ದಾವಣಗೆರೆ | ಎಲ್ಲ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಸಕರವೇ ಆಗ್ರಹ

Date:

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

- Advertisement -

ದಾವಣಗೆರೆಯ ಬಿಪಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ” ಕನ್ನಡೇತರ ಭಾಷೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲೂ ಹೆಸರುಗಳನ್ನು ಬರೆಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿ.ಅವಿನಾಶ್, “ರಾಜ್ಯ ಸರ್ಕಾರವು ಕನ್ನಡವನ್ನು ಆಡಳಿತ ಭಾಷೆಯೆಂದು 1953ರಲ್ಲಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಕನ್ನಡ ಭಾಷೆ ಸಾರ್ವಭೌಮತೆ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನ ಕೊಟ್ಟು ರಾಜ್ಯ ಸರ್ಕಾರ ಕನ್ನಡ ಭಾಷೆ ಬಳಕೆಯಾಗಬೇಕೆಂದು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ” ಎಂದು ತಿಳಿಸಿದರು.

“ಕನ್ನಡಿಗರ ಹಿತಾಸಕ್ತಿಗೆ ಕಾನೂನನ್ವಯ ಕನ್ನಡ ಭಾಷೆಯನ್ನು ಸಕ್ರಿಯಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2013ರ ಜುಲೈನಲ್ಲಿ ಎಲ್ಲ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಇರಬೇಕು ಎಂದು ಆದೇಶಿಸಿತ್ತು. ಪ್ರಾಧಿಕಾರದ ತೀರ್ಮಾನವನ್ನು ಸರ್ಕಾರ ಅನುಮೋದಿಸಿದೆ. ಆದರೂ, ಆಮಫಲಕಗಳಲ್ಲಿ ಕನ್ನಡ ಬಳಕೆ ಸರಿಯಾಗಿ ಆಗುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

“ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ದಾವಣಗೆರೆ ಮಹಾನಗರ ಪಾಲಿಕೆ ಅಡಿಯಲ್ಲಿರುವ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡೇತರ ಭಾಷೆಗಳ ನಾಮಫಲಕಗಳು ಹೆಚ್ಚಾಗಿ ಕಂಡುಬರುತ್ತವೆ. ಹೀಗಾಗಿ, ಪಾಲಿಕೆ ಆಯುಕ್ತರು ಈ ಕೂಡಲೇ ಕನ್ನಡೇತರ ಭಾಷೆಯ ನಾಮಫಲಕ ಹೊಂದಿರುವ ಅಂಗಡಿ ಮುಂಗಟ್ಟುಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ನೋಟೀಸ್ ಜಾರಿ ಮಾಡಿ ಕನ್ನಡೇತರ ಭಾಷೆ ಒಳಗೊಂಡಿರುವ ನಾಮ ಫಲಕಗಳನ್ನು ತೆರವುಗೊಳಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...