ದಾವಣಗೆರೆ | ಪಹಲ್ಗಾಮ್ ದಾಳಿ ಹೇಯ ಕೃತ್ಯ, ಪ್ರವಾಸಿ ಕುಟುಂಬಗಳಿಗೆ ಪರಿಹಾರ ನೀಡಿ; ಕರ್ನಾಟಕ ಜನಶಕ್ತಿ.

Date:

Advertisements

ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.

1001905257

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಸತೀಶ್, “ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಪಹಲ್ಗಾಮ್ ಎಂಬ ರೆಸಾರ್ಟ್ ನಲ್ಲಿ ಏಪ್ರಿಲ್ 22 ರಂದು ಮಧ್ಯಾಹ್ನ 2:30 ರ ಸುಮಾರಿಗೆ ಕಣಿವೆ ನೋಡಲು ಬಂದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಕರ್ನಾಟಕ ಜನಶಕ್ತಿ ಯು ತೀವ್ರವಾಗಿ ಖಂಡಿಸುತ್ತದೆ. ಪ್ರವಾಸಿಗರ ಮೇಲೆ ಭಯೋತ್ಪಾದಕ ಕೃತ್ಯ ನಡೆಸಿ, 26 ಜನರ ಕೊಲೆ ಮಾಡಿದ ಭಯೋತ್ಪಾದಕರನ್ನು ಬೇಗನೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ದಾಳಿಗೀಡಾದ ಪ್ರವಾಸಿಗರ ಪ್ರತಿ ಕುಟುಂಬಕ್ಕೆ ಉದ್ಯೋಗ ಸೇರಿದಂತೆ ಸೂಕ್ತ ಪರಿಹಾರವನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಸೂಕ್ತ ಕ್ರಮ ಮತ್ತು ಪರಿಹಾರಕ್ಕಾಗಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisements

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ದೇಶದಲ್ಲಿ ಬೌದ್ಧಿಕ ವಲಯವೂ ಕೂಡ ಜಾತಿ, ಧರ್ಮ, ಪಕ್ಷಗಳಾಗಿ ವಿಭಜಿತ ಗೊಂಡಿದೆ; ನಾಡೋಜ ಬರಗೂರು ರಾಮಚಂದ್ರಪ್ಪ.

ಪ್ರತಿಭಟನೆಯಲ್ಲಿ ಆದಿಲ್ ಖಾನ್, ರವೀಂದ್ರ ಕೆ, ಸೈಯದ್ ಅಶ್ಫಾಕ್, ಸತೀಶ್ ಅರವಿಂದ್, ಬಾಷಾ, ಶೇರ್ ಅಲಿ, ರಾಮ ಆಂಜನೇಯ, ಪವಿತ್ರ, ಮಂಜುನಾಥ್ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X