ದಾವಣಗೆರೆ | ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥಿಸಿ, ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ.

Date:

Advertisements

ಆಪರೇಷನ್ ಸಿಂಧೂರ ನಡೆಸಿ ಪಾಕಿಸ್ತಾನಕ್ಕೆ ಭಾರತ ಸೇನೆಯು ತಕ್ಕ ಉತ್ತರ ನೀಡಿದ್ದು, ಶತ್ರು ರಾಷ್ಟ್ರದ ವಿರುದ್ಧ ಹೋರಾಡಲು ಯೋಧರಿಗೆ ಇನ್ನೂ ಶಕ್ತಿ ನೀಡಲು ಹಾಗೂ ಸುರಕ್ಷತೆಗೆ ಪ್ರಾರ್ಥಿಸಿ ದಾವಣಗೆರೆ ನಗರದ ದುರ್ಗಾಂಬಿಕಾ ದೇವಸ್ಥಾನ ಹಾಗೂ ಕಡಕ್ ಶಾ ವಲಿ ದರ್ಗಾದಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅವರು, “ಪಾಕಿಸ್ತಾನವು ಪದೇ ಪದೇ ಕಾಲು ಕರೆದು ಭಾರತವನ್ನು ಕೆಣಕುತ್ತಲೇ ಇತ್ತು. ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ಎಂದಿಗೂ ಕ್ಷಮಿಸಲು ಸಾದ್ಯವಿಲ್ಲ. 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಲೇಬೇಕು. ಈ ಉಗ್ರರ ಹಿಂದಿರುವವರಿಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಭಾರತ ದಿಟ್ಟ ಹೆಜ್ಜೆ ಇಟ್ಟಿದೆ. ಪಾಕಿಸ್ತಾನದ ಭಯೋತ್ಪಾದನಾ ನೆಲೆಗಳ ಮೇಲೆ ನುಗ್ಗಿ ಹೊಡೆದಿರುವ ಭಾರತವು ತಕ್ಕ ಉತ್ತರ ನೀಡುತ್ತಿದೆ” ಎಂದು ಸೇನೆಗೆ ಬೆಂಬಲಿಸಿದರು.

1001968283
ದಾವಣಗೆರೆ ಕಡಕ್ ಶಾ ವಲಿ ದರ್ಗದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಖಂಡರು

“ಪಾಕಿಸ್ತಾನದ ಎಲ್ಲಾ ಷಡ್ಯಂತ್ರ ಬಯಲು ಮಾಡುತ್ತಿರುವ ಭಾರತ ಸೇನೆಯು ನೆರೆರಾಷ್ಟ್ರದೊಳಗೆ ಕ್ಷಿಪಣಿ ದಾಳಿ ನಡೆಸಿ ಹೊಡೆದು ಹಾಕುತ್ತಿದೆ. ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳ ಹೊಡೆದುರುಳಿಸಿದೆ. ಭಾರತ – ಪಾಕ್ ಗಡಿಯಲ್ಲಿ ಎರಡೂ ರಾಷ್ಟ್ರಗಳ ಯೋಧರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಭಾರತದ ಯೋಧರಿಗೆ ಯಾವುದೇ ತೊಂದರೆ ಆಗದಿರಲಿ. ಭಾರತ ಸೇನೆಗೆ ಮತ್ತಷ್ಟು ಶಕ್ತಿ ನೀಡುವಂತೆ ದುರ್ಗಾಂಬಿಕಾ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅದೇ ರೀತಿಯಲ್ಲಿ ಕಡಕ್ ಶಾ ವಲಿ ದರ್ಗಾದಲ್ಲಿ ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

Advertisements

“ಭಾರತ ಸೇನೆಯು ವಿಶ್ವದಲ್ಲಿಯೇ ಶಕ್ತಿಶಾಲಿಯಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಭಯೋತ್ಪಾದನೆ ಮಟ್ಟ ಹಾಕಲು ದಿಟ್ಟ ಹೆಜ್ಜೆ ಇಟ್ಟಿರುವ ಭಾರತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿವೆ. ಭಾರತದ ವಾಯುಸೇನೆ, ಭೂ ಸೇನೆ, ನೌಕಾ ಸೇನೆ ಪಾಕ್ ಗೆ ತಕ್ಕ ಪಾಠ ಕಲಿಸುವುದು ಖಚಿತ. ಈ ಕಾರ್ಯಾಚರಣೆಯಲ್ಲಿ ಹೋರಾಡುವವರಿಗೆ ಯಾವುದೇ ಸಮಸ್ಯೆಯಾಗದಿರಲಿ. ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನ ಪಾಠ ಕಲಿಯುವವರೆಗೂ ದಾಳಿ ನಡೆಯಬೇಕು. ಉಗ್ರರ
ಸಂಪೂರ್ಣ ನಿರ್ನಾಮ ಮಾಡುವವರೆಗೆ ಆಪರೇಷನ್ ಸಿಂಧೂರ ನೆಡೆಯಲಿ” ಎಂದು ಹೇಳಿದರು.

ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, “ಪಹಲ್ಗಾಮ್ ನಲ್ಲಿ ದಾಳಿಗೆ ಪ್ರತೀಕಾರವಾಗಿ ಭಾರತವು ತೆಗೆದುಕೊಂಡಿರುವ ರಾಜತಾಂತ್ರಿಕ ನಡೆ, ಆಪರೇಷನ್ ಸಿಂಧೂರ, ಭಯೋತ್ಪಾದನಾ ಶಿಬಿರಗಳ ಧ್ವಂಸ ಪ್ರತೀಕಾರದ ಭಾಗ. ಹಿಂದೂ ಹೆಸರು ಕೇಳಿ ಹತ್ಯೆ ಮಾಡಿದ ಉಗ್ರರ ಕ್ಷಮಿಸಲು ಆಗದು. ಇಂಥ ಪೈಶಾಚಿಕ ಕೃತ್ಯ ಎಸಗಿದ ಮತ್ತು ಸಹಕರಿಸಿದ, ಬೆಂಬಲಿಸಿದ ಪಾಕಿಸ್ತಾನಕ್ಕೆ ಸರಿಯಾಗಿಯೇ ಭಾರತ ಪಾಠ ಕಲಿಸುತ್ತಿದೆ. ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇಲ್ಲದಂತೆ ಮಾಡಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ಈ ವೇಳೆ ಜವಾಹರ್ ಬಾಲ್ ಮಂಚ್ ಪದಾಧಿಕಾರಿಗಳಾದ ಕೆ. ಹೆಚ್. ಪ್ರೇಮಾ, ಶಿಲ್ಪಾ ಪರಶುರಾಮ್, ಯುವರಾಜ್, ಮಂಜುನಾಥ್, ಹರೀಶ್, ಅಕ್ಬರ್ ಬಾಷಾ, ಫಯಾಜ್ ಅಹ್ಮದ್, ಅಯೂಬ್ ಖಾನ್, ಇಮಾಮ್, ಗೌರವ್ ಮತ್ತಿತರರು ಹಾಜರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X