ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

Date:

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ.

- Advertisement -

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಡ್ರೋನ್ ಯಂತ್ರ ಬಳಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

ಈ ಬಗ್ಗೆ ಸ್ಥಳದಿಂದ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿರುವ ನಮ್ಮ ಪ್ರತಿನಿಧಿ ಭೀಮಾ ನಾಯ್ಕ್‌, “ಸಾಕ್ಷಿ ದೂರುದಾರ ಗುರುತಿಸಿದ್ದ ಈವರೆಗಿನ ಯಾವುದೇ ಸ್ಥಳದಲ್ಲಿ ಜಿಪಿಎಸ್ ತಂತ್ರಜ್ಞಾನವನ್ನು ಎಸ್‌ಐಟಿ ಬಳಸಿಲ್ಲ. ಸೋಮವಾರ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಬರುವಾಗ ಜಿಪಿಎಸ್ ಯಂತ್ರವನ್ನು ತಂದಿದ್ದಾರೆ. ಅದರ ಫಲಿತಾಂಶದ ಆಧಾರದ ಮೇಲೆ ಉತ್ಖನನ ನಡೆಸುವುದಕ್ಕೆ ಮುಂದಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಹಲವಾರು ವಿದ್ಯುತ್ ಕಂಬಗಳ ಸಹಿತ ಹಲವು ಅಡಚಣೆಗಳಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಯಂತ್ರ ಬಳಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಪಿಎಸ್ ತಂತ್ರಜ್ಞಾನದ ಬಳಕೆ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಹೇಳಿಕೆ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 10ರಂದು ಯಾವುದೇ ಕಾರ್ಯಾಚರಣೆ ನಡೆದಿರಲಿಲ್ಲ. ಆ. 9ರಂದು ಧರ್ಮಸ್ಥಳದ ಬಾಹುಬಲಿ ಬೆಟ್ಟದ ಸಮೀಪ ಶೋಧ ನಡೆದಿತ್ತು. ಬಾಹುಬಲಿ ಅರಣ್ಯದಲ್ಲಿ 16 ಮತ್ತು 16-ಅ ಗುರುತು ಮಾಡಿದ ಎರಡು ಜಾಗದಲ್ಲಿ ಕಾರ್ಯಾಚರಣೆ ನಡೆದಿತ್ತು. ಆದರೆ, ಈ ವೇಳೆ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಬಬಲಾದಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 1.67 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...