ದಾವಣಗೆರೆ | ದೇಶ ಎಂದಾಗ ಒಗ್ಗಟ್ಟಿರಬೇಕು, ಆಪರೇಷನ್ ಸಿಂಧೂರ ಪರವಿದ್ದೇವೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

Date:

Advertisements

“ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು” ಎಂದು ದಾವಣಗೆರೆ ಜಿಲ್ಲೆ ಭೇಟಿಯ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಪ್ರತಿಪಾದಿಸಿದರು.

ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪರೇಷನ್ ಸಿಂಧೂರ ವಿಚಾರದ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಶಾಸಕರ ಮಾತು ಸರಿಯಲ್ಲ” ಎಂದು ಖಂಡನೆ ವ್ಯಕ್ತಪಡಿಸಿದರು.

1001999446

“ಹಲವಾರು ವರ್ಷಗಳಿಂದ ಕಂದಾಯ ರಹಿತ ಗ್ರಾಮಗಳ‌ ಜನರಿಗೆ ಕಂದಾಯ ಗ್ರಾಮಗಳನ್ನು ಮಾಡಬೇಕು ಹಾಗೂ ಹಕ್ಕುಪತ್ರ ವಿತರಣೆ ಮಾಡಬೇಕು ಎನ್ನುವುದು ಸುಮಾರು ವರ್ಷಗಳ ಬೇಡಿಕೆಯಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಅವರ ಬೇಡಿಕೆಯನ್ನು ಈಡೇರಿಸುತ್ತಿದೆ” ಎಂದರು.

Advertisements

ಕಾಂಗ್ರೆಸ್‌ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಈಡೇರಿಸುತ್ತೇವೆ ಎಂದು ಜನರಿಗೆ ಭರವಸೆ ನೀಡಿದ್ದೆವು. ಅದರಂತೆ ಇಂದು ನಾವು ನಡೆದುಕೊಳ್ಳುತ್ತಿದ್ದೇವೆ. ಪ್ರತಿಯೊಂದು ಗ್ಯಾರಂಟಿಯನ್ನು ಮನೆಬಾಗಿಲಿಗೆ ತಲುಪಿಸಿದ್ದೇವೆ. ಕಾಂಗ್ರೆಸ್ ಸರ್ಕಾರದಲ್ಲಿ ನುಡಿದಂತೆ ನಡೆದಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

1001999459

ಗ್ರೇಟರ್ ಬೆಂಗಳೂರು ವಿಚಾರಕ್ಕೆ ಆರ್. ಅಶೋಕ್ ವ್ಯಂಗ್ಯದ ಬಗ್ಗೆ ಪ್ರತಿಕ್ರಿಯಿಸಿ, “ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ” ಅನ್ನೋ ರೀತಿ ವಿರೋಧ ಪಕ್ಷದವರು ವಿರೋಧಿಸುತ್ತಿದ್ದಾರೆ. ಗ್ರೇಟರ್ ಗೂ ಕ್ವಾರ್ಟರ್ ಗೂ ವ್ಯತ್ಯಾಸ ಗೊತ್ತಿಲ್ಲದಿರುವಷ್ಟು ಬುದ್ದಿವಂತ ಅಶೋಕಣ್ಣ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕೊಲೆ ಸುಲಿಗೆ ಜಾಸ್ತಿಯಾಗಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ ಹೆಬ್ಬಾಳ್ಳರ್, ಅವರು ಸಿಎಂ ಆದಂತವರು ಅವರಿಗೆ ನಾನೇನು ಹೇಳಲ್ಲ ಪ್ರತಿಕ್ರಿಯಿಸಲು ನಿರಾಕರಿಸಿದರು.

ಇದನ್ನೂ ಓದಿ; ಚಿತ್ರದುರ್ಗ | ಸಾಲಬಾಧೆ, ಬೆಳೆ ಕೈಕೊಟ್ಟದ್ದರಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಕರ್ನಲ್ ಸೋಪಿಯಾ ಖುರೇಷಿ ವಿಚಾರಕ್ಕೆ ಬಿಜೆಪಿ ಸಚಿವರ ಲೇವಡಿ ಖಂಡಿಸಿದ ಲಕ್ಷ್ಮಿ ಹೆಬ್ಬಾಳ್ಳರ್, “ಇಂತಹ ಮನಸ್ಥಿತಿ ಇರುವಂತ ಗಂಡಸರನ್ನು ಕಟುವಾಗಿ ಟೀಕಿಸುತ್ತೇನೆ ಮತ್ತು ಇಂತ ರಾಜಕಾರಣಿಗಳ ಹೇಳಿಕೆ ಪ್ರತಿಯೊಬ್ಬರೂ ಖಂಡಿಸಬೇಕಾಗಿದೆ” ಎಂದರು.

1001999467

ಆಪರೇಷನ್‌ ಸಿಂಧೂರ ನಡೆಸಿದ ಕೇಂದ್ರ ಸರ್ಕಾರದ ಪರವಾಗಿ ನಾವು ಸದಾ ಇರುತ್ತೇವೆ. ಇದರಲ್ಲಿ ಎರಡೂ ಮಾತಿಲ್ಲ ಎಂದು ಸ್ಪಷ್ಟಪಡಿಸಿದರು.‌

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X