ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

Date:

Advertisements

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ಸೌಜನ್ಯ ಪರ ಹೋರಾಟಗಾರರು ಪಾಂಗಳ ಕ್ರಾಸ್ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳದ ಕೆಲವರು ಪೊಲೀಸರ ಮುಂದೆಯೇ ವಾಗ್ವಾದ ನಡೆಸಿದರು. ಈ ವೇಳೆ ಎರಡು ಗುಂಪುಗಳು ಮುಖಾಮುಖಿ ವಾಗ್ವಾದ ನಡೆಸುತ್ತಿದ್ದಂತೆಯೇ ಪೊಲೀಸರು ಲಾಠಿ ಬೀಸುವ ಮೂಲಕ ಗುಂಪನ್ನು ಚದುರಿಸಲು ಯತ್ನಿಸಿದರು. ಆದರೆ, ಈ ವೇಳೆ ಕೆಲವರು ಪೊಲೀಸರನ್ನೇ ದೂಡಿದ್ದಾರೆ.

ಆ ಬಳಿಕ ಸ್ಥಳಕ್ಕೆ ಇನ್ನಷ್ಟು ಜನ ಜಮಾವಣೆಗೊಂಡಿದ್ದಲ್ಲದೇ, ಸ್ಥಳದಲ್ಲಿ ಎರಡು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ, ಸೌಜನ್ಯ ಮನೆಗೆ ದಾರಿ ಎಂದು ಹಾಕಿದ್ದ ಬೋರ್ಡಿಗೂ ಹಾನಿ ಎಸಗಿದ್ದಾರೆ. ಆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಮೈಕ್ ಮೂಲಕ ಎಚ್ಚರಿಕೆ ನೀಡಿ ಗುಂಪನ್ನು ಚದುರಿಸಿದ್ದಾರೆ.

Advertisements

ಪೊಲೀಸ್ ಸ್ಟೇಷನ್ ಮುಂದೆ ಧರ್ಮಸ್ಥಳ ಬೆಂಬಲಿಗರಿಂದ ಪ್ರತಿಭಟನೆ

ಈ ನಡುವೆ ಧರ್ಮಸ್ಥಳ ಪೊಲೀಸ್ ಸ್ಟೇಷನ್ ಮುಂದೆ ಸೇರಿರುವ ಧರ್ಮಸ್ಥಳ ದೇವಸ್ಥಾನದ ಬೆಂಬಲಿಗರು, ಕ್ಷೇತ್ರದ ಹೆಸರನ್ನು ಹಾಳುಗೆಡವಲು ಯತ್ನಿಸಲಾಗುತ್ತಿದೆ. ಕಮ್ಯುನಿಷ್ಟ್ ಪ್ರೇರಿತ ಷಡ್ಯಂತ್ರ ಇದು ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್‌ಪಿ ಹಾಗೂ ಡಿಎಸ್‌ಪಿ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದು, ಧರಣಿ ಕುಳಿತಿದ್ದಾರೆ.

WhatsApp Image 2025 08 06 at 7.54.36 PM
WhatsApp Image 2025 08 06 at 7.48.30 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X