ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

Date:

2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ 
ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ  ಅವರು ಸಲಹೆ ನೀಡಿದರು.

- Advertisement -


ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...


 ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ
ಗುರುವಾರ  ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಅನೇಕ ಪ್ರಕರಣಗಳು ಕಕ್ಷಿದಾರರ ಅಹಂನಿಂದಾಗಿ 
ವರ್ಷಗಟ್ಟಲೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿವೆ. ಇದರಿಂದ ಕೇವಲ ಸಮಯ ಮತ್ತು ಹಣ 
ವ್ಯರ್ಥವಾಗುವುದಲ್ಲದೆ ಮನಸ್ತಾಪಗಳು ಹೆಚ್ಚಾಗುತ್ತವೆ. ವಕೀಲರು, ಕಕ್ಷಿದಾರರು ಹಾಗೂ ವಿಮಾ ಕಂಪನಿಗಳು
 ಸಹಕರಿಸಿ ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳುವ ಮೂಲಕ ನೆಮ್ಮದಿಯ ಜೀವನ ನಡೆಸಲು ಮುಂದಾಗಬೇಕು” ಎಂದು ಕರೆ ನೀಡಿದರು.

“ವಿಶೇಷ ಲೋಕ ಅದಾಲತ್‌ನಲ್ಲಿ ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ದಾವೆಗಳು, ಬ್ಯಾಂಕ್  ವಸೂಲಾತಿ, ಜೀವನಾಂಶ, ವಿಚ್ಛೇದನ ಸೇರಿದಂತೆ ವೈವಾಹಿಕ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನ ಕ್ಲೇಮುಗಳು, ವಿದ್ಯುತ್ ಮತ್ತು ನೀರಿನ ಶುಲ್ಕದ ಬಾಕಿ ಹಾಗೂ ರಾಜೀಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ವಿಶೇಷವಾಗಿ ಅಪಘಾತದ ಪ್ರಕರಣಗಳಲ್ಲಿ ಇಲ್ಲಿ ಶೀಘ್ರ ಪರಿಹಾರ ಲಭ್ಯವಾಗಲಿದೆ”ಎಂದು ಮಾಹಿತಿ 
ನೀಡಿದರು.

“ಗಂಭೀರ ಸ್ವರೂಪದ ಕ್ರಿಮಿನಲ್ ಕೇಸ್‌ಗಳು, ಜಾತಿನಿಂದನೆ ಪ್ರಕರಣಗಳು ಹಾಗೂ ಪೋಕ್ಸೊ 
(POCSO) ಕಾಯ್ದೆಯಡಿಯ ಪ್ರಕರಣಗಳನ್ನು ಈ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಸಂಸ ಘಟಕ ಉದ್ಘಾಟನೆ ಹಾಗೂ 135ನೇ ಡಾ. ಅಂಬೇಡ್ಕರ್ ಜಯಂತಿ

“ರಾಜ್ಯಾದ್ಯಂತ ಸುಪ್ರೀಂ ಕೋರ್ಟ್‌ನಲ್ಲಿ ಸುಮಾರು 4,328 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ ಜಿಲ್ಲೆಯ
 36 ಪ್ರಕರಣಗಳಿವೆ. ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದ್ದು, ಇದಕ್ಕೆ ವಿವಿಧ 
ಇಲಾಖೆಗಳ ಸಹಕಾರ ಅಗತ್ಯವಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕವೂ ತಮ್ಮ ಸಮಸ್ಯೆಗಳನ್ನು ನೋಂದಾಯಿಸಿಕೊಳ್ಳಲು http://forms.gle/iqxefqF4BCWzukoP6 ಲಿಂಕ್ ಬಳಸಬಹುದಾಗಿದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಉಪ ಮುಖ್ಯ ಕಾನೂನು ಅಧೀಕ್ಷಕರಾದ ವೆಂಕಟೇಶ್ ಹಾಗೂ ವಕೀಲರಾದ ವನ್ಯಶ್ರೀ ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...