ದಾವಣಗೆರೆ | ಏ.15ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ

Date:

Advertisements

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಂಗಳವಾರ ಏಪ್ರಿಲ್ 15 ರಿಂದ 17ರವರೆಗೆ ಮೂರು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ ಹಲವು ಭೇಟಿಯ ಕಾರ್ಯಕ್ರಮಗಳನ್ನು ನಿಗದಿಗೊಳಿಸಿದ್ದು, ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ ನಡೆಸಲಿದ್ದಾರೆ.

ಏಪ್ರಿಲ್ 15ರ ಬೆಳಿಗ್ಗೆ ಜಯದೇವ ವೃತ್ತದ ಬಳಿ ದಲಿತ ಸಂರಕ್ಷಣಾ ಸಮಿತಿ ಆಯೋಜಿಸಿರುವ ಅಂಬೇಡ್ಕರ್ ಜಯಂತಿ ಉತ್ಸವವನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

1001836917
Oplus_0

ಕುಂದು ಕೊರತೆಗೆ ಸಂಬಂಧಪಟ್ಟಂತೆ ಭೇಟಿ ನೀಡುವ ಕಾರ್ಯಕ್ರಮವಿದ್ದು, ಮೊದಲು ಮಧ್ಯಾಹ್ನ 1 ಗಂಟೆಗೆ ಆವರಗೊಳ್ಳ ಗ್ರಾಮದ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಿಂಭಾಗದ ರಾಮಕೃಷ್ಣ ನಗರದ ಸ್ಥಳಾಂತರಗೊಂಡ ನಿವಾಸಿಗಳ ಭೇಟಿ ಮಾಡಲಿದ್ದಾರೆ. ನಂತರ ಸಂಜೆ 5ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

ಏಪ್ರಿಲ್ 16ರ ಬೆಳಿಗ್ಗೆ ಜಗಳೂರು ಸರ್ಕಾರಿ ತಾಲೂಕು ಆಸ್ಪತ್ರೆ, ತಾಲೂಕು ಕಚೇರಿ ಮತ್ತು ಜಗಳೂರಿನ ಗೊಲ್ಲರಹಟ್ಟಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಹಿಳೆಯರ ಕುಂದುಕೊರತೆಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳು, ವಿದ್ಯಾರ್ಥಿನಿಯರ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಬಗ್ಗೆ ಅಂಕಿ ಅಂಶಗಳು, ಮಾಹಿತಿ ಮತ್ತು ಚರ್ಚೆ ನಡೆಸಲಿದ್ದಾರೆ. ಸಂಜೆ ದಾವಣಗೆರೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

1001836931
ಕೃಪೆ;

ಏಪ್ರಿಲ್ 17ರ ಬೆಳಿಗ್ಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಬೆಂಗಳೂರು ಕಚೇರಿಗೆ ಹಿಂತಿರುಗಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಭೇಟಿಯ ವೇಳೆ ಸಂಬಂಧಪಟ್ಟ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಪ್ರವಾಸ ಕಾರ್ಯಕ್ರಮದ ವೇಳೆ ದಾವಣಗೆರೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವ ಕೆಲವು ಸ್ಥಳಗಳಿಗೆ ಭೇಟಿ ನೀಡಲು ಈದಿನ.ಕಾಂ ಮನವಿ ಮಾಡಿತ್ತು. ಅದರಂತೆ ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗದ ಅಧ್ಯಕ್ಷರು ಮನವಿ ಮಾಡಿ ಸೂಚಿಸಿದ್ದ ಸ್ಥಳಗಳಿಗೆ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಈದಿನ ಡಾಟ್ ಕಾಮ್ ಅಭಿನಂದನೆ ತಿಳಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ...

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

Download Eedina App Android / iOS

X