ಹಾಸನ | ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಮರು ಜಾರಿಗೆ ಆಗ್ರಹಿಸಿ ಧರಣಿ

Date:

  • ಮುಸ್ಲಿಂ ಸಮುದಾಯ ಮುಖ್ಯವಾಹಿನಿಗೆ ಬರದಂತೆ ತಡೆಯಲು ಷಡ್ಯಂತ್ರ
  • ನಿರ್ದಿಷ್ಟ ಸಮುದಾಯ ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿ

ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ.

- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದು ಅಸಂವಿಧಾನಿಕ. ಇದೊಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

“ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿವೆ. ವಾಸ್ತವಾಂಶ ಹೀಗಿದ್ದರೂ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಲಾಗಿದೆ” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು ಹೆಚ್ಚಳಕ್ಕೆ ಆಗ್ರಹ

“ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಬಾರದು. ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನಿಗದಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಧರಣಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಿದ್ದಿಕ್ ಆನೆಮಹಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯಾದ್ ಫರೀದ್, ಸಮಿತಿ ಸದಸ್ಯ ಫೈರೋಜ್ ಪಾಶ, ಶಜಿಲ್ ಅಹಮದ್, ಅಮಿರ್ ಜಾನ್, ಅಮಾನುಲ್ಲಾ ಬಾಬು, ಸೈಯಾದ್ ಸಪೀರ್, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರದೀಪ್ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...