ದಾವಣಗೆರೆ | ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ

Date:

ದಾವಣಗೆರೆ ವಿಶ್ವವಿದ್ಯಾಲಯದ 45 ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದರು.‌ ಈ ಬಾರಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಯನ ಎನ್.ಬಿ ಒಟ್ಟು ಏಳು ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದು, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಪದಕ ಸ್ವೀಕರಿಸಿದರು.

- Advertisement -

ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ, ರ‍್ಯಾಂಕ್ ವಿಜೇತರು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರಧಾನ ಮಾಡಿದರು.
ಎರಡು ಮತ್ತು ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಂಜೆ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ನಡೆಯಿತು.‌ ಈ ಬಾರಿಯೂ ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇದಲ್ಲದೆ 30 ಮಹಿಳೆಯರು ಪಿಎಚ್.ಡಿ. ಪದವಿ ಪಡೆದಿರುವುದು ವಿಶೇಷ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದಾವಣಗೆರೆ ವಿವಿಯಲ್ಲಿ ಮಹಿಳೆಯರೇ ಉನ್ನತಿ ಸಾಧಿಸುತ್ತಿರುವುದು ಗಮನಾರ್ಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 12706 ವಿದ್ಯಾರ್ಥಿಗಳಿಗೆ ಹದಿಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಲಭಿಸಿದೆ.

ಸ್ನಾತಕೋತ್ತರ ಪದವಿಯ ಎಂಬಿಎ ವಿಭಾಗದ ದೀಪಾ ಆರ್ ತಲಾ ನಾಲ್ಕು ಸ್ವರ್ಣ ಪದಕಗಳನ್ನು ಪಡೆದರು. ಗಣಿತಶಾಸ್ತ ವಿಭಾಗದ ಕವನ ಪಿ.ಎಂ, ಜೀವರಸಾಯನಶಾಸ್ತ್ರ ವಿಭಾಗದ ರುಚಿತಾ ಡಿ, ಭೌತವಿಜ್ಞಾನ ವಿಭಾಗ ಪುಟ್ಟರಾಜ ಎಂ.ಆರ್, ಪ್ರಾಣಿಶಾಸ್ತ್ರ ವಿಭಾಗದ ಪುಷ್ಪಾ ಜೆ, ಇಂಗ್ಲಿಷ್ ವಿಭಾಗದ ವಿಜಯಲಕ್ಷ್ಮಿ ಬಿ.ಎಂ, ಮತ್ತು ಕನ್ನಡ ವಿಭಾಗದ ಅನುಷಾ ಎಂ.ಎ. ಅವರು ತಲಾ ಮೂರು ಚಿನ್ನಗಳೊಂದಿಗೆ ಹೆಚ್ಚು ಚಿನ್ನದ ಪದಕ ಗಳಿಸಿದವರ ಪಟ್ಟಿಗೆ ಸೇರಿದ್ದಾರೆ.

1003589893
ಏಳು ಚಿನ್ನದ ಪದಕ ಗಳಿಸಿದ ನಯನ ಎನ್ ಬಿ

ಇವರಲ್ಲದೆ ಅರ್ಥಶಾಸ್ತ್ರ ವಿಭಾಗದಲ್ಲಿ ಎಸ್‌ಬಿಸಿ ಪ್ರಥಮ ದರ್ಜೆ ಕಾಲೇಜಿನ ಕೋನೇನ್ ತಬಸುಮ್, ಪತ್ರಿಕೋದ್ಯಮ ವಿಭಾಗದ ಚಂದನ ವಿ.ಎಂ, ಇತಿಹಾಸ ಮತ್ತು ಪ್ರಾಚ್ಯ ಶಾಸ್ತ್ರ ವಿಭಾಗದಲ್ಲಿ ಪ್ರದೀಪಕುಮಾರ ಬಿ, ಸಸ್ಯಶಾಸ್ತ್ರ ವಿಭಾಗದ ಪ್ರಿಯಾ ಎಂ, ಎಂಪಿಇಡಿಯಲ್ಲಿ ಗಗನ ಎ.ಎಂ, ರಸಾಯನಶಾಸ್ತ್ರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚೌಡೇಶ್ವರಿ ಟಿ, ಗಣಕ ವಿಜ್ಞಾನ ವಿಭಾಗದ ಸುಮತಿ ಎಚ್.ಪಿ, ಆಹಾರ ತಂತ್ರಜ್ಞಾನ ವಿಭಾಗದ ನಿತೀಶ್ ಕೆ.ಗೌಡ, ಸೂಕ್ಷ್ಮಜೀವಿ ಶಾಸ್ತ್ರ ವಿಭಾಗದ ಗಾಯತ್ರಿ ದೀಪಿಕಾ ಬಿ ಅವರು ತಲಾ ಎರಡು ಬಂಗಾರದ ಪದಕಗಳನ್ನು ಗಳಿಸಿದ್ದಾರೆ.

