ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

Date:

Advertisements

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾವಣಗೆರೆ ತಾಲೂಕು ಆಲೂರು ಗ್ರಾಮ ಪಂಚಾಯಿತಿ ಮುಂಬಾಗ ಧರಣಿ ನಡೆಸಿದ್ದಾರೆ.‌ ಏಕಾಂಗಿಯಾಗಿ ಗ್ರಾಮ ಪಂಚಾಯಿತಿ ಮುಂದೆ ಧರಣಿ ನಡೆಸಿದ ವಿದ್ಯಾರ್ಥಿನಿ ‘ಮೂಲ ಸೌಕರ್ಯಕ್ಕಾಗಿ ಹೋರಾಟ’ ಎಂಬ ಭಿತ್ತಿಚಿತ್ರವನ್ನು ಕುರ್ಚಿಯೊಂದಕ್ಕೆ ಕಟ್ಟಿ ನೆಲದ ಮೇಲೆ ಕುಳಿತು ಧರಣಿ ನಡೆಸಿದ್ದಾಳೆ.

ಖಾಸಗಿ ಅನುದಾನಿತ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತಾ ‘ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಇದರಿಂದ ಶಾಲೆಗೆ ಹೋಗುವುದು ಕಷ್ಟವಾಗಿದೆ. ಮಕ್ಕಳು ಮತ್ತು ಶಿಕ್ಷಕರು ಆಯ ತಪ್ಪಿ ಬಿದ್ದಿದ್ದಾರೆ’ ಎಂದು ಆರೋಪಿಸಿ ದಾವಣಗೆರೆ ತಾಲೂಕಿನ ಆಲೂರು ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮೂಲಭೂತ ಸೌಲಭ್ಯಕ್ಕಾಗಿ ಹೋರಾಟ ಎಂಬ ಘೋಷವಾಕ್ಯದ ಭಿತ್ತಿ ಚಿತ್ರ ಅಂಟಿಸಿ ನೆಲದ ಮೇಲೆ ಕುಳಿತು ಹೋರಾಟ ನಡೆಸಿದ್ದಾಳೆ. ಈ ಬಗ್ಗೆ ಆಲೂರು ಗ್ರಾಮ ಪಂಚಾಯಿತಿ ಗಮನಕ್ಕೂ ತರಲಾಗಿತ್ತು. ಆದರೂ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇಲ್ಲ. ರಸ್ತೆಗಳು ಹಾಳಾಗಿವೆ. ಚರಂಡಿಗಳಲ್ಲಿ ಹೂಳು ತುಂಬಿಕೊಂಡು ಅನೈರ್ಮಲ್ಯ ತಾಂಡವವಾಡುತ್ತಿದೆ ಎಂದು ವಿದ್ಯಾರ್ಥಿನಿ ಸುಶ್ಮಿತಾ ಆರೋಪಿಸಿದ್ದಳು.

Advertisements
1002544404

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಸ್ಥಳದಲ್ಲಿ ವಿದ್ಯಾರ್ಥಿನಿ ಮನವೊಲಿಸಿದ್ದು, ಸೌಲಭ್ಯ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನು ವಿದ್ಯಾರ್ಥಿನಿ ಹಿಂದಕ್ಕೆ ಪಡೆದಿದ್ದಾಳೆ.

ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮಾತನಾಡಿ, ಅನುದಾನಿತ ಶಾಲೆಯಾಗಿದ್ದು ಇಲ್ಲಿ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಖಾಸಗಿಯವರಿಗೆ ಸೇರಿದ್ದು, ಅವರು ರಸ್ತೆ ಅಭಿವೃದ್ಧಿಗೆ ಅವಕಾಶ ನೀಡುತ್ತಿಲ್ಲ. ಪರ್ಯಾಯ ಮಾರ್ಗಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ವಿಠ್ಠಲ ಮಾಧವರಾವ್ ಪ್ರತಿಕ್ರಿಯಿಸಿ, “ವಿದ್ಯಾರ್ಥಿನಿ ಧರಣಿ ವಿಚಾರ ಗಮನಕ್ಕೆ ಬಂದಿದೆ. ಶಾಲೆಗೆ ರಸ್ತೆ ಸಂಪರ್ಕ ವಿಚಾರವಾಗಿ ಲೋಕೋಪಯೋಗಿ ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಕುಡಿಯುವ ನೀರಿನ ಘಟಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಘಟಕಗಳು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿ ಇರುವ ಭಾಗದಲ್ಲಿ ಕುಡಿಯುವ ನೀರು ಘಟಕಕ್ಕೆ ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಆ ಭಾಗದಲ್ಲಿ ಜನಸಂಖ್ಯೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ವರದಿ ನೀಡಲು ಸೂಚಿಸಿದ್ದೇವೆ. ಅಲ್ಲದೆ ಗ್ರಾಮದ ಚರಂಡಿ ವ್ಯವಸ್ಥೆ, ನೈರ್ಮಲ್ಯಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ” ಎಂದು ತಿಳಿಸಿದರು.

ಈ ಕುರಿತು ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ತಾಪಂ ಇಒ ರಾಮಭೋವಿ, “ಅನುದಾನಿತ ಖಾಸಗಿ ಶಾಲೆಯಾಗಿದ್ದು, ರಸ್ತೆಯು ಕೂಡ ಖಾಸಗಿಯವರ ಜಮೀನಿನಲ್ಲಿದೆ. ರಸ್ತೆಯನ್ನು ನೇರವಾಗಿ ಸರಕಾರದ ಕಡೆಯಿಂದ ಅಭಿವೃದ್ದಿ ಪಡಿಸಲು ಅಡೆತಡೆಗಳಿವೆ. ಶಾಲೆಗೆ ಅನುಮತಿ ಪಡೆಯುವಾಗ ಶಿಕ್ಷಣ ಇಲಾಖೆಗೆ ಶಾಲೆಯವರು ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಯಾವ ರೀತಿ ದೃಢಿಕರಣ ಸಲ್ಲಿಸಿದ್ದಾರೆ ಎನ್ನುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಮಾಹಿತಿ ಕೇಳಿದ್ದೇವೆ. ಅಲ್ಲದೇ ಪಿಡಿಓ ಅವರಿಗೆ ತಾತ್ಕಾಲಿಕವಾಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X