ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Date:

Advertisements

2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಈ ಹಿಂದೆ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹೋರಾಟ ಆಯೋಜಿಸಲಾಗಿತ್ತು. ಆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದಲ್ಲಿ ಕಾನೂನು ತಜ್ಞರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿಯವರ ಭರವಸೆ ಹಿನ್ನೆಲೆಯಲ್ಲಿ ಮುತ್ತಿಗೆ ಹೋರಾಟಕ್ಕೆ ಅಲ್ಪವಿರಾಮ ಹಾಕಲಾಗಿತ್ತು. ಆಗ, ಒಂದು ವಾರ ಅಲ್ಲ. ಜನವರಿ 20ವರೆಗೆ ಕಾಲಾವಕಾಶ ತೆಗೆದುಕೊಂಡು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿಯವರಿಗೆ ಕೋರಲಾಗಿತ್ತು. ಆದರೆ, ಮುಖ್ಯಮಂತ್ರಿಯವರು ಕೊಟ್ಟ ಒಂದು ವಾರದ ಕಾಲಾವಧಿ ಮುಗಿದರೂ ಇನ್ನೂ ಕಾನೂನು ತಜ್ಞರ,
ಸಮುದಾಯದ ಪ್ರಮುಖರ ಸಭೆ ಕರೆದಿಲ್ಲ” ಎಂದು ಕಿಡಿಕಾರಿದ್ದಾರೆ.

“ಮುಖ್ಯಮಂತ್ರಿಯವರ ಮಾತಿಗೆ ಗೌರವ ಕೊಟ್ಟು ಮುತ್ತಿಗೆ ಹೋರಾಟದಿಂದ ಹಿಂದೆ ಸರಿದೆವು. ಈಗ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಅವರು ಜನವರಿ 20ರೊಳಗೆ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ಧಾರ ಪ್ರಕಟಿಸಬೇಕು” ಎಂದು ಆಗ್ರಹಿಸಿದರು.

Advertisements

“ವೀರಶೈವ ಲಿಂಗಾಯತ ಮಹಾಸಭಾದ ಮಹಾಅಧಿವೇಶನದಲ್ಲಿ ಉಪಜಾತಿ ಕಾಲಂನಲ್ಲಿ ಒಳಪಂಗಡಗಳ ಹೆಸರು ಬರೆಸಬಾರದು ಎಂಬ ನಿರ್ಣಯ ಕೈಗೊಂಡಿದ್ದಾರೆ. ಇದರಿಂದ ಸಮಾಜದಲ್ಲಿ ತಪ್ಪು ಸಂದೇಶ ಹೋಗಿದೆ. ಗೊಂದಲವೂ ಮೂಡಿದೆ. ಸಮುದಾಯಗಳು ತಮ್ಮ ಒಳಪಂಡಗಳ ಹೆಸರು ಬರೆಸುವುದು ಅವರ ಅಸ್ಮಿತೆ ಹಾಗೂ ಅವರ ಹಕ್ಕು. ಮಹಾ ಅಧಿವೇಶನದ ವೇದಿಕೆಯಲ್ಲಿದ್ದ ಬಹುತೇಕ ಸ್ವಾಮೀಜಿಗಳೆಲ್ಲರೂ ಒಳಪಂಗಡಗಳ ಹೆಸರು ಬರೆಸಲು ಹೇಳಿದವರೇ ಆಗಿದ್ದಾರೆ. ನಮ್ಮ ಯಾವುದೇ ನಿರ್ಧಾರಗಳು ಸಮುದಾಯದ ಯಾವುದೇ ಒಳಪಂಗಡಗಳ ಸಾಮಾಜಿಕ ನ್ಯಾಯಕ್ಕೆ ತೊಡಕಾಗಬಾರದು. ಆದ್ದರಿಂದ ಮಹಾಸಭಾ ಈ ನಿರ್ಣಯದ ಬಗ್ಗೆ ಪುನರ್ ಪರಿಶೀಲಿಸಬೇಕು” ಎಂದು ಮನವಿ ಮಾಡಿದರು.

“ಹಿಂದಿನ ಸರ್ಕಾರ ಲಿಂಗಾಯತ ಎಲ್ಲ ಒಳಪಂಗಡಗಳನ್ನು ಸೇರಿಸಿ 2ಡಿ ಮಾಡಿತ್ತು. ಆ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ. ಆದ್ದರಿಂದ ನಮಗೆ 2ಡಿ ವಿಚಾರ ಬೇಡ. ಪಂಚಮಸಾಲಿ ಸಮುದಾಯದವರಿಗೆ 2ಎ ಮೀಸಲಾತಿ ಕೊಡಿಸುವುದೊಂದೇ ನಮ್ಮ ಗುರಿ” ಎಂದು ಹೇಳಿದರು.

ಈ ವೇಳೆ, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮಾಜಿ ಶಾಸಕ ಎಚ್.ಎಸ್. ಶಿವಶಂಕರ, ಪರಮೇಶ್ವರ ಗೌಡ್ರು, ವಕೀಲ ಯೋಗೀಶ್, ಅಶೋಕ ಗೋಪನಾಳ, ಮಂಜುನಾಥ ಪೈಲ್ವಾನ್ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X