“ಅರ್ಥಶಾಸ್ತ್ರ ವಿಭಾಗದಲ್ಲಿ ಶಿವಗಂಗೋತ್ರಿ ಆವರಣದ ಕಾವ್ಯಾ ಆರ್, ಕನ್ನಡ ವಿಭಾಗದಲ್ಲಿ ಚಿತ್ರದುರ್ಗ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ಬೋರಯ್ಯ ಸಿ.ಸಿ, ರಾಜ್ಯಶಾಸ್ತ್ರ ವಿಭಾಗದ ಸಿಂಧು ಎಚ್ ಮತ್ತು ಅಮೂಲ್ಯ ಜಿ.ಎಂ., ಸಮಾಜಶಾಸ್ತ್ರ ವಿಭಾಗದಲ್ಲಿ ಶುಭಾ ಪಿ.ಒ, ಉರ್ದು ವಿಭಾಗದಲ್ಲಿ ಶುಬ್ನಮ್ ಬಳಿಗಾರ, ಎಂಎಸ್‌ಡಬ್ಲ್ಯು ವಿಭಾಗದಲ್ಲಿ ಚಿಕ್ಕಮ್ಮ ಎಂ., ಎಂ.ಕಾಂನಲ್ಲಿ ತೇಜರಾಜ ಎಸ್.ಎ, ಎಂಬಿಎ ವಿಭಾಗದಲ್ಲಿ ಪಾವನಿ ಎಸ್, ಪಲ್ಲವಿ ಕೆ.ಎಸ್, ಎಂಇಡಿಯಲ್ಲಿ ಸಮ್ರಿನ್ ಎಂ., ಜೀವರಸಾಯನಶಾಸ್ತ್ರ ವಿಭಾಗದ ಜೈವಿಕ ತಂತ್ರಜ್ಞಾನ ವಿಭಾಗದ ಧನರಾಜ್ ಆರ್.ಕೆ, ಅಪರಾಧಶಾಸ್ತ್ರ ವಿಭಾಗದ ಐಶ್ವರ್ಯ ಒ.ಎಸ್, ಮತ್ತು ಯೋಗ ವಿಜ್ಞಾನ ವಿಭಾಗದಲ್ಲಿ ಬಾಳಾಸಾಹೇಬ ಸುರಪುರ ಅವರು ತಲಾ ಒಂದೊಂದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ನಾತಕ ಕಲಾ ಪದವಿ(ಬಿಎ)ಯಲ್ಲಿ ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕ ಡಿ.ಆರ್., ವಾಣಿಜ್ಯ (ಬಿ.ಕಾಂ) ಪದವಿಯಲ್ಲಿ ದಾವಣಗೆರೆ ಎಜಿಬಿ ಪ್ರಥಮ ದರ್ಜೆ ಕಾಲೇಜಿನ ಕೀರ್ತನಾ ಎಸ್ ಮತ್ತು ಶಿಕ್ಷಣ (ಬಿಇಡಿ) ಪದವಿಯಲ್ಲಿ ದಾವಣಗೆರೆಯ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಕಾಲೇಜಿನ ಹಜ್ಮಾ ಜೆ. ಅವರು ತಲಾ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

“ದೃಶ್ಯಕಲಾ ಮಹಾವಿದ್ಯಾಲಯದ ಐಶ್ವರ್ಯ ಎಲಿಗಾರ, ಬಿಸಿಎ ಪದವಿಯಲ್ಲಿ ಇಂಟರ್‌ಫೇಸ್ ಕಂಪ್ಯೂಟರ್ ಅಪ್ಲಿಕೇಶನ್ ಕಾಲೇಜಿನ ಪಿ.ವೆಂಕಟದುರ್ಗಾ ಪ್ರಸಾದ,  ಬಿಎಸ್‌ಸಿಯಲ್ಲಿ ಎ.ವಿ.ಕಮಲಮ್ಮ ಕಾಲೇಜಿನ ಹಬೀಬಾ ಮಿಸ್ಬಾ ಅವರು ತಲಾ ಎರಡು ಚಿನ್ನ ಗಳಿಸಿದ್ದಾರೆ. ಬಿಪಿಇಡಿಯಲ್ಲಿ ಮಲ್ಲಾಡಿಹಳ್ಳಿಯ ಶತಮಾನೋತ್ಸವ ದೈಹಿಕ ಶಿಕ್ಷಣ ಕಾಲೇಜಿನ ನಾಗವೇಣಿ ಬಿ., ಬಿಬಿಎನಲ್ಲಿ ಆರ್‌ಜಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ದಿಶಾ ಜೈನ್, ಗಣಿತಶಾಸ್ತ್ರದಲ್ಲಿ ಅತಿಹೆಚ್ಚು ಅಂಕ ಗಳಿಸಿದ ಡಿಆರ್‌ಎಂ ಕಾಲೇಜಿನ ಸುಶ್ಮಿತಾ ರಾವ್ ಹಾಗೂ ದೃಶ್ಯ ಕಲಾ ಕಾಲೇಜಿನ ನವ್ಯ ಎ.ಆರ್. ತಲಾ ಒಂದು ಚಿನ್ನದ ಪದಕವನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಜಾಪ್ರಭುತ್ವ ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಬಿಡಿ ಕುಂಬಾರ , ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಕುಲಸಚಿವ ಎಸ್.ಬಿ.ಗಂಟಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ವಂದನಾ, ವಿವಿಧ ನಿಕಾಯಗಳ ಡೀನರಾದ ಪ್ರೊ.ಕೆ.ವೆಂಕಟೇಶ, ಪ್ರೊ.ಎಂ.ಯು.ಲೋಕೇಶ, ಪ್ರೊ.ಗೋವಿಂದಪ್ಪ, ಪ್ರೊ.ಶ್ರೀನಿವಾಸ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು. .

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...