ದಾವಣಗೆರೆ | ದಸಂಸ ಘಟಕ ಉದ್ಘಾಟನೆ ಹಾಗೂ 135ನೇ ಡಾ. ಅಂಬೇಡ್ಕರ್ ಜಯಂತಿ

Date:

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು.

- Advertisement -
1004234177

ಇದೇ ವೇಳೆ ಮಾತನಾಡಿದ ಮುಖಂಡರು “ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವದ ಜೊತೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉದ್ಘಾಟನೆ, ಗ್ರಾಮ ಘಟಕದ ರಚನೆ, ಉದ್ಘಾಟನೆ ಉತ್ತಮ ನಿರ್ಧಾರ. ಸಾವಿರಾರು ವರ್ಷಗಳ ಕಾಲ ನಿರಂತರ ಶೋಷಣೆಗೆ ಒಳಗಾದ ದಲಿತ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಡಾ.ಅಂಬೇಡ್ಕರರು ನಿರಂತರ ಪ್ರಯತ್ನ ಮಾಡಿದರು. ಹಲವಾರು ದೇಶಗಳನ್ನು ಸುತ್ತಿ ಅಲ್ಲಿನ ಸಂವಿಧಾನ, ಕಾನೂನು ಅಧ್ಯಯನ ಮಾಡಿ ಪದವಿಗಳನ್ನು ಗಳಿಸಿ, ಸಂವಿಧಾನ ರಚನೆಗೆ ಕಾರಣರಾಗಿದ್ದಾರೆ. ಅವರ ಕಾನೂನು ಅರಿವು, ಸಾಮಾಜಿಕ ಕಳಕಳಿಯಿಂದ ಅವರಿಗೆ ಸಂವಿಧಾನ ರಚನೆಯ ಜವಾಬ್ದಾರಿ ಹುಡುಕಿಕೊಂಡು ಬಂದಿತು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1004234175

“ಸಂವಿಧಾನ ರಚನೆಯ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವ ಮೂಲಕ ಶೋಷಿತ ವರ್ಗಗಳ, ಮಹಿಳೆಯರ ವಿಮೋಚನೆಗೆ ಕೊಡುಗೆ ನೀಡಿದರು. ದಲಿತರಿಗೆ ತಮ್ಮ ಹಕ್ಕು, ಸಾಮಾಜಿಕ ನ್ಯಾಯ ನೀಡಿದ ಮಹಾನ್ ಚೇತನ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್” ಎಂದು ಗೌರವ ಸಲ್ಲಿಸಿದರು.‌

1004234173

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಡಿಆರ್‌ಆರ್ ಕಾಲೇಜಿನಲ್ಲಿ ದಕ್ಷಿಣ ಉಪಚುನಾವಣೆ ಸುರಕ್ಷಿತ ಮತ ಎಣಿಕೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.

1004234174

ಜಗಳೂರು ಶಾಸಕ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ದಲಿತ ಸಂಘರ್ಷ ಸಮಿತಿಯ ಗ್ರಾಮ ಘಟಕವನ್ನು ಉದ್ಘಾಟಿಸಿದರು.‌ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಸೇರಿದಂತೆ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...