ದಾವಣಗೆರೆ | ದೊಣ್ಣೆಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಜಗಳದ ಬಗ್ಗೆ ವಿಚಾರಿಸಲು ಹೋದವನ ಮೇಲೆ ಮಚ್ಚಿನೇಟು

Date:

Advertisements

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹತ್ತಿರ ವ್ಯಾಪಾರದ ವಿಚಾರವಾಗಿ ಕೋಳಿ ಕತ್ತರಿಸುವ ಮಚ್ಚಿನಿಂದ ತಿಪ್ಪೇಶ್ ಎನ್ನುವವನು ರಮೇಶ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ರಮೇಶನ ಕೈಗೆ ಮಚ್ಚಿನಿಂದ ಬಲವಾದ ಹಲ್ಲೆಯಿಂದ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಬಳಿ ಆಕನೂರು ಗ್ರಾಮದ ನಿಂಗಪ್ಪ ಮತ್ತು ತಿಪ್ಪೇಸ್ವಾಮಿ ಕೋಳಿ ಮಾಂಸ ಮಾರಾಟದ ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಕೋಳಿ ಅಂಗಡಿ ಪಕ್ಕ ದೊಣ್ಣೆಹಳ್ಳಿ ಹೊಸೂರು ಗ್ರಾಮದ ತಿಪ್ಪೇಶ ಎಗ್‌ರೈಸ್ ಅಂಗಡಿ ಇಟ್ಟುಕೊಂಡಿದ್ದಾನೆ.

ಇದೇ ತಿಪ್ಪೇಶ ಕಳೆದ ಜೂ. 9ರಂದು ರಾತ್ರಿ ತಿಪ್ಪೇಸ್ವಾಮಿಯ ಹತ್ತಿರ ವಿಚಾರವೊಂದಕ್ಕೆ ಗಲಾಟೆ ಮಾಡಿಕೊಂಡಿದ್ದಾನೆ.‌ ಈ ವಿಚಾರದ ಬಗ್ಗೆ ವಿಚಾರಿಸಲು ರಮೇಶ್ ಮತ್ತು ಸುರೇಶ್ ಎಂಬುವವರು ಜೂ. 10ರಂದು ಮಧ್ಯಾಹ್ನ ತಿಪ್ಪೇಶನ ಎಗ್‌ ರೈಸ್ ಅಂಗಡಿ ಹತ್ತಿರ ಹೋಗಿದ್ದರು. ಈ ವೇಳೆ ತಿಪ್ಪೇಶ ಏಕಾಏಕಿ ನಿಂಗಪ್ಪನ ಕೋಳಿ ಅಂಗಡಿಯಲ್ಲಿದ್ದ ಮಚ್ಚು ತೆಗೆದುಕೊಂಡು ರಮೇಶನ ತಲೆಯತ್ತ ಬೀಸಿದ್ದಾನೆ. ಈ ಮಧ್ಯೆ ರಮೇಶ ಎಡಗೈಯನ್ನು ಅಡ್ಡ ತಂದಿದ್ದರಿಂದ ಮಚ್ಚಿನೇಟು ಬಲವಾಗಿ ಬಿದ್ದಿದೆ. ಸುರೇಶ್ ಮತ್ತು ಪುನೀತ್ ರಮೇಶ್‌ನನ್ನು ಜಗಳೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪತ್ರಕರ್ತರ ಮೇಲೆ ಹಲ್ಲೆ ವಿರುದ್ಧ ಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರವಿ ಎಂಬಾತ ಜಗಳೂರು ಠಾಣೆಗೆ ದೂರು ನೀಡಿದ್ದು ಪಿಎಸ್‌ಐ ಆಶಾ ತನಿಖೆ ಕೈಗೊಂಡಿದ್ದಾರೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ ನಗರದಲ್ಲಿ ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ; ಯಾವುದೇ ಕಲ್ಲುತೂರಾಟ ನಡೆದಿಲ್ಲ: ಎಸ್‌ಪಿ ಸ್ಪಷ್ಟನೆ

ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ...

ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ...

ದಾವಣಗೆರೆ | ಹೊಲಿಗೆಯಂತ್ರ ತರಬೇತಿಗೆ ಅಪರಿಚಿತರಿಗೆ ಹಣ ಪಾವತಿಸಿ ಮೋಸಹೋಗಬೇಡಿ: ಕೈಗಾರಿಕಾ ಇಲಾಖೆ ಸ್ಪಷ್ಟನೆ

"ದಾವಣಗೆರೆ ಕೌಶಲ್ಯ ಆಧಾರಿತ ಯೋಜನೆಯಡಿ ಇಲಾಖೆಯ ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ...

ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ...

Download Eedina App Android / iOS

X