ಧರ್ಮಸ್ಥಳ ಗಲಾಟೆ | ಬಿಗ್‌ಬಾಸ್ ಸ್ಫರ್ಧಿ ರಜತ್ ಕುಟುಂಬಕ್ಕೆ ಜೀವ ಬೆದರಿಕೆ: ದೂರು ದಾಖಲಿಸಿದ ದಂಪತಿ

Date:

Advertisements

ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಡಿಜಿಐಜಿಪಿ ಕಚೇರಿಗೆ ಆಗಮಿಸಿ, ತಮಗೆ ಬಂದಿರುವ ಜೀವ ಬೆದರಿಕೆ ಸಂದೇಶಗಳು ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

ರಜತ್ ಅವರ ಪತ್ನಿ ಅಕ್ಷತಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ‘ಕೊಲೆ ಮಾಡುವೆ, ಕತ್ತರಿಸುವೆ’ ಎಂಬ ಬೆದರಿಕೆ ಸಂದೇಶಗಳು ಬಂದಿವೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. ಸದ್ಯ ಈ ದೂರು ಸೈಬರ್ ಠಾಣೆಗೆ ವರ್ಗಾವಣೆಯಾಗಿದೆ.

Advertisements

ದೂರು ನೀಡಿದ ಬಳಿಕ ಈ ಬಗ್ಗೆ ಮಾತನಾಡಿರುವ ರಜತ್, “ನಾವು ಧರ್ಮಸ್ಥಳಕ್ಕೆ ಸೌಜನ್ಯಗೆ ನ್ಯಾಯ ಕೇಳಲು ಹೋಗಿದ್ದೆವು. ಯಾವುದೇ ಜಾತಿ, ಧರ್ಮ, ದೇವಸ್ಥಾನದ ಬಗ್ಗೆ ನಾವು ಮಾತನಾಡಿಲ್ಲ. ಹಾಡಹಗಲೇ ನಮ್ಮ ಕಣ್ಣ ಮುಂದೆ ಗಲಾಟೆ ನಡೆದಿದೆ. ಹಲ್ಲೆ ಮಾಡಿದವರ ವಿರುದ್ಧ ಮತ್ತು ಬೆದರಿಕೆ ಸಂದೇಶ ಕಳುಹಿಸಿದವರ ವಿರುದ್ಧ ದೂರು ಕೊಟ್ಟಿದ್ದೇವೆ. ನಾವು ಬೆದರಿಕೆಗಳಿಗೆ ಹೆದರುವವರಲ್ಲ” ಎಂದರು.

ಬಳಿಕ ಮಾತನಾಡಿದ ಅಕ್ಷತಾ ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ನಲ್ಲಿ, ‘ನಿನ್ನ ಗಂಡನನ್ನು ವಾಪಸ್ ಕರೆಸಿಕೊ, ಇದು ಮಂಡ್ಯ ಅಲ್ಲ, ಕರಾವಳಿ’ ಎಂಬ ಸಂದೇಶವನ್ನು ಶಾರದಾ ಭಟ್ ಎಂಬುವವರು ಕಳಿಸಿದ್ದಾರೆ. ಇದು ಜೀವ ಬೆದರಿಕೆಯಾಗಿದ್ದು, ದೂರು ನೀಡಿದ್ದೇವೆ. ನಾವು ಮಂಡ್ಯದವರು, ಹುಟ್ಟಿ ಬೆಳೆದಿದ್ದು ಮಂಡ್ಯದಲ್ಲಿ. ವಾಪಸ್ ಕರೆಯುವ ಅವಶ್ಯಕತೆ ಇಲ್ಲ ಎಂದರು.

ಏನಿದು ಬೆಳವಣಿಗೆ?

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿದ್ದರು. ಸ್ಥಳೀಯ ಯೂಟ್ಯೂಬರ್‌ಗಳಿಗೆ ಪಾಂಗಳ ಕ್ರಾಸ್ ಬಳಿ ಸಂದರ್ಶನ ನೀಡುತ್ತಿದ್ದ ವೇಳೆ ಕೆಲವು ಗೂಂಡಾಗಳು ಬಂದು ಯೂಟ್ಯೂಬರ್ಸ್‌ಗಳಿಗೆ ಹಲ್ಲೆ ನಡೆಸಿದ್ದರು. ಈ ವೇಳೆ ರಜತ್ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಬಳಿಕ ಅಲ್ಲಿಂದ ತೆರಳಿದ್ದ ರಜತ್, ಈ ಘಟನೆಯ ಬಳಿಕ ತನಗೆ ಜೀವ ಬೆದರಿಕೆ ಬಂದಿರುವುದಾಗಿ ತಿಳಿಸಿದ್ದಾರೆ.

ದೂರು 3
ಶಾರದಾ ಭಟ್ ಎಂಬುವವರ ಫೇಸ್‌ಬುಕ್ ಪೋಸ್ಟ್

ಅಲ್ಲದೇ, ಸೌಜನ್ಯ ಮನೆಗೆ ಭೇಟಿಯ ಸಂಬಂಧ ಶಾರದಾ ಭಟ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ, ‘ಬಿಗ್ ಬಾಸ್ ರಜತ್ ಅವರ ಪತ್ನಿ ಹೆಸರು ಅಕ್ಷತಾ. ಇವರು ರಜತ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ, ಒಂದು ಗಂಡು ಮತ್ತು ಒಂದು ಹೆಣ್ಣು.ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ ಅಕ್ಷತಾ ಅವರೇ…ಇದು ಮಂಡ್ಯ ಅಲ್ಲ ಕರಾವಳಿ…… ” ಎಂದು ಪೋಸ್ಟ್‌ ಮಾಡಿದ್ದರು. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X