ದಾವಣಗೆರೆ | ಸರ್ಕಾರಿ ಆರೋಗ್ಯ ಸೇವೆಯ ಸುಧಾರಣೆಗೆ ಆರೋಗ್ಯ ಹಕ್ಕು ಕಾಯ್ದೆ ಜಾರಿಗೊಳಿಸಿ: ಆರೋಗ್ಯ ಆಂದೋಲನ-ಕರ್ನಾಟಕ

Date:

Advertisements

ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ, ತಾಯಂದಿರ ಸಾವು ತಡೆಯುವ ನಿಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಗೆ ಕ್ರಮ, ಆರೋಗ್ಯ ಹಕ್ಕು ಕಾಯ್ದೆಯ ಜಾರಿಗಾಗಿ ಡ್ರಗ್ ಆಕ್ಷನ್ ಫೋರಂ, ಸಾರ್ವತ್ರಿಕ ಆರೋಗ್ಯ ಆಂದೋಲನ-ಕರ್ನಾಟಕ ಆರೋಗ್ಯ ಹಕ್ಕಿನ ಜಾಥಾ ನಡೆಸಿ ಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ದಾವಣಗೆರೆ ಉಪನೋಂದಣಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿತು.

“ಬಳ್ಳಾರಿ ಜಿಲ್ಲಾಸ್ಪತ್ರೆ ಸೇರಿದಂತೆ ಇತರ ಜಿಲ್ಲೆಗಳಲ್ಲಿ ತಾಯಂದಿರ ಸಾವಿಗೆ ಕಾರಣವಾದ ಕಲುಷಿತ ಔಷಧಿಗಳು ಜನರನ್ನು ಬೆಚ್ಚಿಬೀಳಿಸಿವೆ. ಸಾರ್ವಜನಿಕರಿಗೆ ಬಿಡುಗಡೆ ಮಾಡುವ ಮೊದಲು ಪ್ರತಿ ಬ್ಯಾಚ್ ಔಷಧಿಗಳನ್ನು ಗುಣಮಟ್ಟವನ್ನು ಕೆಎಸ್ಎಂಆರ್ಸಿಎಲ್ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುವಂತೆ ನೋಡಿಕೊಳ್ಳುವಲ್ಲಿ ಕೆಎಸ್ಎಂಆರ್ಸಿಎಲ್ ವಿಫಲವಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹೊರಗಿನಿಂದ ಔಷಧಿ ಖರೀದಿಸಲು ಸೂಚಿಸುತ್ತಿರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ನೀವು ಕರ್ನಾಟಕದ ಮುಖ್ಯ ಕಾರ್ಯದರ್ಶಿ, ಹಣಕಾಸು ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಮತ್ತು ಕೇರಳ, ತಮಿಳುನಾಡು ಮತ್ತು ರಾಜಸ್ಥಾನ ರಾಜ್ಯಗಳ ಸಾರ್ವಜನಿಕ ಆರೋಗ್ಯ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಈ ಮೂರು ರಾಜ್ಯಗಳಲ್ಲಿನ ತಜ್ಞರು ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತಂದಿದ್ದಾರೆ, ಇದರ ಪರಿಣಾಮವಾಗಿ ಈ ರಾಜ್ಯಗಳ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಔಷಧಿಗಳ ಪೂರೈಕೆಯಾಗಿದೆ. ಹಾಗಾಗಿ ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದರು.

