ದಾವಣಗೆರೆ ನಗರದ ಎರಡು ಕೋಮುಗಳ ಮುಖಂಡರಿಗೆ, ನಾಗರೀಕರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಲಾಗಿದ್ದು, ಎರಡು ಕೋಮಿನ ಮುಖಂಡರುಗಳು, ನಾಗರೀಕರು ದಾವಣಗೆರೆ ಜಿಲ್ಲಾ ಪೊಲೀಸ್ ಜೊತೆಯಲ್ಲಿ ಸಹಕರಿಸಬೇಕು, ಹಾಗೂ ಯಾವುದೇ ಕೋಮಿನ ಮುಖಂಡರುಗಳು, ನಾಗರೀಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ, ಪೋಸ್ಟರ್ ಗಳನ್ನು ಮಾಡಬಾರದು. ಒಂದು ವೇಳೆ ಹಾಗೇನಾದರೂ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಸೆಪ್ಟಂಬರ್ 24, 2025 ರಂದು ರಾತ್ರಿ ದಾವಣಗೆರೆ ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಪ್ಲೆಕ್ಸ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಕೋಮುಗಳ ನಡುವೆ ವಾಗ್ವಾದ ನಡೆದ ಘಟನಾ ಸ್ಥಳಕ್ಕೆ ಪೂರ್ವವಲಯ ಐಜಿಪಿ ಡಾ. ರವಿಕಾಂತೇಗೌಡ ಹಾಗೂ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ, ಎರಡು ಕೋಮಿನ ದೂರುಗಳ ಮೇಲೆ ಪರಿಶೀಲನೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎರಡು ಕಡೆ ಮುಖಂಡರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ. ಸದರಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಈಗಾಗಲೇ 7 ಆರೋಪಿತರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ
ಸೆಪ್ಟಂಬರ್ 24, 2025 ರಂದು ರಾತ್ರಿ ದಾವಣಗೆರೆ ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ನಡೆದಂತಹ ಒಂದು ಘಟನೆ ಸಂಬಂಧ ದಾವಣಗೆರೆ ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 4 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸುತ್ತಿರುವ ತಂಡ ಏಳು ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದೆ.