದ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಾಸಕ ಬಿ ಪಿ ಹರೀಶ್

“ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಗಂಟೆಗಟ್ಟಲೆ ಶಾಮನೂರು ಮನೆಯ ಬಾಗಿಲು ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪಮೆರಿಯನ್ ನಾಯಿಯಂತೆ ವರ್ತಿಸುತ್ತಾರೆ. ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು” ಎಂದು ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ಟೀಕಿಸಿದ್ದರು.

1002619780

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತ, ಬೇಡ ಹಿಂದುಳಿದ ಕುಟುಂಬಗಳಿಗೆ ನಿವೇಶನ ಹಂಚಿಕೆಗೆ ಆಗ್ರಹಿಸಿ ದಸಂಸ ತಮಟೆ ಚಳುವಳಿ, ಪಾದಯಾತ್ರೆ

ಎಸ್ಪಿ ಉಮಾ ಪ್ರಶಾಂತ್ ದೂರು ನೀಡಿದ ಹಿನ್ನೆಲೆಯಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್ಎಸ್ ಕಾಯ್ದೆ ಕಾಲಂ 79, ಕಾಲಂ 132ರ ಅಡಿಯಲ್ಲಿ (ಮಹಿಳೆಯ ಘನತೆಗೆ ಕುಂದುಂಟು ಮಾಡುವುದು, ಕರ್ತವ್ಯಕ್ಕೆ ಅಡ್ಡಿ) ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X