ಧರ್ಮಸ್ಥಳ ಪ್ರಕರಣ | ಮೂಳೆಗಳನ್ನು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದ ಎಸ್‌ಐಟಿ

Date:

Advertisements

ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್‌ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ.

ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್‌ಐಟಿ ಅಧಿಕಾರಿಗಳು ಎರಡು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದಿದ್ದಾರೆ. ಎಸ್‌ಐಟಿ ಆ ಮೂಳೆಗಳನ್ನು ವೈಜ್ಞಾನಿಕ ತನಿಖೆಗೊಳಪಡಿಸಲಿದ್ದು, ಎಫ್‌ಎಸ್‌ಎಲ್ ಟೀಮ್ ಎರಡು ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ತೆಗೆದುಕೊಂಡು ಹೋಗಿದ್ದಾರೆ.

ಉತ್ಖನನ ಕಾರ್ಯಕ್ಕೆ ಕರೆದೊಯ್ದಿದ್ದ ಕಾರ್ಮಿಕರನ್ನು ಗುರುವಾರ ಸಂಜೆ 6ರ ಸುಮಾರಿಗೆ ಹೊರಕ್ಕೆ ಕಳುಹಿಸಿದ್ದ ಅಧಿಕಾರಿಗಳು, ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿದ ಬಳಿಕ ಹಿಂದಿರುಗಿದ್ದಾರೆ. ಬರುವ ವೇಳೆ ಎರಡು ಡಬ್ಬಗಳಲ್ಲಿ ಸಿಕ್ಕಿರುವ ಮೂಳೆಗಳನ್ನು ಸೀಲು ಮಾಡಿ, ಹೊರತಂದಿದ್ದಾರೆ.

ಮೂರನೇ ದಿನವಾದ ಗುರುವಾರ ಬೆಳಗ್ಗೆ ಮೂಳೆಗಳು ಪತ್ತೆಯಾಗಿರುವುದಾಗಿ ವರದಿಯಾಗಿತ್ತು. ಸಂಜೆಯ ವೇಳೆಗೆ ಎಷ್ಟು ಮೂಳೆಗಳು ಸಿಕ್ಕಿದೆ ಎಂಬುದರ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಅಧಿಕೃತ ಪ್ರಕಟಣೆಯನ್ನು ಹೊರಡಿಸಿಲ್ಲ. ಸದ್ಯ ಮೂರನೇ ದಿನದ ಉತ್ಖನನ ಕಾರ್ಯವನ್ನು ಎಸ್‌ಐಟಿ ಸ್ಥಗಿತಗೊಳಿಸಿದ್ದು, ಶುಕ್ರವಾರ ಸ್ಪಾಟ್‌ 7ರಲ್ಲಿ ಉತ್ಖನನ ಕಾರ್ಯವನ್ನು ನಡೆಸಲಿದೆ ಎಂದು ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X