IMG 20250210 WA0256

“ಕೆಎಸ್ಎಂಆರ್ಸಿಎಲ್ ಸಮಸ್ಯೆಯನ್ನು ಪರಿಹರಿಸುವ ಬದಲು, ಕರ್ನಾಟಕದ ಆರೋಗ್ಯ ಸಚಿವರು ‘ಡ್ರಗ್ ಅಂಡ್ ಕಾಸ್ಕೆಟಿಕ್ ಆಕ್ಟ್ 1940’ ರ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದಾರೆ. ಬದಲಿಗೆ ಕರ್ನಾಟಕ ಆರೋಗ್ಯ ಸಚಿವರು ಪಾರದರ್ಶಕತೆಯನ್ನು ತರುವ ಮೂಲಕ ಕೆಎಸ್ಎಂಆರ್ಸಿಎಲ್ ಅನ್ನು ಸುಧಾರಿಸಬೇಕು. ತಮಿಳುನಾಡು ವೈದ್ಯಕೀಯ ಸೇವಾ ಕೇಂದ್ರದಂತೆ ಪಾರದರ್ಶಕ, ರಾಜಸ್ಥಾನದಂತೆ ರಾಜ್ಯದಲ್ಲಿ ಆರೋಗ್ಯ ಹಕ್ಕು ಕಾಯ್ದೆಯನ್ನು ತಂದು ಜನರಿಗೆ ಉತ್ತಮ ಸೇವೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರೇಗಾ ಕೆಲಸ, ಗೌರವಯುತ ಕೂಲಿ, ನಿರುದ್ಯೋಗ ಭತ್ಯೆಗೆ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ.

“ಈ ಕಾಯ್ದೆ ರಾಜ್ಯದ ನಿವಾಸಿಗಳಿಗೆ ಯಾವುದೇ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಸೇವೆಗಳನ್ನು ಒಳಗೊಂಡಿದೆ. ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಹಕ್ಕುಗಳಿವೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಉಚಿತ ಹೊರ ರೋಗಿ ಮತ್ತು ಒಳರೋಗಿ ಚಿಕಿತ್ಸೆ ವಿಭಾಗ ಸೇವೆಗಳು, ಔಷಧಿಗಳು, ಪೂರ್ವಪಾವತಿ ಅಥವಾ ಪೊಲೀಸ್ ಅನುಮತಿಗಾಗಿ ಕಾಯದೆ ತುರ್ತು ಚಿಕಿತ್ಸೆ ಮತ್ತು ಆರೈಕೆ, ಅನಾರೋಗ್ಯ ಮತ್ತು ಕಾರಣ, ಫಲಿತಾಂಶಗಳು, ಚಿಕಿತ್ಸೆಯ ವೆಚ್ಚದ ಬಗ್ಗೆ ಮಾಹಿತಿ, ಮತ್ತು ಸಂಬಂಧಿತ ದಾಖಲೆಗಳನ್ನು ಕೇಳುವುದು, ನಿರ್ದಿಷ್ಟ ಪರೀಕ್ಷೆಗಳು ಅಥವಾ ಚಿಕಿತ್ಸೆಗಳಿಗೆ ಪೂರ್ವಮಾಹಿತಿ, ಆರೋಗ್ಯ ಆರೈಕೆ ಸಂಸ್ಥೆಗಳಲ್ಲಿನ ಚಿಕಿತ್ಸೆಗಳಲ್ಲಿ ಗೌಪ್ಯತೆ, ಸುರಕ್ಷತೆ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆ, ಕುಂದುಕೊರತೆ ಪರಿಹಾರ ಸೇರಿದಂತೆ ಜನಪರ ಆರೋಗ್ಯದಾಯಕ ಅಂಶಗಳಿದ್ದು, ರಾಜ್ಯದಲ್ಲೂ ಇಂತಹ ಆರೋಗ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸುತ್ತಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಕಬ್ಬು ಬೆಳೆಗಾರರ ಸಂಘದ ನಿರ್ದೇಶಕ ತೇಜಸ್ವಿ ಪಟೇಲ್, ರೈತ ಮುಖಂಡ ಅರುಣ್ ಕುರುಡಿ, ನೆರಳು ಬೀಡಿ ಕಾರ್ಮಿಕರ ಸಂಘಟನೆಯ ಅಧ್ಯಕ್ಷೆ ಜಬೀನಾ ಖಾನಂ, ಕರಿಬಸಪ್ಪ, ಗೋಪಾಲ, ಶರೀನಾ, ಮುಮ್ತಾಜ್, ಲಕ್ಷ್ಮೀ, ಆಶಾ, ಫಾತಿಮಾ ಬಾನು, ಶಬೀನಾ, ನಜೀಮಾ ಬಾನು, ಮೆಹಬೂಬ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X