ಬೀದರ್‌ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

Advertisements

ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯ ಮಾಡುವುದಕ್ಕೆ ಸದಾ ಬದ್ಧನಾಗಿದ್ದೇನೆ. ಅಧಿಕಾರಕ್ಕಿಂತ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಧ್ಯೇಯ. ಸ್ವಚ್ಛ ಆಡಳಿತ ನೀಡುವುದು ನನ್ನ ಗುರಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ ಗ್ರಾಮದಿಂದ ಮಲ್ಕಾಪುರ ವಾಯಾ ದೇವ-ದೇವ ವನ ತನಕ ಸುಮಾರು ₹1ಕೋಟಿ ವೆಚ್ಚದ  ಡಾಂಬರೀಕರಣ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ʼನನ್ನ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಕೊಠಡಿ, ಶೌಚಾಲಯ, ಕಾಂಪೌಂಡ್ ನಿರ್ಮಾಣ, ಸಮುದಾಯ ಭವನ, ಸಾರ್ವಜನಿಕ ಶೌಚಾಲಯ, ಯಾತ್ರಿ ನಿವಾಸ ನಿರ್ಮಾಣ ಹಾಗೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವೆʼ ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆಗಳು ಮಹತ್ವದ ಪಾತ್ರ ವಹಿಸುತ್ತವೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಅಭಿವೃದ್ಧಿಯಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಜನರ ಋಣ ತೀರಿಸುವಂತಹ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು. ರಸ್ತೆ ಕಾಮಗಾರಿ ಗುಣಮಟ್ಟದಿಂದ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೇವಂತಿಗೆʼ ಕೃಷಿಯಲ್ಲಿ ಯಶಸ್ಸು ಕಂಡ ಯುವ ರೈತ : ತಿಂಗಳಿಗೆ ಒಂದು ಲಕ್ಷ ಆದಾಯ!

ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಬಾಬುರಾವ ಮಲ್ಕಾಪುರೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸುಲ್ತಾನಪುರ, ಗ್ರಾಪಂ ಸದಸ್ಯರಾದ ದಾವುದು ತೇಲಿ, ಮಲ್ಲಮ್ಮ ಹೂಗಾರ, ಸಚೀನ ಮಲ್ಕಾಪುರ, ಮುಖಂಡರಾದ ಸಂತೋಷ್ ಸಣ್ಣಗೊಂಡ, ಬಾಬು ಬರಿದಬಾದೆ,  ಓಂಕಾರ, ಸಂಜು ಭಂಡೆ, ಅನೀಲ ತಿಪ್ಪರಗಿ, ನಾಗಮ್ಮ ಹೂಗಾರ, ಸುಧಾಕರ,  ಗುಂಡಪ್ಪ,  ರಾಹುಲ್, ಸಂಗಮೇಶ ಹಳ್ಳಿ, ಶಿವಕುಮಾರ ನಾಗಲಗಿದ್ದಿ, ಕುಶಲರಾವ, ದೀಲಿಪ್ ಗುಮ್ಮಾ, ಶೇಖರ್ ಕೋಳಾರ, ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X