ಗುಬ್ಬಿಯಲ್ಲಿ ನೊಣವಿನಕೆರೆ ಸ್ವಾಮೀಜಿಗಳಿಂದ ಧನುರ್ಮಾಸದ ಇಷ್ಟಲಿಂಗ ಪೂಜೆ.

Date:

Advertisements

ವೀರಶೈವ ಸಮಾಜ, ಪಾರ್ವತಿ ವೀರಶೈವ ಲಿಂಗಾಯಿತ ಮಹಿಳಾ ಸಮಾಜ ಹಾಗೂ ಗುಬ್ಬಿ ನಗರ ವೀರಶೈವ ಯುವಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಧನುರ್ಮಾಸದ ಇಷ್ಟಲಿಂಗ ಪೂಜೆ ಕಾರ್ಯಕ್ರಮವನ್ನು ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ನಡೆಸಿಕೊಟ್ಟರು.

ಶನಿವಾರ ಬೆಳಿಗ್ಗೆ ಪಟ್ಟಣದ ವೀರಶೈವ ಸಮಾಜದ ಕಚೇರಿ ಆವರಣದಲ್ಲಿ ನಡೆದ ಇಷ್ಟಲಿಂಗ ಪೂಜೆ ವಿಧಿವತ್ತಾಗಿ ನಡೆಸಿದ ಶ್ರೀಗಳು ಗೋಸಲ ಶ್ರೀ ಚನ್ನಬಸವೇಶ್ವರರ ಪುಣ್ಯಕ್ಷೇತ್ರದಲ್ಲಿ ಈ ವಿಶೇಷ ಪೂಜೆ ಸಾರ್ಥಕ ಕಾರ್ಯವಾಗಿದೆ ಎಂದರು.

ವೀರಶೈವ ಲಿಂಗಾಯಿತ ಧರ್ಮ ವಿಶ್ವಮಾನ್ಯ ಪಡೆದುಕೊಂಡು ತನ್ನದೇ ವೈಶಿಷ್ಟ್ಯತೆ ಗಳಿಸಿಕೊಂಡಿದೆ. ನಮ್ಮ ಸಮಾಜ ಲಿಂಗ ಪೂಜೆ, ಜಂಗಮ ಪೂಜೆ ಮೂಲಕವೇ ಲೋಕ ಕಲ್ಯಾಣ ಕಾರ್ಯ ಮಾಡಿದೆ. ಶರಣರ ಮಾರ್ಗಾನುಸಾರ ಸಾಮಾಜಿಕ ಮನ್ನಣೆಯನ್ನು ಧಾರ್ಮಿಕ ಕಾರ್ಯ ಮೂಲಕವೇ ಗಳಿಸಿದ್ದೇವೆ. ಗುರು ಪರಂಪರೆಯನ್ನು ಎಂದೂ ಮರೆಯದ ವೀರಶೈವ ಲಿಂಗಾಯಿತ ಸಮಾಜ ಗುರುಪೀಠಗಳನ್ನು ಸಹ ಆರಾಧಿಸಿ ಅರ್ಥಪೂರ್ಣ ಬದುಕು ನಡೆಸಿದ್ದಾರೆ. ಈ ಹಿನ್ನಲೆ ನಮ್ಮ ಧರ್ಮ ಆಚರಣೆ, ಪೂಜೆ ಪುನಸ್ಕಾರಗಳನ್ನು ನಿಲ್ಲಿಸಿದೆ ಮುಂದುವರೆಸಬೇಕು. ಈ ಕಾರ್ಯ ಗುಬ್ಬಿಯಲ್ಲಿ ಯುವಕರು ನಡೆಸಿಕೊಂಡು ಬಂದಿರುವುದು ಗಮನಾರ್ಹ ವಿಚಾರ ಎಂದರು.

Advertisements

ತ್ರಿವಿಧ ದಾಸೋಹ ಮೂಲಕವೇ ನಮ್ಮ ಸಮಾಜ ವಿಶೇಷವಾಗಿ ಗುರುತಿಸಿಕೊಂಡಿದೆ. ಯಾವುದೇ ಕಾರ್ಯಕ್ರಮ ನಡೆದರೂ ಅಲ್ಲಿ ಅಕ್ಷರ, ಅನ್ನ, ಆಶ್ರಯ ಮೂರು ದಾಸೋಹ ನಡೆದೇ ನಡೆಯುತ್ತದೆ. ಹೀಗೆ ಸಮಾಜದ ಮುಖ್ಯವಾಹಿನಿಗೆ ಬಂದ ವೀರಶೈವ ಲಿಂಗಾಯಿತ ಸಮುದಾಯ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ನಮ್ಮ ಆಚರಣೆ ಪದ್ಧತಿ ಸಂಸ್ಕೃತಿ ಬೆಳೆಸಿಕೊಂಡು ಹೋಗುವ ರೀತಿ ಸಂಸ್ಕಾರ ಕಲಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಜಿ.ಆರ್.ಶಿವಕುಮಾರ್, ಸಮಾಜದ ಮುಖಂಡರಾದ ಮಂಜುನಾಥ್, ಕಾಂತರಾಜು, ಕಾಯಿ ಸುರೇಶ್, ಗಂಗಾಧರ್, ಅನಿಲ್ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X