ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

Date:

  • ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್
  • ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ) ಕ್ಕೆ ಸಂಬಂಧಿಸಿ, 11 ವರ್ಷಗಳ ಬಳಿಕ ಆರೋಪಿಯನ್ನು ದೋಷ ಮುಕ್ತಗೊಳಿಸಲಾಗಿದೆ.

- Advertisement -

ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್‌ನನ್ನು ದೋಷಮುಕ್ತಗೊಳಿಸಿ, ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿ ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ ಎಂದು ಸಿಬಿಐ ನ್ಯಾಯಾಧೀಶ ಸಂತೋಷ್ ಸಿ.ಬಿ ಆದೇಶಿಸಿದ್ದಾರೆ. ಆರೋಪಿ ಸಂತೋಷ್ ರಾವ್ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ವಕೀಲರಾದ ಮೋಹಿತ್ ಕುಮಾರ್, ‘ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಅತ್ಯಾಚಾರ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಸೌಜನ್ಯ ಸತ್ತಾಗ ವಿಪರೀತ ಮಳೆ ಬರುತ್ತಿತ್ತು. ಆಕೆಯ ಬ್ಯಾಗಿನಲ್ಲಿದ್ದ ಪುಸ್ತಕಗಳು ಒದ್ದೆಯಾಗಿರಲಿಲ್ಲ. ಅದೇ ದಿನ 500 ಜನ ಹುಡುಕಾಟ ನಡೆಸಿದ್ದರೂ ಕೂಡ ಯಾರಿಗೂ ಪತ್ತೆಯಾಗಿರಲಿಲ್ಲ. 50 ಮೀಟರ್ ಅಂತರದಲ್ಲಿ ಟೆಂಟ್‌ನಲ್ಲಿ ವಾಸ ಎಂದು ಅನುಮಾನ ವ್ಯಕ್ತಪಡಿಸಿ ಸಂತೋಷ್ ರಾವ್‌ನನ್ನು ಬಂಧಿಸಲಾಗಿತ್ತು. ಅಲ್ಲೇ ಹತ್ತಿರದಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ವಿಡಿಯೋ ಸಂಗ್ರಹಿಸಿಲ್ಲ. ಪೋಸ್ಟ್ ಮಾರ್ಟಂ ರಾತ್ರೋರಾತ್ರಿ ಮಂದಬೆಳಕಿನಲ್ಲಿ ಮಾಡಿದ್ದಾರೆ’ ಎಂಬ ಎಲ್ಲ ಅಂಶಗಳನ್ನು ಇಟ್ಟುಕೊಂಡು ವಾದ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಚಿಕ್ಕಬಳ್ಳಾಪುರ | 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ; ಶಿಕ್ಷಕಿ ವಿರುದ್ಧ ಎಫ್‌ಐಆರ್

ಧರ್ಮಸ್ಥಳದ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ 2012ರ ಅ.9ರಂದು ಉಜಿರೆಯ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ತೆರಳುವಾಗ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಎಂಬಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ. ಹಾಗಾದರೆ, ಆಕೆಯನ್ನು ಕೊಂದವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...