ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್‌ನಲ್ಲಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ

Date:

Advertisements

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯ ಬಂಗ್ಲೆಗುಡ್ಡೆದಲ್ಲಿ ಶುಕ್ರವಾರವೂ ಅಸ್ಥಿಪಂಜರಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು ನಡೆಸಿದರು.

ಸಾಕ್ಷಿ ದೂರುದಾರ ಕಾಡಿನಲ್ಲಿ ತೋರಿಸಿದ 7 ಮತ್ತು8 ನೇ ಜಾಗವನ್ನು ವೈದ್ಯರು,‌ ಎಫ್‌ಎಸ್‌ಎಲ್, ಅರಣ್ಯ, ಪೊಲೀಸ್ ಸೇರಿದಂತೆ ಹಲವು ಅಧಿಕಾರಗಳ ಸಮ್ಮುಖದಲ್ಲಿ ಎಸ್‌ಐಟಿ ತಂಡದವರು ಭೂಮಿಯನ್ನು ಅಗೆಯಿಸಿದ್ದಾರೆ. ಎಸ್‌ಐಟಿ ತಂಡದ ಜತೆಗೆ 20ಕ್ಕೂ ಹೆಚ್ಚು ಕಾರ್ಮಿಕರು ಹಾರೆ, ಗುದ್ದಲಿಯೊಂದಿಗೆ ಅನಾಮಿಕ ಗುರುತು ಮಾಡಿದ್ದ ಜಾಗಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಭೂಮಿಯನ್ನು‌ ಅಗೆಯಲು ಜೆಸಿಬಿಯನ್ನು ಕೂಡ ಕಾಡಿನೊಳಗೆ ಕೊಂಡೊಯ್ಯಲಾಗಿತ್ತು.

ನೇತ್ರಾವತಿ ನದಿ ಪಕ್ಕದಲ್ಲಿ ಅನಾಮಿಕ ವ್ಯಕ್ತಿ ತೋರಿಸಿದ 7 ಮತ್ತು 8ನೇ ಪಾಯಿಂಟ್‌ನಲ್ಲಿ ಸ್ಥಳ ಅಗೆದ ಸಂದರ್ಭದಲ್ಲಿ ಇದುವರೆಗೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿರುವುದಿಲ್ಲ ಎಂದು ಖಚಿತ ಮೂಲಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದೆ.

Advertisements

ಸ್ಥಳ ಅಗೆಯುವ ವೇಳೆ ಅನಾಮಿಕ ವ್ಯಕ್ತಿ, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ಐಟಿಯ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳದಲ್ಲಿ ಇದ್ದರು. 7 ಮತ್ತು 8ನೇ ಸ್ಥಳಗಳು ನೇತ್ರಾವತಿ ಸೇತುವೆ ಬಳಿ ಇರುವುದರಿಂದ ಶೋಧನಾ ಸ್ಥಳದಲ್ಲಿ ಬಿಗಿಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಗೆಯುವ ಸ್ಥಳಗಳ ಸುತ್ತ ಹಸಿರು ನೆಟ್ ಅಳವಡಿಸಿ ಕಾರ್ಯಾಚರಣೆ ನಡೆಸಿದರು.

ಧರ್ಮಸ್ಥಳದ ಬಂಗ್ಲೆಗುಡ್ಡೆ ಮತ್ತು ನೇತ್ರಾವತಿ ನದಿಯ ಬಳಿ ಅನಾಮಿಕ ವ್ಯಕ್ತಿ ಒಟ್ಟು 13 ಜಾಗಗಳನ್ನು ಗುರುತಿಸಿದ್ದಾನೆ. ಅವುಗಳಲ್ಲಿ ಈಗಾಗಲೇ ಒಟ್ಟು 8 ಜಾಗಗಳನ್ನು ಅಗೆಯಲಾಗಿದೆ. ಆತ ತೋರಿಸಿದ್ದ 6ನೇ ಜಾಗದಲ್ಲಿ ಗುರುವಾರ ಕೆಲವೊಂದು ಮೂಳೆಗಳು ಪತ್ತೆಯಾಗಿತ್ತು. ಉಳಿದಂತೆ ನಡೆಸಿದ್ದ ಏಳು ಜಾಗಳಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.

ಗ್ರಾಮ ಪಂಚಾಯತ್‌ನಲ್ಲಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ

ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಶುಕ್ರವಾರ ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್‌ನಿಂದ 1995 ರಿಂದ 2014ರ ವರೆಗಿನ ಯುಡಿಆರ್ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂದು ಖಚಿತ ಮೂಲಗಳು ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದೆ.

ಈದಿನ ಡಾಟ್‌ ಕಾಮ್‌ ಜೊತೆಗೆ ಮಾತನಾಡಿದ್ದ ಧರ್ಮಸ್ಥಳದ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಅವರು, “ನಮ್ಮಲ್ಲಿ ಎಲ್ಲ ಅಪರಿಚಿತ ಶವಗಳ ಸಂಸ್ಕಾರ ಮಾಡಿರುವ ದಾಖಲೆಗಳಿವೆ. ಅವುಗಳನ್ನು ಎಸ್‌ಐಟಿ ಅಧಿಕಾರಿಗಳು ಕೇಳಿದಲ್ಲಿ ನೀಡುತ್ತೇವೆ ಎಂದು ತಿಳಿಸಿದ್ದೆವು. ಇಂದು ಬಂದು ತೆಗೆದುಕೊಂಡು ಹೋಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಪೊಲೀಸರಿಂದ 15 ವರ್ಷಗಳ ಅಸ್ವಾಭಾವಿಕ ಸಾವುಗಳ ದಾಖಲೆ ನಾಶ!

ಶುಕ್ರವಾರದ ಕಾರ್ಯಾಚರಣೆ ಅಂತ್ಯಗೊಳಿಸಿದ್ದು, ಶನಿವಾರ 9ನೇ ಪಾಯಿಂಟ್‌ನಿಂದ ಕಾರ್ಯಾಚರಣೆ ಮುಂದುವರಿಯಲಿದೆ. ಇವುಗಳಲ್ಲಿ ಯಾವುದಾದರೂ ಅಸ್ಥಿಪಂಜರಗಳು ಲಭ್ಯವಾಗಲಿದೆಯೇ ಎಂದು ಕಾದುನೋಡಬೇಕಿದೆ.

DSC04798 01.jpeg min
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X