ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

Date:

Advertisements

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ ವೇಳೆ ಗಂಡನೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ ದಾವಣಗೆರೆಯ ಎಂಸಿಸಿ ಬಡಾವಣೆಯ ಬಾಲ ನ್ಯಾಯಮಂಡಳಿ ಆವರಣದಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಕಾಡಜ್ಜಿ ಗ್ರಾಮದ ಕಲೀಂವುಲ್ಲಾ ಪತ್ನಿ ಮುಷ್ಕಾನ್ ಬಾನು (26) ಕೊಲೆಯಾದವರು. ಪತಿ ಕಲೀಂವುಲ್ಲಾ (35) ಕೊಲೆ ಮಾಡಿದ ಆರೋಪಿಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರವಾಗಿದ್ದರು ಎಂದು ಮೂಲಗಳು ತಿಳಿಸಿವೆ.‌

ಮಂಗಳವಾರ ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾತುಕತೆ ಮೂಲಕ ವಿಚಾರ ಬಗೆಹರಿಸಿಕೊಳ್ಳಲು ಎಂಸಿಸಿ ಬಡಾವಣೆಯ ಬಾಲ ನ್ಯಾಯ ಮಂಡಳಿಗೆ ಬಂದಾಗ ಆವರಣದಲ್ಲಿಯೇ ಚಾಕುವಿನಿಂದ ಹಿರಿದು ಕೊಂದಿದ್ದಾನೆ ಎನ್ನಲಾಗಿದೆ. ಅಲ್ಲದೇ, ಜಗಳ ಬಿಡಿಸಲು ಮುಂದಾದ ಬಾನು ಅವರ ತಾಯಿ ಪರ್ಜಾನ್ (50) ಅವರಿಗೂ ಕೂಡ ಚಾಕು ಇರಿತಕ್ಕೆ ಒಳಗಾಗಿದ್ದಾರೆ, ಗಾಯಗೊಂಡು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್

ಮುಷ್ಕಾನ್ ಬಾನು ಹಾಗೂ ಕಲೀಂವುಲ್ಲಾ ದಂಪತಿ ಕೌಟುಂಬಿಕ ಕಲಹದ ಕಾರಣದಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಇಬ್ಬರು ಮಕ್ಕಳ ಪಾಲನೆಯ ವಿಚಾರದಲ್ಲಿ ಸೃಷ್ಟಿಯಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಬಾಲ ನ್ಯಾಯಮಂಡಳಿಗೆ ಆಗಮಿಸಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಹಿಳೆಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಮುಷ್ಕಾನ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಮೃತಪಟ್ಟರು ಎನ್ನಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ

"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು...

ದಾವಣಗೆರೆ ನಗರದಲ್ಲಿ ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ; ಯಾವುದೇ ಕಲ್ಲುತೂರಾಟ ನಡೆದಿಲ್ಲ: ಎಸ್‌ಪಿ ಸ್ಪಷ್ಟನೆ

ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ...

ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ...

ದಾವಣಗೆರೆ | ಹೊಲಿಗೆಯಂತ್ರ ತರಬೇತಿಗೆ ಅಪರಿಚಿತರಿಗೆ ಹಣ ಪಾವತಿಸಿ ಮೋಸಹೋಗಬೇಡಿ: ಕೈಗಾರಿಕಾ ಇಲಾಖೆ ಸ್ಪಷ್ಟನೆ

"ದಾವಣಗೆರೆ ಕೌಶಲ್ಯ ಆಧಾರಿತ ಯೋಜನೆಯಡಿ ಇಲಾಖೆಯ ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ...

Download Eedina App Android / iOS

X